Clay Pot: ಮಣ್ಣಿನ ಮಡಕೆ ನೀರು ಕುಡಿಯುತ್ತೀರಾ? ಈ ಲಾಭಗಳನ್ನು ತಿಳಿದರೆ ಆಶ್ಚರ್ಯಪಡುವಿರಿ
ಬೇಸಿಗೆ ಕಾಲ ಆರಂಭವಾಗುತ್ತಿದಂತೆ ದೇಹದಲ್ಲಿ ನೀರಿನ ಅಂಶದ ಅಗತ್ಯತೆ ಹೆಚ್ಚಾಗುತ್ತದೆ. ಹೆಚ್ಚುತ್ತಿರುವ ಬಿಸಿಲಿನಿಂದ ನಮ್ಮ ದೇಹವು ನಿರ್ಜಲೀಕರಣದಿಂದ ರಕ್ಷಿಸಿಕೊಳ್ಳವುದು ಬಹಳ ಮುಖ್ಯ. ಈ ಸಂದರ್ಭದಲ್ಲಿ ಜನರು ಹೆಚ್ಚಾಗಿ ಫ್ರಿಡ್ಜ್ ನೀರು ಅಥವಾ ಐಸ್ಡ್ ಪಾನೀಯಗಳನ್ನು ಕುಡಿಯುವುದಕ್ಕೆ ಆಯ್ಕೆ ಮಾಡಿಕೊಳ್ಳತ್ತಾರೆ. ಆದರೆ ತಜ್ಙರ ಪ್ರಕಾರ ಮಣ್ಣಿನ ಮಡಕೆಯಲ್ಲಿ ಸಂಗ್ರಹಿಸಿದ ನೀರು ಕುಡಿಯುವುದು ಆರೋಗ್ಯಕ್ಕೆ ಹೆಚ್ಚು ಅನೂಕೂಲಕರ.
ನೈಸರ್ಗಿಕ ತಂಪು ನೀರು
ಮಣ್ಣಿನ ಮಡಕೆಯ ನೀರು ನೈಸರ್ಗಿಕವಾಗಿ ತಂಪಾಗಿರುತ್ತದೆ. ಪ್ರಿಡ್ಜ್ ನೀರಿನಂತೆ ಅತಿಯಾಗಿ ತಣ್ಣಗಿರದೆ, ದೇಹಕ್ಕೆ ಹಿತವಾದ ತಂಪು ನೀಡುತ್ತದೆ. ಇದರಿಂದ ಶೀತ, ಗಂಟಲು ನೋವು, ಮತ್ತು ಕಫದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಕಡಿಮೆ.

ನೀರಿನ ಗುಣಮಟ್ಟ ಸುಧಾರಣೆ
ಮಣ್ಣಿನ ಪಾತ್ರೆಯು ರಂಧ್ರಯುಕ್ತ ಸ್ವಭಾವವನ್ನು ಹೊಂದಿರುವುದರಿಂದ ಅದು ನೀರನ್ನು ನೀರನ್ನು ನ್ಯಾಚುರಲ್ ಆಗಿ ಕ್ಲೀನ್ ಮಾಡಲು ಸಹಾಯ ಮಾಡುತ್ತದೆ. ಇದು ನೀರಿನಲ್ಲಿರುವ ಕಲ್ಮಶಗಳನ್ನು ತೆಗೆದು ಹಾಕುತ್ತದೆ. ಹಾಗೂ ನೀರಿನಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾಗಳ ಬೆಳವಣಿಗೆಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ದೇಹದಲ್ಲಿನ ಶಕ್ತಿಯ ಸ್ಥಿರತೆ
ಬೇಸಿಗೆಯಲ್ಲಿ ಬೆವರಿನ ಮೂಲಕ ದೇಹದಿಂದ ಎಲೆಕ್ಟ್ರೋಲೈಟ್ಗಳು ಕಡಿಮೆ ಅಗುತ್ತವೆ. ಮಣ್ಣಿನ ಮಡಕೆ ನೀರು ಕುಡಿಯುವುದರಿಂದ ದೇಹದಲ್ಲಿ ಎಲೆಕ್ಟ್ರೋಲೈಟ್ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಹಾಯವಾಗುತ್ತದೆ ಇದರಿಂದ ದಿನವಿಡೀ ಉತ್ಸಾಹದಿಂದ ಇರಬಹುದು.
ಜೀರ್ಣಕ್ರಿಯೆಗೆ ಸಹಕಾರಿ
ಮಣ್ಣಿನ ಮಡಕೆ ನೀರು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿಯಾಗಿದೆ. ಗ್ಯಾಸ್ಟ್ರಿಕ್, ಆಮ್ಲೀಯತೆ ಮತ್ತು ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ನಿಯಮಿತವಾಗಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆಯ ಆರೋಗ್ಯ ಉತ್ತಮವಾಗಿರುತ್ತದೆ.
ರೋಗನಿರೋಧಕ ಶಕ್ತಿ ಹೆಚ್ಚಳ
ಮಣ್ಣಿನಲ್ಲಿ ಇರುವ ಖನಿಜಾಂಶಗಳು ನೀರಿಗೆ ಸೇರಿ ದೇಹಕ್ಕೆ ಹೆಚ್ಚು ಲಾಭ ನೀಡುತ್ತವೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಸಹಕಾರಿ ಮತ್ತು ಬೇಸಿಗೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಅನೇಕ ಆರೋಗ್ಯ ಸಮಸ್ಯೆಗಳಿಂದ ದೇಹವನ್ನು ರಕ್ಷಿಸಲು ಇದು ನೆರವಾಗುತ್ತದೆ.
ಚರ್ಮ ಮತ್ತು ಉಸಿರಾಟ
ದೇಹದ ಉಷ್ಣತೆಯಿಂದ ಬೇಸಿಗೆಯಲ್ಲಿ ಅತಿ ಹೆಚ್ಚು ಬೆವರು ಕಾರಣದಿಂದ ಚರ್ಮದ ಸಮಸ್ಯೆಗಳು ಹೆಚ್ಚಾಗುತ್ತವೆ. ಮಣ್ಣಿನ ಮಡಕೆ ನೀರು ಕುಡಿಯುವುದರಿಂದ ದೇಹದ ತಾಪಮಾನ ಸ್ಥಿರತೆಯನ್ನು ಕಾಪಾಡಿಕೊಂಡು ಮತ್ತು ಚರ್ಮದ ಸಮಸ್ಯೆಗಳು ಕಡಿಮೆಯಾಗಬಹುದು. ಇದು ಗಂಟಲಿಗೆ ಹಿತ ನೀಡುವುದರಿಂದ ಉಸಿರಾಟದ ಕಿರಿಕಿರಿ ಉಂಟಾಗದಂತೆ ನೋಡಿಕೊಳ್ಳುತ್ತದೆ.
ಫ್ರಿಡ್ಜ್ ನೀರಿನ ಬದಲಾಗಿ
ಇಂದಿನ ದಿನಗಳಲ್ಲಿ ಹೆಚ್ಚಿನವರು ಫ್ರಿಡ್ಜ್ ಅಥವಾ ವಾಟರ್ ಪ್ಯೂರಿಫೈಯರ್ ನೀರನ್ನು ಬಳಸುತ್ತಾರೆ. ಆದರೆ ಮಣ್ಣಿನ ಮಡಕೆ ನೀರು ನೈಸರ್ಗಿಕವಾಗಿ ತಂಪಾಗುವುದರಿಂದ ಆರೋಗ್ಯಕ್ಕೆ ಹೆಚ್ಚು ಅನುಕೂಲಕರವಾಗಿದೆ ತಜ್ಞರ ಹೇಳುತ್ತಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ಶನಿವಾರ ಈ ಕೆಲಸಗಳನ್ನು ಮಾಡಿದರೆ ಬದಲಾಗಲಿದೆ ನಿಮ್ಮ ಅದೃಷ್ಟ: ಶನಿದೇವನ ಕೃಪೆಗೆ ಇಲ್ಲಿದೆ ಸರಳ ವಾಸ್ತು ಟಿಪ್ಸ್ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ














Click it and Unblock the Notifications