ಪರಿಷತ್ ಸಭಾಪತಿ ಆಯ್ಕೆ ಯಾವಾಗ, ಬೆಳಗಾವಿ ಅಧಿವೇಶನದಲ್ಲಾ?
ಬೆಂಗಳೂರು, ನವೆಂಬರ್ 9: ಈಗಾಗಲೇ ಸಂಪುಟ ವಿಸ್ತರಣೆ ಬಗ್ಗೆ ಮತ್ತೆ ಮಾತುಗಳು ಕೇಳಿ ಬರುತ್ತಿವೆ, ಇನ್ನೊಂದೆಡೆ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಇದೀಗ ಪರಿಷತ್ ಸಭಾಪತಿ ಹಾಗೂ ಉಪ ಸಭಾಪತಿ ಆಯ್ಕೆ ಕುರಿತು ಗುಸುಗುಸು ಆರಂಭಗೊಂಡಿದೆ.
ಇದೀಗ ಮಿತ್ರ ಪಕ್ಷಗಳಲ್ಲಿ ಯಾರು ಸಭಾಪತಿ ಹಾಗೂ ಉಪ ಸಭಾಪತಿಯಾಗುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಬಬೆಳಗಾವಿಯ ಚಳಿಗಾಲ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿ ನೇಮಕ ಪ್ರಕ್ರಿಯೆ ನಡೆಯಲಿದೆ.
ಡಿ.ಎಚ್ ಶಂಕರಮೂರ್ತಿ ನಿವೃತ್ತಿ ಬಳಿಕ ಸದನದ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹಲವು ತಿಂಗಳಿನಿಂದ ಹಂಗಾಮಿ ಸಭಾಪತಿಯಾಗಿ ಮುಂದುವರೆದಿದ್ದಾರೆ.ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸದೆ ಹಂಗಾಮಿಯನ್ನೇ ಮುಂದುವರೆಸುವ ಬಗ್ಗೆ ಕಳೆ ಜುಲೈ ಅಧಿವೇಶನದಲ್ಲಿ ಸದನದಲ್ಲೇ ಆಕ್ಷೇಪ ವ್ಯಕ್ತವಾಗಿತ್ತು.

ಈ ಕುರಿತು ಜು.6 ರಂದು ಸದನದಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ಮೈತ್ರಿ ಸರ್ಕಾರದಲ್ಲಿ ವಿಧಾನಸಭೆ ಸಭಾಧ್ಯಕ್ಷರಾಗಿ ಕಾಂಗ್ರೆಸ್ ನ ಕೆ.ಆರ್. ರಮೇಶ್ ಕುಮಾರ್ ಆಯ್ಕೆಯಾಗಿದ್ದು, ಮೇಲ್ಮನೆಯ ಸಭಾಪತಿ ಸ್ಥಾನ ಜೆಡಿಎಸ್ ಗೆ ಸಿಗುವ ಲೆಕ್ಕಾಚಾರ ಇದೆ.
ಹಂಗಾಮಿ ಸಭಾಪತಿಯಾಗಿರುವ ಬಸವರಾಜಹೊರಟ್ಟಿ ಅವರನ್ನೇ ಈ ಸ್ಥಾನದಲ್ಲಿ ಮುಂದುವರೆಸುವ ಬಗ್ಗೆ ಜೆಡಿಎಸ್ ನಲ್ಲಿ ಒಲವು ವ್ಯಕ್ತವಾಗಿತ್ತು. ಆದರೆ ಮೇಲ್ಮನೆಯಲ್ಲಿ 39 ಸದಸ್ಯ ಬಲ ಹೊಂದಿರುವ ಪಕ್ಷಕ್ಕೇ ಸಭಾಪತಿ ಸ್ಥಾನ ಸಿಗಬೇಕು ಎಂಬ ಹಠ ಕಾಂಗ್ರೆಸ್ ನಲ್ಲಿ ಬಲವಾಗಿದೆ. ಕೆಸಿ ಕೊಂಡಯ್ಯ ಉಪಸಭಾಪತಿಯಾಗಿ ಆಯ್ಕೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
BPL Card: ಪಡಿತರ ಚೀಟಿ ನಿಯಮ ಪರಿಷ್ಕರಣೆ: ಆದಾಯ ಮಿತಿ ಹೆಚ್ಚಿಸಲು ಸರ್ಕಾರ ಗಂಭೀರ ಚಿಂತನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು












Click it and Unblock the Notifications