ಕಾಂಗ್ರೆಸ್ ಗೆ ಮಾನ ಮರ್ಯಾದೆ ಇದೆಯಾ? ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದೆಯಾ?: ಡಾ. ಅಶ್ವತ್ಥನಾರಾಯಣ ಆಕ್ರೋಶ
ಬೆಂಗಳೂರು, ಜುಲೈ 27: ಉಡುಪಿ ಘಟನೆ ವಿಚಾರವಾಗಿ ಇದು ಹುಡುಗಾಟಿಕೆ, ಮಕ್ಕಳಾಟ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು, ಇವರಿಗೆ ಮಾನ ಮರ್ಯಾದೆ ಇದೆಯಾ? ಹೆಣ್ಣುಮಕ್ಕಳ ಬಗ್ಗೆ ಕಿಂಚಿತ್ ಗೌರವ ಇದೆಯಾ? ಎಂದು ಮಾಜಿ ಸಚಿವ ಡಾ. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇವರ ನಾಯಕರು ಸೋನಿಯಾ, ಪ್ರಿಯಾಂಕ ಕೂಡ ಹೆಣ್ಣುಮಕ್ಕಳು, ಇವರಿಗೆ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ಇದೆಯಾ? ಎಂದು ಪ್ರಶ್ನಿಸಿದ ಅವರು, ಗೃಹ ಇಲಾಖೆ ಕ್ರಮ ನೋಡಿದರೆ ಸರ್ಕಾರ ಬದುಕಿದೆಯಾ ಇಲ್ಲವಾ ಎನ್ನುವ ಅನುಮಾನ ಬರುತ್ತಿದೆ, ಉಡುಪಿ ಘಟನೆ ನೋಡಿಯೂ ಸರ್ಕಾರದ ಆಶ್ಚರ್ಯಕರ ನಡೆ ಖಂಡನೀಯ ಎಂದು ಆಕ್ರೋಶ ಹೊರ ಹಾಕಿದರು.

ಸಿದ್ದರಾಮಯ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಇದು ಕೋಮುವಾದಿ ಸರ್ಕಾರ, ಜಿಹಾದಿ ಸರ್ಕಾರ ಎನ್ನುವುದು ಉಡುಪಿ ಘಟನೆ ನಿದರ್ಶನ, ಮೂವರು ಆರೋಪಿತ ವಿದ್ಯಾರ್ಥಿನಿಯರ ಮೇಲೆ ಪ್ರಕರಣ ದಾಖಲಿಸದೆ ಘಟನೆಯೇ ಆಗಿಲ್ಲ ಎನ್ನುವ ಮಾಹಿತಿ ನೀಡಿದರು, ತಪ್ಪೊಪ್ಪಿಕೊಂಡಿದ್ದಾರೆ, ವೀಡಿಯೋ ಡಿಲೀಟ್ ಆಗಿದೆ, ವೈರಲ್ ಆಗಿಲ್ಲ, ಸಂತ್ರಸ್ಥೆ ದೂರು ನೀಡಿಲ್ಲ ಹಾಗಾಗಿ ಪ್ರಕರಣ ದಾಖಲಿಸಲ್ಲ ಎನ್ನುವ ನಡೆ ಖಂಡನೀಯ ಎಂದು ಕಿಡಿಕಾರಿದ್ಧಾರೆ.
ಈ ಕುರಿತು ಪ್ರತಿಭಟನೆ ಮಾಡಿದ ವಿದ್ಯಾರ್ಥಿನಿಯರನ್ನು ಬೆದರಿಸಿದ್ದಾರೆ, ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ, ಇದು ಖಂಡನೀಯ, ಇದು ಸರ್ಕಾರವಾ? ಚುನಾಯಿತ ಸರ್ಕಾರ ನಡೆದುಕೊಳ್ಳುವ ರೀತಿಯ. ಡಿಕ್ಟೇಟರ್ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ, ಪ್ರಕರಣ ಬೆಳಕಿಗೆ ತಂದ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾರೆ, ಈಗ ಪ್ರತಿರೋಧ ಹೆಚ್ಚಾದ ನಂತರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.
ಇವರ ಮನೆಯ ಮಕ್ಕಳು ಶೌಚಾಲಯಕ್ಕೆ ಹೋದಾಗ ವೀಡಿಯೋ ಮಾಡಿದರೆ ಆಗಲೂ ಸಣ್ಣ ವಿಷಯ ಎನ್ನಲಾಗುತ್ತಾ? ಎಂದು ಪ್ರಶ್ನಿಸಿದರ ಅವರು, ಇಷ್ಟೆಲ್ಲಾ ಆದರೂ ಏನೂ ಆಗಿಲ್ಲ ಎನ್ನುವ ಸರ್ಕಾರ ವಜಾ ಮಾಡಬೇಕು, ಗೃಹ ಸಚಿವರ ವಜಾ ಮಾಡಬೇಕು, ಇದು ಜಿಹಾದಿ ಸರ್ಕಾರ, ಯಾರನ್ನು ಬೇಕಾದರೂ ಕೊಲೆ ಮಾಡಿ, ರೇಪ್ ಮಾಡಿ ಎನ್ನುವ ಧೋರಣೆ ತಳೆದಿರುವ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ.
ಇನ್ನೂ ತಕ್ಷಣ ಪ್ರಕರಣ ಬಯಲಿಗೆಳೆದ ವಿದ್ಯಾರ್ಥಿನಿ ಮೇಲಿನ ದೂರು ವಾಪಸ್ ಪಡೆಯಬೇಕು, ಪ್ರಕರಣ ಸಿಬಿಐ, ಎನ್ಐಎಗೆ ವಹಿಸಬೇಕು. ನಾವು ಈ ಹುಡುಗಿ ವೀಡಿಯೋ ತೆಗೆಯುವ ಉದ್ದೇಶ ಹೊಂದಿರಲಿಲ್ಲ, ಬೇರೆ ಹುಡುಗಿ ವೀಡಿಯೋ ತೆಗೆಯಬೇಕಿತ್ತು ಎಂದುಕೊಂಡಿದ್ದೆವು ಎಂದು ಆರೋಪಿತ ವಿದ್ಯಾರ್ಥಿನಿಯರು ಹೇಳಿದ್ದಾರೆ ಹಾಗಾಗಿ ಇದು ವ್ಯವಸ್ಥಿತ ಪಿತೂರಿ, ಪೂರ್ವನಿಯೋಜಿತ ಕೃತ್ಯ, ಜಿಹಾದಿ ಮನಸ್ಥಿತಿ ಇದೆ, ಅವರ ಟಾರ್ಗೆಟ್ ಬೇರೆ ಆಗಿದ್ದರು ಹಾಗಾಗಿ ಕೇಸ್ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications