ಕೊರೊನಾ ಸಂಕಷ್ಟದಿಂದ ಜನರನ್ನು ಕಾಪಾಡಿದ್ದು ಅನ್ನಭಾಗ್ಯವೇ ಹೊರತು ಮೋದಿ ಚಪ್ಪಾಳೆಯಲ್ಲ
ಮೈಸೂರು, ಏಪ್ರಿಲ್ 19: ಕೊರೊನಾ ಸಂಕಷ್ಟ ಇಡೀ ದೇಶ ಎದುರಿಸುತ್ತಿರುವ ಈ ಹೊತ್ತಿನಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಲೋಕೋಪಯೋಗಿ ಖಾತೆಯ ಸಚಿವ, ಹಿರಿಯ ಕಾಂಗ್ರೆಸ್ ಡಾ.ಎಚ್.ಸಿ.ಮಹಾದೇವಪ್ಪ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಹಾದೇವಪ್ಪ, "ಈ ಕರೋನಾ ಸಂಕಷ್ಟದ ವೇಳೆ ರಾಜ್ಯದ ಜನರನ್ನು ಕಾಪಾಡುತ್ತಿರುವುದು @siddaramaiah ನೇತೃತ್ವದ @INCKarnataka ಸರ್ಕಾರದ ಅವಧಿಯಲ್ಲಿ ಜಾರಿ ಮಾಡಲಾದ ಅನ್ನಭಾಗ್ಯ, ಕ್ಷೀರಭಾಗ್ಯ, ಮಾತೃಪೂರ್ಣ & ಇಂದಿರಾ ಕ್ಯಾಟೀನ್ ಯೋಜನೆಯೇ ವಿನಃ, @narendramodi ಅವರ ಚಪ್ಪಾಳೆಯಾಗಲೀ, ದೀಪ ಬೆಳಗುವ ಹುಸಿ ಪ್ರಚಾರವಾಗಲೀ ಅಲ್ಲ" ಎಂದು ಟ್ವೀಟ್ ಮಾಡಿದ್ದಾರೆ.
"ಪ್ರಚಾರದ ಹಾದಿ ಹಿಡಿದಿರುವ @BJP4Karnataka ಪಕ್ಷದ ಮುಖಂಡರಿಗೆ ಕನಿಷ್ಟ ಆತ್ಮಸಾಕ್ಷಿ ಇಲ್ಲ. ಇಂತವರಿಂದ ಸಮಾಜವು ಸದಾ ತಲೆ ತಗ್ಗಿಸುತ್ತಲೇ ಇರುತ್ತದೆ ಮತ್ತು ಸದಾ ತೊಂದರೆಗೆ ಸಿಲುಕುತ್ತದೆ" ಎಂದೂ ಮಹಾದೇವಪ್ಪ ಸರಕಾರದ ವಿರುದ್ದ ಕಿಡಿಕಾರಿದ್ದಾರೆ.

"ದೇಶದ ಜನರು ಕರೋನಾ ಆತಂಕದ ನೆರಳಲ್ಲಿ ಬದುಕು ನಡೆಸುತ್ತಿದ್ದರೆ ಇತ್ತ @narendramodi ಸರ್ಕಾರವು ಅಗತ್ಯ ವಸ್ತುಗಳಾದ ಮೇಲೆ ಔಷಧಿ, PPE ಕಿಟ್, ಸ್ಯಾನಿಟೈಸರ್, ಮಾಸ್ಕ್, ಹಾಗೂ ವೆಂಟಿಲೇಟರ್ಗಳ ಮೇಲೆ
ಜಿಎಸ್ಟಿ ತೆರಿಗೆಯನ್ನು ವಿಧಿಸಿದ್ದು ಈ ಸಂಕಷ್ಟದ ವೇಳೆಯಲ್ಲೂ ಅಮಾನವೀಯತೆಯನ್ನು ಪ್ರದರ್ಶಿಸುತ್ತಿದೆ" ಇದು ಮಹಾದೇವಪ್ಪ ಮಾಡಿರುವ ಇನ್ನೊಂದು ಟ್ವೀಟ್.
'ಅಕ್ಕಿಭಾಗ್ಯ, ಕ್ಷೀರಭಾಗ್ಯ, ಮಾತೃಪೂರ್ಣ ಹಾಗೂ ಇಂದಿರಾ ಕ್ಯಾಂಟೀನ್ ಯೋಜನೆಗಳನ್ನ ಸಿದ್ದರಾಮಯ್ಯ ಕೊಟ್ಟಿರೋದು ಅವರ ಸ್ವಂತ ಹಣದಿಂದ ಅಲ್ಲ. ಇದೆಲ್ಲಾ ಕೊಟ್ಟಿದ್ದು ಸರ್ಕಾರದ ಖಜಾನೆಯ ದುಡ್ಡಲ್ಲಿ' ಎನ್ನುವ ಪ್ರತಿಕ್ರಿಯೆ ಮಹಾದೇವಪ್ಪ ಅವರ ಟ್ವೀಟಿಗೆ ಬಂದಿದೆ.
'ಇದೇ ಅನ್ನಭಾಗ್ಯಕ್ಕೆ ಬಿಜೆಪಿ ವಿರೋಧ ಮಾಡಿದ್ದಲ್ಲದೇ ಗೇಲಿ ಮಾಡಿತ್ತು. ಬರೀ ಹಿಂದೂ ಅನ್ನುವ ಪದ ಇಟ್ಕೊಂಡು ಆಟ ಆಡಿದ್ರೆ ಬಡವನ ಹೊಟ್ಟೆ ತುಂಬಲ್ಲ ಸ್ವಾಮಿ' ಎನ್ನುವ ಸಮರ್ಥನೆಯ ಪ್ರತಿಕ್ರಿಯೆಯೂ, ಮಹಾದೇವಪ್ಪ ಟ್ವೀಟಿಗೆ ಬಂದಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications