Get Updates
Get notified of breaking news, exclusive insights, and must-see stories!

ರಾಘವೇಶ್ವರ ಶ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ: ನ್ಯಾಯಾಲಯದ ಮಹತ್ವದ ಆದೇಶ

ಬೆಂಗಳೂರು, ಅ 19: ನಕಲಿ ಅಶ್ಲೀಲ ಸಿಡಿ ತಯಾರಿಸಿ ರಾಘವೇಶ್ವರಭಾರತೀ ಶ್ರೀಗಳ ಮಾನಹಾನಿಗೆ ಯತ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯ ಐವರು ಆರೋಪಿಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ಶ್ರೀಗಳ ತೇಜೋವಧೆ ಮಾಡುವ ಉದ್ದೇಶದಿಂದ 2010ರಲ್ಲಿ ನಕಲಿ ಅಶ್ಲೀಲ ಸಿಡಿ ತಯಾರಿಸಿ ಸ್ವಾಮೀಜಿಯವರ ತೇಜೋವಧೆ ಯತ್ನ ನಡೆದಿತ್ತು.

ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಶ್ರೀಗಳ ಹಾವಭಾವಗಳನ್ನು ಆತನಿಗೆ ಕಲಿಸಿ ಚಿತ್ರಿಸಲಾಗಿತ್ತು. ಹಾಲಿವುಡ್ ತಂತ್ರಜ್ಞಾನ ಬಳಸಿ ಶ್ರೀಗಳ ಚಿತ್ರಗಳನ್ನು ಅಶ್ಲೀಲ ವಿಡಿಯೊಗಳ ಜತೆ ಸೇರಿಸಿ ಅದನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿ ರಾಮಚಂದ್ರಾಪುರ ಮಠದ ಶ್ರೀಗಳಿಗೆ ಮಸಿ ಬಳಿಯುವ ಕೃತ್ಯ ಎಸಗಲಾಗಿತ್ತು.

Duplicate Video Kumta JMFC Court Issued Non Bail Warrant Against Five Accused

ಈ ಷಡ್ಯಂತ್ರ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಗೋಪಾಲ್ ಹೊಸೂರ್ ನೇತೃತ್ವದ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ರೆಡ್‍ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದರು.

ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದು, ಕುಮಟಾ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಆರೋಪ ದೃಢಪಡಿಸುವ (ಚಾರ್ಜ್ ಫ್ರೇಮಿಂಗ್) ಪ್ರಕ್ರಿಯೆ ನಡೆದಿದೆ.

ಕಲಾಪಕ್ಕೆ ಹಾಜರಾಗದ ಬಾಲಚಂದ್ರ ಪ್ರಭಾಕರ, ಗಜಾನನ ಶಾಂಭಾ ಉಪಾಧ್ಯಾಯ ಅಲಿಯಾಸ್ ದೀಕ್ಷಿತ, ಶಿವರಾಮ ವಿನಾಯಕ ಅಡಿ, ವಿಶ್ವನಾಥ್ ಅಲಿಯಾಸ್ ವಿಶು ಫಣಿರಾಮ ಗೋಪಿಭಟ್ಟ, ರಾಜು ಅಲಿಯಾಸ್ ರಾಜಗೋಪಾಲ ಮಹಾದೇವ ಅಡಿ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+