ಕಳೆದ ಬಾರಿ ಪ್ರಮಾಣ ವಚನದ ನಂತರ ಕನ್ನಡಿಗರ ಕ್ಷಮೆ ಕೇಳಿದ್ದ ಜಮೀರ್
ಬೆಂಗಳೂರು, ಮೇ 20: ಸಿದ್ದರಾಮಯ್ಯನವರ ಸರ್ಕಾರದಲ್ಲಿ ಅವರ ಆಪ್ತ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಕೂಡಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎಂಟು ನಾಯಕರು ಶಪಥ ಸ್ವೀಕರಿಸಲಿದ್ದು ಅದರಲ್ಲಿ ಜಮೀರ್ ಕೂಡಾ ಒಬ್ಬರು.
ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಬಂದು ಗೆಲುವು ಕಂಡಿದ್ದ ಜಮೀರ್ ಅಹ್ಮದ್ಗೆ ಮತ್ತೆ ಸಚಿವ ಸ್ಥಾನ ಒಲಿದಿದೆ. ಸಿದ್ದರಾಮಯ್ಯನವರ ಕೃಪೆಯಿಂದ ಜಮೀರ್ಗೆ ಸಚಿವ ಸ್ಥಾನ ಒಲಿದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಲ್ಪಸಂಖ್ಯಾತ ಸಮುದಾಯದ ಇಬ್ಬರು (ಜಮೀರ್, ಕೆ.ಜೆ.ಜಾರ್ಜ್) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕಳೆದ ಬಾರಿ ಅಂದರೆ 2018ರಲ್ಲಿ ಯಾವುದೇ ಸರ್ಕಾರಕ್ಕೆ ಬಹುಮತ ಸಿಗದೇ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಮತ್ತು ಕಾಂಗ್ರೆಸ್ಸಿನ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದಿತ್ತು. ಆ ವೇಳೆ, ಜಮೀರ್ ಅಹ್ಮದ್ ಖಾನ್ ಕೂಡಾ ಸಚಿವರಾಗಿದ್ದರು. ಆಹಾರ, ವಕ್ಫ್ ಮತ್ತು ನಾಗರೀಕ ಪೂರೈಕೆ ಖಾತೆಯನ್ನು ಅವರು ನಿಭಾಯಿಸಿದ್ದರು. ಅದಕ್ಕೂ ಮುನ್ನ ಪ್ರಮಾಣ ವಚನದ ವೇಳೆ ಇಂಗ್ಲಿಷ್ ನಲ್ಲಿ ಮಾತಾಡಿ ಸಾಕಷ್ಟು ಟ್ರೋಲ್ ಆಗಿದ್ದರು.
ಜಮೀರ್ ಅಹ್ಮದ್ಗೆ ಕನ್ನಡ ಬರುತ್ತದೆಯಾದರೂ ಅವರ ಕನ್ನಡದಲ್ಲಿ ಉರ್ದು ಪ್ರಭಾವ ಹೆಚ್ಚಿದೆ. ಹಾಗಾಗಿ ಅವರ ಉಚ್ಛಾರ ಒಮ್ಮೊಮ್ಮೆ ಹಾಸ್ಯಕ್ಕೆ ಗುರಿಯಾಗುವುದುಂಟು. ಈ ಹಿಂದೆ ಅವರು ಮಾಡಿರುವ ಭಾಷಣಗಳು ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯಕ್ಕೀಡಾಗಿದ್ದದ್ದೂ ಇದೆ.
ಆ ಕಾರಣಕ್ಕಾಗಿ ಅವರು ಇಂಗ್ಲಿಷ್ ನಲ್ಲಿ ಅಧಿಕಾರ ಪದ, ಗೋಪ್ಯತಾ ಪ್ರಮಾಣ ವಚನವನ್ನು ಇಂಗ್ಲಿಷ್ನಲ್ಲಿ ಸ್ವೀಕರಿಸಿ ಅಲ್ಲಾಹ್ ನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್, ಆಕ್ರೋಶಕ್ಕೆ ಒಳಗಾದ ನಂತರ ಸಿದ್ದಗಂಗಾ ಮಠದಲ್ಲಿ ಕನ್ನಡಿಗರ ಕ್ಷಮೆ ಕೇಳಿದ್ದರು.
"ಕನ್ನಡ ಕಲಿಯದೆಯೇ ಇರುವುದು ನನ್ನ ದುರದೃಷ್ಟ. ನನ್ನ ಪೋಷಕರು ಕನ್ನಡ ಶಾಲೆಗೆ ನನ್ನನ್ನು ಸೇರಿಸಿರಲಿಲ್ಲ. ಕನ್ನಡಿದ ಜನತೆಗಿಂತ ದುಪ್ಪಟ್ಟು ನೋವು ನನಗಾಗಿದೆ. 'ನಾನು ಬೇಕೆಂದೇ ಇಂಗ್ಲಿಷ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾಗಿ ಅನೇಕರು ಆರೋಪಿಸುತ್ತಿದ್ದಾರೆ. ಆದರೆ, ಅದು ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ. ಒಂದು ವೇಳೆ ಉದ್ದೇಶಪೂರ್ವಕವಾಗಿ ಕನ್ನಡದಲ್ಲಿ ಮಾತನಾಡದೆ ಇದ್ದರೆ ನನ್ನನ್ನು ಗಲ್ಲಿಗೇರಿಸಿ' ಎಂದು ಜಮೀರ್ ಅಂದು ಹೇಳಿದ್ದರು.
ಹಾಗಾಗಿ, ಇಂದಿನ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಖಾನ್, ಇಂಗ್ಲಿಷ್ ಅಥವಾ ಕನ್ನಡದಲ್ಲಿ ಗೋಪ್ಯತಾ ಪ್ರಮಾಣ ತೆಗೆದುಕೊಳ್ಳಲಿದ್ದಾರಾ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications