ಆದೇಶ ಆದರೂ ಶೂನ್ಯ ಬಡ್ಡಿದರದಲ್ಲಿ ಸಾಲ ರೈತರಿಗೆ ಸಿಗುತ್ತಿಲ್ಲ: ಬಿಜೆಪಿ ಕಿಡಿ
ಬೆಂಗಳೂರು, ಅಕ್ಟೋಬರ್ 03: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ದೊರೆಯುತ್ತಿಲ್ಲ. ರಾಜ್ಯದ ಜನರ ಮುಂದೆ ಗ್ಯಾರಂಟಿಗಳ ಪುಂಗಿ ಊದಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೀಗ ಕಿವಿ ಮೇಲೆ ಲಾಲ್ಬಾಗ್ ಇಟ್ಟು ತಮಾಷೆ ನೋಡುತ್ತಿದೆ ಎಂದು ಕರ್ನಾಟಕ ಬಿಜೆಪಿ ವಾಗ್ದಾಳಿ ನಡೆಸಿದೆ.
ಗ್ಯಾರಂಟಿ ಯೋಜನೆಗಳಿಂದ ವಿವಿಧ ಯೋಜನೆಗಳಿಗೆ ಹಣ ಬಿಡುಗಡೆ ಆಗಿಲ್ಲ ಎನ್ನಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತರಿಗೆ ಶೂನ್ಯ ಬಡ್ಡಿದರ ಬೆಳೆಸಾಲವನ್ನು, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಸರ್ಕಾರ ಅನುದಾನದ ಕೊರತೆಯಿಂದ ಸಹಕಾರ ಸಂಘಗಳ ಮೂಲಕ ನೀಡುವ ಸಾಲವನ್ನು ರೈತರಿಗೆ ಕೊಡದೆ ಸಂಕಷ್ಟಕ್ಕೆ ದೂಡಿದೆ.

ಸರ್ಕಾರದ ಖಜಾನೆಯನ್ನು ಗುಡಿಸಿ ಗುಂಡಾಂತರ ಮಾಡಿರುವ ಕಾಂಗ್ರೆಸ್, ಗ್ಯಾರಂಟಿಗಳ ಆದೇಶವನ್ನು ಕೇವಲ ಕಾಗದದ ಮೇಲೆ ಸೀಮಿತಗೊಳಿಸಿ ಜನರಿಗೆ ವಂಚಿಸುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಹಾಗಾದರೆ ರೈತರಿಗೆ ಉದ್ದೇಶಿತ ಶೂನ್ಯ ಬಡ್ಡಿದರ ಮೆಲೆ ಸಾಲ ಸೌಲಭ್ಯ ಸಿಗುತ್ತಿಲ್ಲವೇ? ಎಂಬುದು ಪ್ರಶ್ನೆಯಾಗಿದೆ.
ರೈತರಿಗೆ ಸಾಲ ಸೌಲಭ್ಯ ದೊರೆಯುತ್ತಿಲ್ಲ
ರೈತರಿಗೆ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ಬೆಳೆ ಸಾಲದ ಮಿತಿ ಅನ್ನು ಶೇಕಡಾ ಮೂರರಿಂದ ಐದು ಲಕ್ಷಕ್ಕೆ ಏರಿಕೆ ಮಾಡಲಾಗಿತ್ತು. ಈ ಸಂಬಂಧ ಅಧಿಕೃತ ಆದೇಶವಾದರೂ ಸಹಿತ ರೈತರಿಗೆ ಈ ಯೋಜನೆ ಲಾಭ ಸಿಕ್ಕಿಲ್ಲ.
ರಾಜ್ಯದ ಜನರ ಮುಂದೆ ಗ್ಯಾರಂಟಿಗಳ ಪುಂಗಿ ಊದಿ ಅಧಿಕಾರಕ್ಕೆ ಬಂದ @siddaramaiah ಅವರ ಸರ್ಕಾರ ಇದೀಗ ಕಿವಿ ಮೇಲೆ ಲಾಲ್ಬಾಗ್ ಇಟ್ಟು ತಮಾಷೆ ನೋಡುತ್ತಿದೆ.
— BJP Karnataka (@BJP4Karnataka) October 3, 2023
ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತರಿಗೆ ಶೂನ್ಯ ಬಡ್ಡಿದರ ಬೆಳೆಸಾಲವನ್ನು, ರೈತ ವಿರೋಧಿ @INCKarnataka ಸರ್ಕಾರ ಅನುದಾನದ ಕೊರತೆಯಿಂದಾಗಿ ಸಹಕಾರ ಸಂಘಗಳ ಮೂಲಕ ನೀಡುವ ಸಾಲವನ್ನು… https://t.co/k068z1o303
ಅನುದಾನ ಕೊರತೆಯಿಂದ ಹೆಚ್ಚುವರಿ ಸಾಲದ ಮೊತ್ತ ವಿತರಣೆಯಲ್ಲಿ ಗೊಂದಲವಾಗಿದೆ ಎಂದು ತಿಳಿದು ಬಂದಿದೆ. ಶೇಕಡಾ 3ರ ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿ 10 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ನಿಗದಿತ ಕಾಲ ಮಿತಿಯಲ್ಲಿ ಪಾವತಿಸದಿದ್ದರೆ ಬಡ್ಡಿ ಏರಿಕೆ ಆಗಲಿದೆ.
ಸದ್ಯ ಪ್ರಸಕ್ತ 2023ರ ಏಪ್ರಿಲ್ 1ರಿಂದ ಮುಂದಿನ ವರ್ಷದ ಮಾ. 31ರ ಅವಧಿಯಲ್ಲಿ ಸಾಲ ಪಡೆದವರಿಗೆ ಮಾತ್ರ ಈ ಬಡ್ಡಿದರ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ. ಸರ್ಕಾರದ ಅಧಿಸೂಚನೆಯಲ್ಲಿ ಸ್ಪಷ್ಟತೆ ಇಲ್ಲದ್ದರಿಂದ ಸಹಕಾರಿ ಬ್ಯಾಂಕ್ಗಳು ಸಾಲ ಹಂಚಿಕೆಯಲ್ಲಿ ಗೊಂದಲದಲ್ಲಿವೆ. ಅಲ್ಲದೇ ಹೆಚ್ಚುವರಿ ಘೋಷಣೆಗೆ ಹೆಚ್ಚುವರಿ ಅನುದಾನ ನೀಡಬೇಕಾದ ಸರ್ಕಾರ ಅನುದಾನ ಕೊರತೆ ಎದುರಿಸುತ್ತಿದೆ.
ಈದೆಲ್ಲ ಅಂಶಗಳನ್ನು ಪ್ರಸ್ತಾಪಿಸಿರುವ ಬಿಜೆಪಿಯು ಕಾಂಗ್ರೆಸ್ ಸರ್ಕಾರದ ಆಡಳಿತ ಬಗ್ಗೆ ನಿರಂತರವಾಗಿ ಕಿಡಿ ಕಾರುತ್ತಿದೆ. ರೈತರಿಗೆ ಅನುಕೂಲವಾಗುವಂತೆ ಜಾರಿಗೆ ತಂದ ಸೌಲಭ್ಯಗಳು ಈ ಸರ್ಕಾವು ವಂಚಿಸುತ್ತದೆ ಎಂದು ಬಿಜೆಪಿ ದೂರಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications