ಡಾ. ಅಂಬೇಡ್ಕರ್ ಜಯಂತಿ ಸರಳವಾಗಿ ಆಚರಿಸಿ: ಡಿಸಿಎಂ
ಬೆಂಗಳೂರು. ಏ.5: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಣ ಗೊಳಿಸಲು ರಾಷ್ಟ್ರದಾದ್ಯಂತ ಲಾಕ್ ಡೌನ್ ಅನುಷ್ಠಾನ ದಲ್ಲಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಏ.14 ರಂದು ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಬಹಳಷ್ಟು ಸರಳವಾಗಿ ಹೆಚ್ಚಿನ ಸಂದಣಿ ಸೇರದಂತೆ ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ ವಾಗಿದೆ. ಈ ಹಿನ್ನೆಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಿಸಬೇಕು.

ಸಾರ್ವಜನಿಕರು, ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಈ ಮಹಾನ್ ಚೇತನರ ಅಭಿಮಾನಿಗಳು , ಅನುಯಾಯಿಗಳು ಸಹಕರಿಸಿ. ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಬೇಕು ಎಂದು ಡಿಸಿಎಂ ಕಾರಜೋಳ ಅವರು ಮನವಿ ಮಾಡಿದ್ದಾರೆ.












Click it and Unblock the Notifications