ಕನ್ನಡಕ್ಕೆ ಡಬ್ ಆದ ಸತ್ಯದೇವ್ ಐಪಿಎಸ್ ರಾಜ್ಯಾದ್ಯಂತ ತೆರೆ
ಬೆಂಗಳೂರು, ಮಾರ್ಚ್ 03 : ತಮಿಳಿನಿಂದ ಕನ್ನಡಕ್ಕೆ ಡಬ್ ಆಗಿರುವ 'ಸತ್ಯದೇವ್ ಐಪಿಎಸ್' ಚಿತ್ರ ಕರ್ನಾಟಕದಾದ್ಯಂತ 90ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ನಲವತ್ತು ವರ್ಷಗಳ ನಿಷೇಧದ ನಂತರ ಅಧಿಕೃತವಾಗಿ ಬಿಡುಗಡೆಯಾಗುತ್ತಿರುವ ಡಬ್ಬಾಗಿರುವ ಚಿತ್ರವಿದು.
ಡಬ್ಬಿಂಗ್ ವಿಷಯ ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಒಂದು ಪಂಗಡ, ಡಬ್ಬಿಂಗ್ ಗೆ ಅವಕಾಶ ಕೊಟ್ಟಿದ್ದರಿಂದ ಕನ್ನಡದ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ವಾದಿಸುತ್ತಿದ್ದರೆ, ಡಬ್ಬಿಂಗ್ ಗೆ ಅವಕಾಶ ನೀಡಿದರೆ ಕನ್ನಡ ಚಿತ್ರರಂಗ ಎಕ್ಕುಟ್ಟಿ ಹೋಗುತ್ತದೆ ಎಂದು ಮತ್ತೊಂದು ಬಣ ಪ್ರತಿವಾದಿಸುತ್ತಿದೆ.[ಡಬ್ಬಿಂಗ್ ವಿರುದ್ಧ ದನಿಯೆತ್ತಿದ ಜಗ್ಗೇಶ್, ವಾಟಾಳ್ ನಾಗರಾಜ್]
ಈ ಎಲ್ಲ ಬಿಸಿಬಿಸಿ ಚರ್ಚೆ, ಚಕಮಕಿ ಎಬ್ಬಿಸುವಂಥ ವಾದವಿವಾದ, ಬಿಡುಗಡೆಯಾದರೆ ಥಿಯೇಟರುಗಳಿಗೆ ಬೆಂಕಿ ಹಚ್ಚುತ್ತೇವೆ ಎಂಬ ಬೆದರಿಕೆ, ಅದ್ಹ್ಯಾಗೆ ಬೆಂಕಿ ಹಚ್ತೀರ ನೋಡೇಬಿಡ್ತೀವಿ ಎಂಬ ತೊಡೆತಟ್ಟುವಂತಹ ಹೇಳಿಕೆಗಳ ನಡುವೆ 'ಸತ್ಯದೇವ್ ಐಪಿಎಸ್' ತೆರೆಕಂಡಿದೆ.[ಡಬ್ಬಿಂಗ್ ಬೇಕಾ? ಬೇಡ್ವಾ? ಮುಗಿಯದ ರಗಳೆಗೆ ಪರಿಹಾರ ಇಲ್ಲಿದೆ]

ಚಿತ್ರದಲ್ಲಿ ಸ್ಫುರದ್ರುಪಿ ನಟ ಅಜೀತ್, ಕುಡ್ಲದ ಬೆಡಗಿ ಅನುಷ್ಕಾ ಶೆಟ್ಟಿ ಮತ್ತು ತ್ರಿಶಾ ಕೃಷ್ಣನ್ ಪ್ರಮುಖ ಭೂಮಿಕೆಯಲ್ಲಿದ್ದಾರೆ. ಬೆಂಗಳೂರಿನಲ್ಲಿ ಚಿತ್ರಮಂದಿರ ಸಿಕ್ಕಿಲ್ಲ ಎಂಬ ಕಾರಣ ನೀಡಿ ಬಿಡುಗಡೆಯನ್ನು ಮುಂದೂಡಲಾಗಿದೆ. ಬೆಂಗಳೂರಿನಲ್ಲೇನಾದರೂ ಬಿಡುಗಡೆಯಾದರೆ ಥಿಯೇಟರಿಗೆ ಬೆಂಕಿ ಹಚ್ಚುತ್ತೇನೆ ಎಂದು ಜಗ್ಗೇಶ್ ಬೆದರಿಕೆ ಹಾಕಿದ್ದರು.[ಡಬ್ಬಿಂಗ್ ಮೇಲಿದ್ದ ನಿಷೇಧ ತೆರವು, ಮುಂದೇನು?]
ಕನ್ನಡ ಚಿತ್ರರಂಗಕ್ಕಿಂದ ಐತಿಹಾಸಿಕ ಮತ್ತು ನೆನಪಿನಲ್ಲುಳಿಯುವ ದಿನ ಕೂಡ. ಇದೇ ದಿನ 1934ರಂದು, ವೈವಿ ರಾವ್ ನಿರ್ದೇಶನದ ಕನ್ನಡದ ಮೊಟ್ಟಮೊದಲ ಟಾಕಿ ಚಿತ್ರ 'ಸತಿ ಸುಲೋಚನಾ' ಬಿಡುಗಡೆಯಾಗಿತ್ತು. ಈ ದಿನವನ್ನು 'ಕನ್ನಡ ಚಿತ್ರರಂಗದ ದಿನ'ವನ್ನಾಗಿಯೂ ಆಚರಿಸಲಾಗುತ್ತಿದೆ. ಕಾಕತಾಳೀಯವೆಂಬಂತೆ, ಇದೇ ದಿನ ತಮಿಳಿನಿಂದ ಕನ್ನಡಕ್ಕೆ ಡಬ್ ಆಗಿರುವ ಚಿತ್ರ ಬಿಡುಗಡೆಯಾಗುತ್ತಿದೆ.
ಡಬ್ಬಿಂಗ್ ಗೆ ಅವಕಾಶ ನೀಡಿರುವುದು ಸರೀನಾ? ಡಬ್ಬಿಂಗ್ ಕನ್ನಡ ಚಿತ್ರಗಳಿಗೆ ಮಾತ್ರ ಸೀಮಿತವಾಗಿರಬೇಕೆ? ಇದರಿಂದ ಕನ್ನಡಕ್ಕೆ ಆಗುವ ಸಾಧಕ ಬಾಧಕಗಳೇನು? ನಿಮ್ಮ ಅಭಿಪ್ರಾಯವೇನು? [ಕನ್ನಡಕ್ಕೂ ಅಪ್ಪಳಿಸಿದ ತಮಿಳಿನ 'ಕಾಷ್ಮೋರ']
-
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications