300 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು
ಬೆಂಗಳೂರು, ಏ. 23 : ರಾಜ್ಯದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಜ್ಯದ 300 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್. ಕೆ. ಪಾಟೀಲ್ ಹೇಳಿದ್ದಾರೆ. ಕುಡಿಯುವ ನೀರು ಪೂರೈಕೆ ಮಾಡಲು ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವ ಎಚ್.ಕೆ.ಪಾಟೀಲ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಅನ್ವಯ ರಾಜ್ಯದ ಎಲ್ಲಾ ಜಿಲ್ಲಾ ಆಡಳಿತಗಳ ಬಳಿ 240 ಕೋಟಿ ರೂ ಅನುದಾನ ಲಭ್ಯವಿದೆ. ಸ್ಥಳೀಯ ಅವಶ್ಯಕತೆಗಳ ಆಧರಿಸಿ ಮುಖ್ಯವಾಗಿ ಕೊಳವೆ ಬಾವಿಗಳ ಪುನಶ್ಚೇತನವೂ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅವುಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಎಲ್ಲಾ ಗ್ರಾಮ ಪಂಚಾಯಿತಿಗಳು ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿವೆ. ಅವುಗಳನ್ನು ಅನುಷ್ಟಾನಗೊಳಿಸಿ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಅನುಷ್ಠಾನಗೊಳಿಸಲಾಗದ ವಿದ್ಯುತ್ ಸಂಪರ್ಕ ಕಲ್ಪಿಸುವಂತಹ ಕಾಮಗಾರಿಗಳನ್ನು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅಡಿಯಲ್ಲಿ ಅನುಷ್ಠಾನಗೊಳಿಸುವಂತೆ ಜಿಲ್ಲಾಡಳಿತಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.
ಸದ್ಯ ಜಿಲ್ಲಾಡಳಿತದ ಬಳಿ 240 ಕೋಟಿ ರೂ ಅನುದಾನವಿದೆ. ಜೊತೆಗೆ ಹೆಚ್ಚುವರಿಯಾಗಿ 100 ಕೋಟಿ ರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರ್ಥಿಕ ಇಲಾಖೆಗೆ ಆದೇಶ ನೀಡಿದ್ದಾರೆ. ಈ ಮೊತ್ತವೂ ಒಂದೆರಡು ದಿನಗಳಲ್ಲಿ ಜಿಲ್ಲಾಡಳಿತಗಳಿಗೆ ಸಂದಾಯವಾಗಲಿದೆ. ಎಂದರು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಜಲ್ಲೆಗಳಲ್ಲಿ ಒಟ್ಟಾರೆ 490 ಕೋಟಿ ರೂ ಅನುದಾನವಿದೆ ಎಂದು ವಿವರಣೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಇಲ್ಲ : 2013ರಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯ ಅಡಿಯಲ್ಲಿ 1744 ಕೋಟಿ ರೂ ವೆಚ್ಚ ಮಾಡಲಾಗಿದೆ. ಈ ಬಾರಿಯೂ ಅದೇ ಪ್ರಮಾಣದಲ್ಲಿ ಅನುದಾನ ಲಭ್ಯವಿರುವುದರಿಂದ ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಎದುರಾಗುವುದಿಲ್ಲ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
ತಪ್ಪು ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಆರ್ಥಿಕ ವರ್ಷದ ಕೊನೆಯ ತಿಂಗಳಲ್ಲೇ ಹೆಚ್ಚು ವೆಚ್ಚ ಮಾಡಲಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಪ್ರಕಟವಾಗಿದೆ. ಈ ಆರೋಪವು ಸತ್ಯಕ್ಕೆ ದೂರವಾಗಿದ್ದು ಎಂದು ತಿಳಿಸಿದ ಎಚ್.ಕೆ.ಪಾಟೀಲ್, ಆರ್ಥಿಕ ಶಿಸ್ತು ಪಾಲಿಸುತ್ತಿರುವ ಇಲಾಖೆಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಮುಖವಾಗಿದೆ. ಇಲಾಖೆಯಲ್ಲಿ ಅನುದಾನ ದುರ್ಬಳಕೆ ಮಾಹಿತಿ ಇದ್ದರೆ, ದೂರು ದಾಖಲಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications