Dr. Suresh Hanagavadi Profile: ಪದ್ಮಶ್ರೀ ಪುರಸ್ಕೃತ ಕನ್ನಡಿಗ ಡಾ. ಸುರೇಶ್ ಹನಗವಾಡಿ ಯಾರು, ಹಿನ್ನೆಲೆ - ಸಾಧನೆ ವಿವರ
Dr. Suresh Hanagavadi Profile: 2026ನೇ ಸಾಲಿನ ಪದ್ಮಶ್ರೀ ಪ್ರಕಟವಾಗಿದ್ದು, ಈ ಬಾರಿ ಮೂವರು ಕನ್ನಡಿಗರು ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರಲ್ಲಿ ಡಾ. ಸುರೇಶ್ ಹನಗವಾಡಿ ಅವರು ಸಹ ಒಬ್ಬರು. ಡಾ. ಸುರೇಶ್ ಹನಗವಾಡಿ ಅವರು ಕರ್ನಾಟಕದ ಪ್ರಸಿದ್ಧ ವೈದ್ಯರು, ಹಿಮೋಫಿಲಿಯಾ (ರಕ್ತಸ್ರಾವ, ರಕ್ತ ಹೆಪ್ಪುಗಟ್ಟುವಿಕೆ ಕಾಯಿಲೆ / Hemophilia) ರೋಗದ ಕುರಿತು ಜಾಗೃತಿ ಮೂಡಿಸುತ್ತಿರುವ ಸಮಾಜ ಸೇವಕರು. ಡಾ. ಸುರೇಶ್ ಹನಗವಾಡಿ ಅವರು ಸಾಹಿತಿ ಆಗಿಯೂ ಚಿರಪರಿಚಿತರು.
ಡಾ. ಸುರೇಶ್ ಹನಗವಾಡಿ ಅವರು ದಾವಣಗೆರೆಯ ಜೆ.ಜೆ.ಎಂ. ವೈದ್ಯಕೀಯ ಕಾಲೇಜಿನಲ್ಲಿ ರೋಗಶಾಸ್ತ್ರ (Pathology) ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೇ ದಾವಣಗೆರೆಯಲ್ಲಿ ಹಿಮೋಫಿಲಿಯಾ ಸೊಸೈಟಿಯನ್ನು ಸ್ಥಾಪಿಸುವ ಮೂಲಕ ರಕ್ತಸ್ರಾವದ ಕಾಯಿಲೆಯಿಂದ ಬಳಲುತ್ತಿರುವ ಸಾವಿರಾರು ರೋಗಿಗಳಿಗೆ ಉಚಿತ ಚಿಕಿತ್ಸೆ ಮತ್ತು ಮಾರ್ಗದರ್ಶನ ನೀಡುತ್ತಿದ್ದಾರೆ. ಈ ಮೂಲಕ ಸಾವಿರಾರು ಜನರಿಗೆ ಆಶಾಕಿರಣವಾಗಿದ್ದಾರೆ.

ವೈದ್ಯಕೀಯ ವೃತ್ತಿಯ ಜೊತೆಗೆ ಡಾ. ಸುರೇಶ್ ಅವರು ಉತ್ತಮ ಬರಹಗಾರರು. ವಿಜ್ಞಾನ ಮತ್ತು ವೈದ್ಯಕೀಯ ವಿಷಯಗಳಿಗೆ ಸಂಬಂಧಿಸಿದಂತೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ವಿಶೇಷವೆಂದರೆ ಇವರು ನಾಟಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದಾರೆ. ಇವರ ಸಮಾಜ ಸೇವೆಗಳನ್ನು ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಮುಖ ಪ್ರಶಸ್ತಿಗಳು ಸಂದಿವೆ.
ಡಾ. ಸುರೇಶ್ ಹನಗವಾಡಿ ಅವರು ಆರೋಗ್ಯ ಸಮಸ್ಯೆಗಳು ಹೆಚ್ಚಾಗಿದ್ದ ಕುಟುಂಬದಲ್ಲಿ ಜನಿಸಿದರು ಮತ್ತು ಅವರು ಆರಂಭದಲ್ಲಿಯೇ ಹಿಮೋಫಿಲಿಯಾ ರೋಗದ ಕಟುರ ವಾಸ್ತವಗಳನ್ನು ಎದುರಿಸಿದ್ದರು. ಹಿಮೋಫಿಲಿಯಾದಿಂದ ಬಳಲುತ್ತಿದ್ದ ಅವರ ಮಾವ, ಸಕಾಲಿಕ ವೈದ್ಯಕೀಯ ಚಿಕಿತ್ಸೆ ಸಿಗದೆ ಮಾರಣಾಂತಿಕ ರಮೃತಪಟ್ಟಿದ್ದರು. ಈ ಆಘಾತಕಾರಿ ಅನುಭವವು ಡಾ. ಸುರೇಶ್ ಅವರನ್ನು ವೈದ್ಯಕೀಯ ವೃತ್ತಿಜೀವನ ಆಯ್ಕೆ ಮಾಡಿಕೊಳ್ಳುವಂತೆ ಮಾಡಿತು. ಬೇರೆ ಯಾರೂ ಅಂತಹ ದುರಂತವನ್ನು ಎದುರಿಸಬಾರದು ಎನ್ನುವ ಕಾರಣಕ್ಕೆ ವೈದ್ಯಕೀಯ ಕ್ಷೇತ್ರವನ್ನು ಸುರೇಶ್ ಅವರು ಆಯ್ಕೆ ಮಾಡಿಕೊಂಡರು.
ರಕ್ತಸ್ರಾವ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ನೀಡುವುದರಲ್ಲಿ ಡಾ. ಸುರೇಶ್ ಅವರು ನಿಪುಣರಾಗಿದ್ದಾರೆ. 1989ರಲ್ಲಿ ಹಿಮೋಫಿಲಿಯಾ ಹೊಂದಿರುವ ವ್ಯಕ್ತಿಗಳಿಗೆ ಚಿಕಿತ್ಸೆ, ಶಿಕ್ಷಣ ಮತ್ತು ಸೇವೆ ನೀಡುವ ಉದ್ದೇಶದಿಂದ ಅವರು ಕರ್ನಾಟಕ ಹಿಮೋಫಿಲಿಯಾ ಸೊಸೈಟಿ (ಕೆಎಚ್ಎಸ್) ಅನ್ನು ಸ್ಥಾಪಿಸಿದರು. ದುಬಾರಿ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೆ ಇರುವವರಿಗೆ ಸರ್ಕಾರದ ನೆರವನ್ನು ಒದಗಿಸುವಲ್ಲಿ ಇವರ ಪಾತ್ರವು ಪ್ರಮುಖವಾಗಿದೆ. ಅಲ್ಲದೇ ರಕ್ತಸ್ರಾವ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ನೀಡುತ್ತಿರುವ ಸೇವೆಯು ಕರ್ನಾಟಕವನ್ನು ಭಾರತದಾದ್ಯಂತ ಹಿಮೋಫಿಲಿಯಾ ಆರೈಕೆಗೆ ಮಾದರಿಯನ್ನಾಗಿ ಮಾಡಿದೆ.
ಡಾ. ಸುರೇಶ್ ಅವರು ಕರುಣಾಮಯಿ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ. ರೋಗಿಗಳಿಗೆ ಉಚಿತ ಸಮಾಲೋಚನೆಗಳು ಮತ್ತು ಸೇವೆಗಳನ್ನು ಒದಗಿಸುತ್ತಿದ್ದಾರೆ. ವ್ಯಾಪಕವಾದ ಸಂಶೋಧನೆ ಮತ್ತು ಜಾಗೃತಿ ಅಭಿಯಾನಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಮುಖಾಂಶ
ಕ್ಷೇತ್ರ: ವೈದ್ಯಕೀಯ (ರೋಗಶಾಸ್ತ್ರ), ಸಮಾಜ ಸೇವೆ, ಸಾಹಿತ್ಯ
ವಿಶೇಷ ಸಾಧನೆ: ಕರ್ನಾಟಕ ಹಿಮೋಫಿಲಿಯಾ ಸೊಸೈಟಿಯ ಸ್ಥಾಪನೆ (1989)
ಪ್ರಶಸ್ತಿಗಳು: ಪದ್ಮಶ್ರೀ (2026), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಮೂಲ ಊರು: ಹನಗವಾಡಿ, ದಾವಣಗೆರೆ ಜಿಲ್ಲೆ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications