ಸರ್ ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಕಲ್ಲು ಹೊಡೆದ ಕುಡುಕ
ಮಂಡ್ಯ, ಡಿಸೆಂಬರ್, 04: ಕುಡಿದ ಮತ್ತಿನಲ್ಲಿ ಯಾರು ಏನು ಮಾಡುತ್ತಾರೋ ಅವರಿಗೇ ತಿಳಿದಿರುವುದಿಲ್ಲ. ಇಲ್ಲಿ ಕಂಠ ಮಟ್ಟ ಕುಡಿದ ಕುಡುಕನೊಬ್ಬ ಬಾರ್ ನಿಂದ ನೇರವಾಗಿ ಮನೆಗೆ ಹೋಗದೆ ಗ್ರಾಮದಲ್ಲಿದ್ದ ಸರ್ ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಕಲ್ಲು ಹೊಡೆದು ಭಗ್ನಗೊಳಿಸಿದ್ದಾನೆ.
ಮದ್ದೂರು ತಾಲೂಕಿನ ದೊಡ್ಡಂಕನಹಳ್ಳಿ ಗ್ರಾಮದ ನಿವಾಸಿ ಬೋರ ಅಲಿಯಾಸ್ ನವೀನ್ ಕುಡಿದ ಮತ್ತಿನಲ್ಲಿ ಪ್ರತಿಮೆಗೆ ಕಲ್ಲು ಹೊಡೆದ ಮಹಾಭೂಪ. ಈ ವಿಚಾರ ತಿಳಿದ ಪೊಲೀಸರು ಗ್ರಾಮಸ್ಥರ ದೂರಿನ ಮೇರೆಗೆ ಈತನನ್ನು ಬಂಧಿಸಿದ್ದಾರೆ.[ದೆಹಲಿ ಮೆಟ್ರೋ ಸ್ಟೇಷನ್ ಗೆ ಸರ್ ಎಂವಿ ಹೆಸರು]

ನವೀನ್ ಗೆ ಮೊದಲಿನಿಂದಲೂ ಕುಡಿತದ ಅಭ್ಯಾಸ ಇತ್ತು. ಈತ ಬುಧವಾರ ರಾತ್ರಿ ಎಂದಿನಂತೆ ಮದ್ಯ ಸೇವಿಸಿದ್ದಾನೆ. ಕುಡಿದ ನವೀನ್ ನೇರವಾಗಿ ಮನೆಗೆ ತೆರಳದೆ ರಾತ್ರಿ ಹೊತ್ತು ಯಾರು ಇಲ್ಲದನ್ನು ಗಮನಿಸಿ ರಸ್ತೆಯಲ್ಲಿದ್ದ ಕಲ್ಲುಗಳನ್ನು ತೆಗೆದು ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಎಸೆದಿದ್ದಾನೆ. ಬಿದ್ದ ಕಲ್ಲುಗಳಿಂದ ಪ್ರತಿಮೆಯ ಮೂಗು, ಹಣೆ, ಹಿಂಭಾಗ ವಿರೂಪಗೊಂಡಿದೆ.[ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ ಪ್ರವೇಶ ಶುಲ್ಕ ಏರಿಕೆ]
ಈ ಕೃತ್ಯ ಗ್ರಾಮಸ್ಥರ ಅರಿವಿಗೆ ಬಂದಿದ್ದು, ಆರೋಪಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಸಿಪಿಐ ಪ್ರಸಾದ್, ಕೆಸ್ತೂರು ಪಿಎಸ್ಐ ವನರಾಜು ಆರೋಪಿ ನವೀನ್ ನನ್ನು ಬಂಧಿಸಿದ್ದಾರೆ. ಘಟನೆ ಖಂಡಿಸಿ ದೊಡ್ಡಂಕನಹಳ್ಳಿಯಲ್ಲಿ ಅಖಿಲ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಪರಿಸ್ಥಿತಿ ಉಗ್ರರೂಪ ತಾಳದಂತೆ ನೋಡಿಕೊಂಡಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications