ಕನ್ನಡಕ್ಕೆ ಡಬ್ ಆದ ಸತ್ಯದೇವ್ ಐಪಿಎಸ್ ರಾಜ್ಯಾದ್ಯಂತ ತೆರೆ
ಬೆಂಗಳೂರು, ಮಾರ್ಚ್ 03 : ತಮಿಳಿನಿಂದ ಕನ್ನಡಕ್ಕೆ ಡಬ್ ಆಗಿರುವ 'ಸತ್ಯದೇವ್ ಐಪಿಎಸ್' ಚಿತ್ರ ಕರ್ನಾಟಕದಾದ್ಯಂತ 90ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ನಲವತ್ತು ವರ್ಷಗಳ ನಿಷೇಧದ ನಂತರ ಅಧಿಕೃತವಾಗಿ ಬಿಡುಗಡೆಯಾಗುತ್ತಿರುವ ಡಬ್ಬಾಗಿರುವ ಚಿತ್ರವಿದು.
ಡಬ್ಬಿಂಗ್ ವಿಷಯ ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಒಂದು ಪಂಗಡ, ಡಬ್ಬಿಂಗ್ ಗೆ ಅವಕಾಶ ಕೊಟ್ಟಿದ್ದರಿಂದ ಕನ್ನಡದ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದು ವಾದಿಸುತ್ತಿದ್ದರೆ, ಡಬ್ಬಿಂಗ್ ಗೆ ಅವಕಾಶ ನೀಡಿದರೆ ಕನ್ನಡ ಚಿತ್ರರಂಗ ಎಕ್ಕುಟ್ಟಿ ಹೋಗುತ್ತದೆ ಎಂದು ಮತ್ತೊಂದು ಬಣ ಪ್ರತಿವಾದಿಸುತ್ತಿದೆ.[ಡಬ್ಬಿಂಗ್ ವಿರುದ್ಧ ದನಿಯೆತ್ತಿದ ಜಗ್ಗೇಶ್, ವಾಟಾಳ್ ನಾಗರಾಜ್]
ಈ ಎಲ್ಲ ಬಿಸಿಬಿಸಿ ಚರ್ಚೆ, ಚಕಮಕಿ ಎಬ್ಬಿಸುವಂಥ ವಾದವಿವಾದ, ಬಿಡುಗಡೆಯಾದರೆ ಥಿಯೇಟರುಗಳಿಗೆ ಬೆಂಕಿ ಹಚ್ಚುತ್ತೇವೆ ಎಂಬ ಬೆದರಿಕೆ, ಅದ್ಹ್ಯಾಗೆ ಬೆಂಕಿ ಹಚ್ತೀರ ನೋಡೇಬಿಡ್ತೀವಿ ಎಂಬ ತೊಡೆತಟ್ಟುವಂತಹ ಹೇಳಿಕೆಗಳ ನಡುವೆ 'ಸತ್ಯದೇವ್ ಐಪಿಎಸ್' ತೆರೆಕಂಡಿದೆ.[ಡಬ್ಬಿಂಗ್ ಬೇಕಾ? ಬೇಡ್ವಾ? ಮುಗಿಯದ ರಗಳೆಗೆ ಪರಿಹಾರ ಇಲ್ಲಿದೆ]

ಚಿತ್ರದಲ್ಲಿ ಸ್ಫುರದ್ರುಪಿ ನಟ ಅಜೀತ್, ಕುಡ್ಲದ ಬೆಡಗಿ ಅನುಷ್ಕಾ ಶೆಟ್ಟಿ ಮತ್ತು ತ್ರಿಶಾ ಕೃಷ್ಣನ್ ಪ್ರಮುಖ ಭೂಮಿಕೆಯಲ್ಲಿದ್ದಾರೆ. ಬೆಂಗಳೂರಿನಲ್ಲಿ ಚಿತ್ರಮಂದಿರ ಸಿಕ್ಕಿಲ್ಲ ಎಂಬ ಕಾರಣ ನೀಡಿ ಬಿಡುಗಡೆಯನ್ನು ಮುಂದೂಡಲಾಗಿದೆ. ಬೆಂಗಳೂರಿನಲ್ಲೇನಾದರೂ ಬಿಡುಗಡೆಯಾದರೆ ಥಿಯೇಟರಿಗೆ ಬೆಂಕಿ ಹಚ್ಚುತ್ತೇನೆ ಎಂದು ಜಗ್ಗೇಶ್ ಬೆದರಿಕೆ ಹಾಕಿದ್ದರು.[ಡಬ್ಬಿಂಗ್ ಮೇಲಿದ್ದ ನಿಷೇಧ ತೆರವು, ಮುಂದೇನು?]
ಕನ್ನಡ ಚಿತ್ರರಂಗಕ್ಕಿಂದ ಐತಿಹಾಸಿಕ ಮತ್ತು ನೆನಪಿನಲ್ಲುಳಿಯುವ ದಿನ ಕೂಡ. ಇದೇ ದಿನ 1934ರಂದು, ವೈವಿ ರಾವ್ ನಿರ್ದೇಶನದ ಕನ್ನಡದ ಮೊಟ್ಟಮೊದಲ ಟಾಕಿ ಚಿತ್ರ 'ಸತಿ ಸುಲೋಚನಾ' ಬಿಡುಗಡೆಯಾಗಿತ್ತು. ಈ ದಿನವನ್ನು 'ಕನ್ನಡ ಚಿತ್ರರಂಗದ ದಿನ'ವನ್ನಾಗಿಯೂ ಆಚರಿಸಲಾಗುತ್ತಿದೆ. ಕಾಕತಾಳೀಯವೆಂಬಂತೆ, ಇದೇ ದಿನ ತಮಿಳಿನಿಂದ ಕನ್ನಡಕ್ಕೆ ಡಬ್ ಆಗಿರುವ ಚಿತ್ರ ಬಿಡುಗಡೆಯಾಗುತ್ತಿದೆ.
ಡಬ್ಬಿಂಗ್ ಗೆ ಅವಕಾಶ ನೀಡಿರುವುದು ಸರೀನಾ? ಡಬ್ಬಿಂಗ್ ಕನ್ನಡ ಚಿತ್ರಗಳಿಗೆ ಮಾತ್ರ ಸೀಮಿತವಾಗಿರಬೇಕೆ? ಇದರಿಂದ ಕನ್ನಡಕ್ಕೆ ಆಗುವ ಸಾಧಕ ಬಾಧಕಗಳೇನು? ನಿಮ್ಮ ಅಭಿಪ್ರಾಯವೇನು? [ಕನ್ನಡಕ್ಕೂ ಅಪ್ಪಳಿಸಿದ ತಮಿಳಿನ 'ಕಾಷ್ಮೋರ']
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications