MBBS ಪದವೀಧರರಿಗೆ ಗ್ರಾಮೀಣ ಸೇವೆ ಕಡ್ಡಾಯದಲ್ಲಿ ವಿನಾಯಿತಿ ಇಲ್ಲ: ಹೈಕೋರ್ಟ್
ಬೆಂಗಳೂರು, ಜುಲೈ 22: ಎಂಬಿಬಿಎಸ್ ಪದವೀಧರರಿಗೆ ಗ್ರಾಮೀಣ ಸೇವೆ ಕಡ್ಡಾಯದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಈ ವಿಷಯದಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಕರಾರು ಮಾಡಿಕೊಟ್ಟಿದ್ದಾರೆ ಎಂದು ಪೀಠ ಹೇಳಿದೆ. 2020-21ನೇ ಸಾಲಿನಲ್ಲಿ ಎಂಬಿಬಿಎಸ್ ಮುಗಿಸಿದ ವಿದ್ಯಾರ್ಥಿಗಳು ಗ್ರಾಮೀಣ ಸೇವೆಗೆ ನೋಂದಾಯಿಸಿಕೊಳ್ಳಬೇಕು ಎಂದು 2021ರ ಜೂನ್ 8ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದನ್ನು ಪ್ರಶ್ನಿಸಿ ಡಾ. ಎನ್. ಪ್ರಾರ್ಥನಾ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು.
ಕೋವಿಡ್ 3ನೇ ಅಲೆಯ ನಿರೀಕ್ಷೆ ಇರುವ ಸಂದರ್ಭದಲ್ಲಿ ವೈದ್ಯಕೀಯ ಪದವಿ ಪಡೆದ ಹೊಸ ವಿದ್ಯಾರ್ಥಿಗಳ ಗ್ರಾಮೀಣ ಸೇವೆ ಸರ್ಕಾರಕ್ಕೆ ಅಗತ್ಯವಿದೆ, 'ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಾರೆ ಎಂಬ ವಿಶ್ವಾಸದಿಂದ ಶುಲ್ಕ ರಿಯಾಯಿತಿಯೊಂದಿಗೆ ವೈದ್ಯಕೀಯ ಶಿಕ್ಷಣವನ್ನು ಸರ್ಕಾರ ನೀಡಿದೆ ಎಂದು ಹೈಕೋರ್ಟ್ ತಿಳಿಸಿದೆ.

ಈ ಅಧಿಸೂಚನೆ ವಿಷಯದಲ್ಲಿ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ಪೀಠ, 'ಒಂದು ವರ್ಷದ ಗ್ರಾಮೀಣ ಸೇವೆಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಿರುವ ಸರ್ಕಾರದ ನಿರ್ಧಾರ ಸಮಂಜಸವಾಗಿದೆ' ಎಂದು ಅಭಿಪ್ರಾಯ ಪಟ್ಚಿದೆ.
ವೃತ್ತಿಪರ ವೈದ್ಯರು ತಮ್ಮ ಕರ್ತವ್ಯ ಅರ್ಥ ಮಾಡಿಕೊಳ್ಳುವ ಸಮಯ ಇದಾಗಿದೆ' ಎಂದು ತಿಳಿಸಿತು. 'ಹೊಸದಾಗಿ ಎಂಬಿಬಿಎಸ್ ಪದವಿ ಪಡೆದವರ ಗ್ರಾಮೀಣ ಸೇವೆ ಜೂನ್ 30ರಿಂದ ಆರಂಭವಾಗಿದೆ.
ಆಡಳಿತ ಮಂಡಳಿ ಕೋಟಾದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯ ಆಗುವುದಿಲ್ಲ. ಆದ್ದರಿಂದ ಇದು ವಿದ್ಯಾರ್ಥಿಗಳಲ್ಲಿ ತಾರತಮ್ಯ ಹುಟ್ಟು ಹಾಕಿದೆ. ಉನ್ನತ ಶಿಕ್ಷಣಕ್ಕಾಗಿ ನೀಟ್ ಪರೀಕ್ಷೆಗೆ ಹಾಜರಾಗಬೇಕಿದ್ದು, ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದರು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications