ಮೈತ್ರಿ ಅಭ್ಯರ್ಥಿಯಾಗಿ ಮಂಜುನಾಥ್ ಬಹುತೇಕ ಫಿಕ್ಸ್: ಕಮಲ-ದಳ ನಾಯಕರು ಚರ್ಚಿಸಿದ್ದೇನು?
ಬೆಂಗಳೂರು, ಮಾರ್ಚ್ 06: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ತಯಾರಿ ನಡೆಸುತ್ತಿರುವ ಮೈತ್ರಿ ನಾಯಕರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕುರಿತು ಚರ್ಚೆ ನಡೆಸಿದ್ದು, ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಸ್ಪರ್ಧಿಸುವುದು ಬಹುತೇಕ ಫಿಕ್ಸ್ ಆಗಿದೆ.
28 ಕ್ಷೇತ್ರಗಳ ಪೈಕಿ ಎಲ್ಲಾ ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಬಿಜೆಪಿ- ಜೆಡಿಎಸ್ ನಾಯಕರು ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವು ಸಾಧಿಸುವ ಮೂಲಕ ಡಿ ಕೆ ಶಿವಕುಮಾರ್ ಠಕ್ಕರ್ ಕೊಡುವ ನಿಟ್ಟಿನಲ್ಲಿ ಡಾ. ಸಿಎನ್ ಮಂಜುನಾಥ್ ಮೈತ್ರಿ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ನ ಡಿಕೆ ಸುರೇಶ್ ಅಭ್ಯರ್ಥಿಯಾದರೇ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಜುನಾಥ್ ಅವರನ್ನ ಕಣಕ್ಕಿಳಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ಅಂಶಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರ ಜತೆ ಮಂಗಳವಾರ ರಾತ್ರಿ ಮಹತ್ವದ ಸಮಾಲೋಚನೆ ನಡೆದಿದ್ದು, ಈ ಸಭೆಯಲ್ಲಿ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ಡಿ.ನಾಗರಾಜಯ್ಯ, ಮಾಜಿ ಸಂಸದ ಕುಪೇಂದ್ರರೆಡ್ಡಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಗಡಿಯ ಮಾಜಿ ಶಾಸಕ ಮಂಜುನಾಥ್, ಗೊಟ್ಟಿಗೆರೆ ಮಂಜುನಾಥ, ಕುಣಿಗಲ್ ಜಗದೀಶ್, ನಾಗರಾಜ್ ಕನಕಪುರ, ಸಿದ್ದಮರೀ ಗೌಡ ಕನಕಪುರ, ಜಯಮುತ್ತು, ಗೌತಮ್, ಪ್ರಸಾದ್ ಗೌಡ, ಕೃಷ್ಣಕುಮಾರ್, ಕೆ.ಪಿ.ರಾಜು, ಡಾ.ನಾರಾಯಣಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಇನ್ನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಆಗಲಿದ್ದು, ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಎಲ್ಲರೂ ಪಣ ತೊಟ್ಟು ಅಭ್ಯರ್ಥಿಯನ್ನು ಗೆಲ್ಲಿಸುವ ಹೊಣೆ ನಮ್ಮದೆಂದು ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದರು.
ಪ್ರಧಾನಿಗಳಾದ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಕೇಂದ್ರ ಗೃಹರಾದ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರ ಜತೆ ಚರ್ಚೆ ನಡೆಸಿದ ನಂತರ ಅಭ್ಯರ್ಥಿ ಆಯ್ಕೆ, ಘೋಷಣೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಸಭೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು. ಯಾರೇ ಅಭ್ಯರ್ಥಿ ಆದರೂ ಅವರು ಎನ್ ಡಿಎ ಅಭ್ಯರ್ಥಿ ಆಗಿರುತ್ತಾರೆ, ಅವರು ನಮ್ಮ ಒಮ್ಮತದ ಅಭ್ಯರ್ಥಿ ಆಗಿರುತ್ತಾರೆ ಎಂದ ಹೆಚ್ಡಿಕೆ, ನಾವೆಲ್ಲರೂ ಮೈತ್ರಿ ಅಭ್ಯರ್ಥಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸಲು ಶ್ರಮಿಸೋಣ ಎಂದು ಹೇಳಿದರು.
ಅಭ್ಯರ್ಥಿ ಘೋಷಣೆ ಬಗ್ಗೆ ವಿಳಂಬ ಬೇಡ ಎಂದು ಸಲಹೆ ನೀಡಿದ ನಾಯಕರು; ಅಭ್ಯರ್ಥಿಯನ್ನು ಇಟ್ಟುಕೊಂಡು ನಾವು ಜನರ ಮುಂದೆ ಹೋಗಬೇಕು. ಚುನಾವಣೆ ದಿನ ಘೋಷಣೆ ಆಗುವ ಮುನ್ನವೇ ಅಭ್ಯರ್ಥಿ ಘೋಷಣೆ ಆಗಬೇಕು ಎಂದು ನಾಯಕರು ನೀಡಿದ ಸಲಹೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡ ಸಹಮತ ವ್ಯಕ್ತಪಡಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications