ರಾಜ್ಯ ಸರಕಾರಗಳಿಂದ ಕಸಿದುಕೊಂಡಿದ್ದ ಹಕ್ಕನ್ನು ಕೇಂದ್ರ, ರಾಜ್ಯಗಳಿಗೆ ಮರಳಿಸಿದೆ
ಇತರೆ ಹಿಂದುಳಿದ ವರ್ಗಗಳನ್ನು (ಒಬಿಸಿ) ಗುರುತಿಸುವ ಮತ್ತು ರಾಜ್ಯಕ್ಕೆ ಸೀಮಿತವಾಗಿ ಒಬಿಸಿ ಪ್ರತ್ಯೇಕ ಪಟ್ಟಿ ರೂಪಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ಮತ್ತೆ ದೊರಕಿಸಿಕೊಡುವ ಉದ್ದೇಶದ ಸಂವಿಧಾನದ 127ನೇ ತಿದ್ದುಪಡಿ ಮಸೂದೆಯನ್ನು ಲೋಕಸಭೆ ಅನುಮೋದಿಸಿದೆ.
ಈ ಮಸೂದೆಯನ್ನು ರಾಜ್ಯಸಭೆಯೂ ಅಂಗೀಕರಿಸಿ ಆ ಬಳಿಕ ರಾಷ್ಟ್ರಪತಿಗಳ ಅಂಕಿತ ಬಿದ್ದರೆ, ಮೂರು ವರ್ಷಗಳ ಹಿಂದೆ ರಾಜ್ಯ ಸರ್ಕಾರಗಳಿಂದ ಕಸಿದುಕೊಂಡಿದ್ದ ಸಾಂವಿಧಾನಿಕ ಹಕ್ಕೊಂದನ್ನು ಕೇಂದ್ರವು ರಾಜ್ಯಗಳಿಗೆ ಮರಳಿಸಿದಂತಾಗುತ್ತದೆ.
ಹಿಂದುಳಿದ ವರ್ಗಗಳನ್ನು ಗುರುತಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ನೀಡುವುದು ತಾಂತ್ರಿಕವಾಗಿ ಮತ್ತು ನ್ಯಾಯಬದ್ಧವಾಗಿ ಸರಿಯಾದ ವಿಚಾರವೇ ಆಗಿದೆ. ಕಾರಣ ಒಂದು ಪ್ರಾದೇಶಿಕ ಗಡಿಯೊಳಗೆ ವಾಸಿಸುವ ನಿರ್ದಿಷ್ಟ ಭಾಷೆಯ ಜನ ಸಮುದಾಯಗಳ ಬದುಕಿನ ವಿನ್ಯಾಸಗಳು.

ಮತ್ತು, ಒಂದು ರಾಜ್ಯದ ಆರ್ಥಿಕತೆಯ ಪರಿಮಿತಿಯಲ್ಲಿ ಬದುಕುವ ಮತ್ತು ಹಾಗೆ ಬದುಕುವಾಗ ಅವರ ಬದುಕಿನಲ್ಲಿ ಉಂಟಾಗುವ ಬದಲಾವಣೆಗಳನ್ನು ಆಯಾ ರಾಜ್ಯದೊಳಗಿನ ತಜ್ಞರು ಅರ್ಥ ಮಾಡಿಕೊಳ್ಳುವಷ್ಟು ಸುಲಭವಾಗಿ ಹೊರಗಿನ ಮಂದಿ ಅರ್ಥ ಮಾಡಿಕೊಳ್ಳುವುದು ತುಸು ಕಷ್ಟ.
ಈ ಹಿನ್ನಲೆಯಲ್ಲಿ ಈಗಾಗಲೇ ತಜ್ಞರ ಆಯೋಗದ ಶಿಫಾರಸ್ಸಿನ ಮೇರೆಗೆ ಕೆಲ ನಿರ್ದಿಷ್ಟ ಜನ ಸಮುದಾಯಗಳಿಗೆ ನೀಡಲಾದ ಹಿಂದುಳಿದ ವರ್ಗ ಸ್ಥಾನ ಮಾನ ಪ್ರಕ್ರಿಯೆಯನ್ನು ಇನ್ನಷ್ಟು ಅರ್ಥ ಮಾಡಿಕೊಳ್ಳಲು ನಾವು ಎಲ್.ಜೆ.ಹಾವನೂರ್, ಚಿನ್ನಪ್ಪರೆಡ್ಡಿ ಹಾಗೂ ಇನ್ನೂ ಕೆಲ ಆಯೋಗದ ವರದಿಯನ್ನು ವಿವರವಾಗಿ ಓದಿಕೊಳ್ಳಬಹುದು.
ಹಾಗೆಯೇ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾತಿಯಾಧಾರಿತ ಜನಗಣತಿಗೆ 30 ಕೋಟಿ ರೂಪಾಯಿಗಳ ಅನುದಾನವನ್ನು ನಿಗದಿ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರವು ಆ ಅನುದಾನವನ್ನು ಬಳಸಿಕೊಂಡು ಸಮರ್ಪಕ ರೀತಿಯಲ್ಲಿ ಜಾತಿಯಾಧಾರಿತವಾದ ಜನಗಣತಿಯನ್ನು ಮಾಡಲಿ.
ನಂತರ, ಆ ಜನ ಸಂಖ್ಯೆಯ ಮತ್ತು ಅವರ ಈಗಿನ ಸಾಮಾಜಿಕ ಸ್ಥಿತಿಗತಿಗಳ ಆಧಾರದ ಮೇಲೆ ಮೀಸಲಾತಿ ಹಾಗೂ ಇನ್ನಿತರೆ ಸಂವಿಧಾನಾತ್ಮಕ ಅನುಕೂಲಗಳನ್ನು ಕಲ್ಪಿಸುವೆಡೆ ಯೋಚಿಸಿದರೆ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಅದು ಹೆಚ್ಚು ಅರ್ಥಪೂರ್ಣ ಎನಿಸಿಕೊಳ್ಳುತ್ತದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications