ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವೇಗೌಡ ಕುಟುಂಬದ ವಿರುದ್ಧ ಡಾ.ಕೆ.ಸುಧಾಕರ್ ಟ್ವೀಟ್!

|
Google Oneindia Kannada News

Recommended Video

ಎಚ್ ಡಿ ದೇವೇಗೌಡ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಚಿಕ್ಕಬಳ್ಳಾಪುರ ಶಾಸಕ ಡಾ ಕೆ ಸುಧಾಕರ್ | Oneindia Kannada

ಬೆಂಗಳೂರು, ಮಾರ್ಚ್ 12 : ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಅವರು ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ನ್ಯಾಷನಲ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ನಾಯಕ ಶರದ್ ಪವಾರ್ ಅವರ ವಿಚಾರ ಮುಂದಿಟ್ಟುಕೊಂಡು ದೇವೇಗೌಡರ ಕುಟುಂಬದ ಬಗ್ಗೆ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ದೇವೇಗೌಡರ ಕುಟುಂಬ ರಾಜಕಾರಣದ ಬಗ್ಗೆ ಟೀಕೆ ಮಾಡಿದ್ದಾರೆ.

ಲೋಕಸಭಾ ಚುನಾವಣೆ 2019 : ಜೆಡಿಎಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಲೋಕಸಭಾ ಚುನಾವಣೆ 2019 : ಜೆಡಿಎಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

'ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ನಾನು ಈಗಾಗಲೇ 14 ಬಾರಿ ಸ್ಪರ್ಧಿಸಿದ್ದೇನೆ. ಮುಂದಿನ ಪೀಳಿಗೆಯವರಿಗೆ ಅವಕಾಶ ಮಾಡಿಕೊಡಬೇಕು. ಈ ಚುನಾವಣೆಯಲ್ಲಿ ನನ್ನ ಕುಟುಂಬದ ಇಬ್ಬರು ಸದಸ್ಯರು ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲು ಇದು ಸೂಕ್ತ ಸಮಯ' ಎಂದು ಶರದ್ ಪವಾರ್ ಹೇಳಿದ್ದರು.

ಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಈ ಹೇಳಿಕೆಯನ್ನು ಮುಂದಿಟ್ಟುಕೊಂಡು ಡಾ.ಕೆ.ಸುಧಾಕರ್ ಅವರು ಎಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 'ಶರದ್ ಪವಾರ್ ಹೇಳಿಕೆ ನಮ್ಮ ರಾಜ್ಯದ ಕೆಲ ಬುದ್ಧಿವಂತ ರಾಜಕಾರಣಿಗಳಿಗೆ ಸ್ಪೂರ್ತಿ ಆಗಲಿ' ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಲೋಕಸಭಾ ಚುನಾವಣೆ 2019 : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ

ಎಷ್ಟು ಜನ ಸ್ಪರ್ಧೆ ಮಾಡಬೇಕು?

ಎಷ್ಟು ಜನ ಸ್ಪರ್ಧೆ ಮಾಡಬೇಕು?

ಒಂದು ಕುಟುಂಬದಿಂದ ಎಷ್ಟು ಜನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂಬುದು ಪ್ರಶ್ನೆಯಾಗಿದೆ. ನಿಮ್ಮ ಬುದ್ಧಿವಂತ ನಿರ್ಧಾರಕ್ಕೆ ಧನ್ಯವಾದಗಳು ಶರದ್ ಪವಾರ್ ಜೀ ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಶರದ್ ಪವಾರ್ ಜೀ ನಿಮ್ಮ ನಿರ್ಧಾರದಿಂದ ಕರ್ನಾಟಕದಲ್ಲಿಯೂ ಕೆಲವು ಬುದ್ಧಿವಂತ ರಾಜಕಾರಣಿಗಳು ಸ್ಪೂರ್ತಿ ಪಡೆಯುತ್ತಾರೆ ಎಂದು ಕೊಳ್ಳುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಸ್ಪೂರ್ತಿ ಪಡೆಯಬೇಕು

ಶರದ್ ಪವಾರ್ ಜೀ ನಿಮ್ಮ ನಿರ್ಧಾರದಿಂದ ಕರ್ನಾಟಕದಲ್ಲಿಯೂ ಕೆಲವು ಬುದ್ಧಿವಂತ ರಾಜಕಾರಣಿಗಳು ಸ್ಪೂರ್ತಿ ಪಡೆಯುತ್ತಾರೆ ಎಂದು ಕೊಳ್ಳುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ.

ದೇವೇಗೌಡರ ಕುಟುಂಬದಿಂದ ಎಷ್ಟು ಜನ

ದೇವೇಗೌಡರ ಕುಟುಂಬದಿಂದ ಎಷ್ಟು ಜನ

2019ರ ಲೋಕಸಭಾ ಚುನಾವಣೆಗೆ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದಿಂದ ಮೂವರು ಕಣಕ್ಕಿಳಿಯುವ ಸಾಧ್ಯತೆ ಇದೆ. ಹಾಸನದಿಂದ ಪ್ರಜ್ವಲ್ ರೇವಣ್ಣ, ಬೆಂಗಳೂರು ಉತ್ತರದಿಂದ ದೇವೇಗೌಡ, ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಅವರು ಕಣಕ್ಕಿಳಿಯಲಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಗರಂ

ಕುಮಾರಸ್ವಾಮಿ ವಿರುದ್ಧ ಗರಂ

ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಡಾ.ಕೆ.ಸುಧಾಕರ್ ಅವರು ವಾಗ್ದಾಳಿ ನಡೆಸಿದ್ದರು. 'ನನಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆ ತಪ್ಪಲು ಮುಖ್ಯಮಂತ್ರಿ ಕುಮಾರಸ್ವಾಮಿಯೇ ನೇರ ಕಾರಣ. ಪುಟಗೋಸಿ ನಿಗಮ ಮಂಡಳಿ ಯಾರಿಗೆ ಬೇಕು. ನನಗೆ ಜನರ ಬೆಂಬಲ ಸಿಕ್ಕಿದೆ' ಎಂದು ಹೇಳಿದ್ದರು.

English summary
Chikkaballapur MLA from Congress Dr.K.Sudhakar tweet against JD(S) supremo H.D.Deve Gowda family. Sharad Pawar ji Hope you will inspire & prevail some wisdom in Karnataka politicians too tweeted Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X