ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಬಿದ್ದಿದ್ದು ಕೆಜಿಗಟ್ಟಲೆ ತೂಕದ ಆಲಿಕಲ್ಲು
ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಭರ್ಜರಿ ಮಳೆಯಾಗಿದೆ. ಅಗಲಗುರ್ಕಿಯಲ್ಲಿ ಕೆಜಿಗಟ್ಟಲೆ ತೂಗುವ ಆಲಿಕಲ್ಲು ಬಿದ್ದಿದ್ದು, ವಿವಿಧೆಡೆ ಬೆಳೆ ಹಾನಿಯಾಗಿ, ರೈತರು ಆರ್ಥಿಕ ನಷ್ಟ ಅನುಭವಿಸಿದ್ದಾರೆ
ಚಿಕ್ಕಬಳ್ಳಾಪುರ, ಮೇ 10: ಚಿಕ್ಕಬಳ್ಳಾಪುರ ನಗರವೂ ಸೇರಿದ ಹಾಗೆ ಸುತ್ತಮುತ್ತ ಮಂಗಳವಾರ ಸಕತ್ ಮಳೆಯಾಗಿದೆ. ಬಿರುಗಾಳಿ ಸಹಿತ ಮಳೆಗೆ ನಂದಿ, ಅಗಲಗುರ್ಕಿ ಸೇರಿದಂತೆ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ದ್ರಾಕ್ಷಿ, ದಪ್ಪ ಮೆಣಸಿನಕಾಯಿ ಮತ್ತಿತರ ಬೆಳೆಗಳು ಹಾನಿಯಾಗಿವೆ.
ಹಲವೆಡೆ ಮರಗಳು ಬಿದ್ದಿವೆ. ಅಗಲಗುರ್ಕಿ ಸುತ್ತ ದೊಡ್ಡ ಗಾತ್ರದ ಆಲಿಕಲ್ಲು ಬಿದ್ದು, ಬೆಳೆಗಳು- ಪಾಲಿಹೌಸ್ ಗಳಿಗೂ ಹಾನಿಯಾಗಿವೆ. ಈ ಮಧ್ಯೆ ಮಳೆ ಕಾರಣದಿಂದ ಚಿಕ್ಕಬಳ್ಳಾಪುರ ನಗರದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಯಿತು. ತಗ್ಗಿನ ಪ್ರದೇಶದಲ್ಲಿ ನೀರು ತುಂಬಿಕೊಂಡಿತು. ವಾಹನ ಸವಾರರು ಪಡಿಪಾಟಲು ಪಟ್ಟರು.[ಮೈಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಿಡಿಲಿಗೆ ಬಲಿ]

ಅಗಲಗುರ್ಕಿ ಗ್ರಾಮದ ನಾರಾಯಣಸ್ವಾಮಿ ಎಂಬುವರ ತೋಟದಲ್ಲಿ ಭಾರೀ ಗಾತ್ರದ ಅಲಿಕಲ್ಲುಗಳು ಬಿದ್ದಿವೆ. ಸರಿ ಸುಮಾರು 5 ರಿಂದ 10 ಕೆಜಿ ತೂಕದ ಆಲಿಕಲ್ಲುಗಳನ್ನ ಕಂಡ ಜನ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಭಾರೀ ಗುಡುಗು-ಮಿಂಚು ಸಹಿತ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಬಿದ್ದಿದ್ದು, ಈ ವೇಳೆ ಭಾರೀ ಗಾತ್ರದ ಆಲಿಕಲ್ಲುಗಳು ಕಂಡುಬಂದಿವೆ.

ಬರಗಾಲ ಹಾಗೂ ಚಿಕ್ಕಬಳ್ಳಾಪುರ ಎಂಬುದು ಜೋಡಿಪದಗಳಂತೆ ಆಗಿಹೋಗಿದೆ. ಆದರೆ ಈಗ ಅಕಾಲದಲ್ಲಿ ಮಳೆ ಬಿದ್ದು, ರೈತರು ಶ್ರಮಪಟ್ಟು ಬೆಳೆದ ಬೆಳೆ ಕೈಗೆ ಸಿಗದಂತಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications