ವೈದ್ಯಕೀಯ ಕ್ಷೇತ್ರಕ್ಕೆ ಪುಷ್ಟಿಕೊಡುವ ಬಯೋ ಫಾರ್ಮಾ ಸೇರಿ ಹಲವು ಘೋಷಣೆಗಳು: ಡಾ ದೇವಿಪ್ರಸಾದ್ ಶೆಟ್ಟಿ
"ಈ ವರ್ಷ ವೈದ್ಯಕೀಯ ಕ್ಷೇತ್ರಕ್ಕೆ ಚಿಂತನಶೀಲವಾಗಿ ಮತ್ತು ಸುದೀರ್ಘ ದೃಷ್ಟಿಕೋನದಿಂದ ಗಮನ ಹರಿಸಿ ಬಜೆಟ್ ಮಂಡಿಸಲಾಗಿದೆ. ಬಲಿಷ್ಠ ವೈದ್ಯಕೀಯ ವ್ಯವಸ್ಥೆಯು ಭಾರತದ ಆರ್ಥಿಕ ಮತ್ತು ಸಾಮಾಜಿಕ ದೃಢತೆಗೆ ಬಹಳ ಮುಖ್ಯ ಎಂಬುದನ್ನು ಸರ್ಕಾರದ ಗುರುತಿಸಿರುವುದನ್ನು ಈ ಬಜೆಟ್ ಪ್ರತಿಬಿಂಬಿಬಿಸಿದೆ. ಆರೋಗ್ಯ ರಕ್ಷಣೆಯನ್ನು ದೀರ್ಘಕಾಲೀನ ರಾಷ್ಟ್ರೀಯ ಆದ್ಯತೆಯಾಗಿ ಬಲಪಡಿಸುವತ್ತ ಗೌರವಾನ್ವಿತ ಹಣಕಾಸು ಸಚಿವರು ತೋರಿರುವ ಸಮತೋಲಿತ ಗಮನವನ್ನು ನಾವು ಶ್ಲಾಘಿಸುತ್ತೇವೆ.(ಬರಹ:ಡಾ. ದೇವಿ ಪ್ರಸಾದ್ ಶೆಟ್ಟಿ, ಸಂಸ್ಥಾಪಕರು ಮತ್ತು ಅಧ್ಯಕ್ಷರು, ನಾರಾಯಣ ಹೆಲ್ತ್)
₹10,000 ಕೋಟಿ ವೆಚ್ಚದ 'ಬಯೋ ಫಾರ್ಮಾ ಪವರ್' ಯೋಜನೆಯು ಬಯೋಲಾಜಿಕ್ಸ್ ಮತ್ತು ಬಯೋಸಿಮಿಲರ್ಗಳಲ್ಲಿ ದೇಶೀಯವಾದ ಬಲವಾದ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದ್ದು, ಇದು ಕ್ಯಾನ್ಸರ್ ಮತ್ತು ಅಪರೂಪದ ಕಾಯಿಲೆಗಳಿಗೆ ಸುಧಾರಿತ ಚಿಕಿತ್ಸೆಗಳ ಲಭ್ಯತೆಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ.

ಖಾಸಗಿ ವಲಯದ ಸಹಭಾಗಿತ್ವದಲ್ಲಿ ಪ್ರಾದೇಶಿಕ ವೈದ್ಯಕೀಯ ಹಬ್ಗಳನ್ನು ಅಭಿವೃದ್ಧಿಪಡಿಸುವ ಪ್ರಸ್ತಾವನೆಯು ಜಾಗತಿಕ ವೈದ್ಯಕೀಯ ಕ್ಷೇತ್ರದಲ್ಲಿ ಮೌಲ್ಯಯುತ ತಾಣವಾಗಿ ಭಾರತದ ಸ್ಥಾನವನ್ನು ಬಲಪಡಿಸಲಿದೆ. ಜೊತೆಗೆ ದೇಶದೊಳಗೆ ರೋಗ ತಡೆಗಟ್ಟುವಿಕೆ, ಪುನರ್ವಸತಿ ಮತ್ತು ನಿರಂತರ ಆರೈಕೆಯ ಮಾದರಿಗಳನ್ನು ಇದು ಉತ್ತಮಗೊಳಿಸುತ್ತದೆ. ತುರ್ತು ಮತ್ತು ಆಘಾತ ಚಿಕಿತ್ಸಾ ಕ್ಷೇತ್ರದ ಸಾಮರ್ಥ್ಯವನ್ನು 50% ರಷ್ಟು ಹೆಚ್ಚಿಸುವ ಮೂಲಕ ಜಿಲ್ಲಾ ಆಸ್ಪತ್ರೆಗಳನ್ನು ಬಲಪಡಿಸುವುದು, ಇದರೊಂದಿಗೆ ಎರಡನೇ ನಿಮ್ಹಾನ್ಸ್ ಮತ್ತು ಪ್ರಾದೇಶಿಕ ಮಾನಸಿಕ ಆರೋಗ್ಯ ಸೇವಾ ಕೇಂದ್ರಗಳ ಸ್ಥಾಪನೆಯು ಕಟ್ಟಕಡೆಯ ವ್ಯಕ್ತಿಗೂ ಸಿಗಬೇಕಾದ ವೈದ್ಯಕೀಯ ಸೇವೆ ದೊರಕಿಸಲಿದೆ ಮತ್ತು ಮಾನಸಿಕ ಆರೋಗ್ಯ ಸೇವೆಯಲ್ಲಿನ ನಿರ್ಣಾಯಕ ಕೊರತೆಗಳನ್ನು ನೀಗಿಸುತ್ತದೆ.
ಅಲೈಡ್ ಹೆಲ್ತ್ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸುವ ಮತ್ತು ನಿರ್ಣಾಯಕ ವಿಭಾಗಗಳಲ್ಲಿ ತರಬೇತಿಯನ್ನು ಒದಗಿಸುವ ಕ್ರಮಗಳು ಕ್ಲಿನಿಕಲ್ ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ, ಉತ್ತಮ ಗುಣಮಟ್ಟದ ಆರೈಕೆಯನ್ನು ನೀಡಲು ಬೆಂಬಲ ನೀಡುತ್ತವೆ. ವೈದ್ಯಕೀಯ ಉದ್ದೇಶದ ಹಣ ರವಾನೆಗಳ ಮೇಲಿನ ಟಿಸಿಎಸ್ ಅನ್ನು ತರ್ಕಬದ್ಧಗೊಳಿಸಿರುವುದು ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಹೆಚ್ಚಿನ ಅನುಕೂಲ ಮಾಡಿಕೊಡುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ, ಈ ಕ್ರಮಗಳು ಭಾರತದ ಆರೋಗ್ಯ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಕಡೆಗೆ ಒಂದು ಸುಸಂಬದ್ಧ ಹೆಜ್ಜೆಯಾಗಿದೆ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತವೆ."
ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್ಗೆ ಭೇಟಿ ನೀಡಿ.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ












Click it and Unblock the Notifications