ಎಂಇಎಸ್ ನಿಷೇಧಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ
ಬೆಂಗಳೂರು, ಫೆಬ್ರವರಿ 25: ಗಡಿನಾಡು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರ ಪುಂಡಾಟಿಕೆ ಹೆಚ್ಚಾಗಿದೆ. ಈ ಬಗ್ಗೆ ಕನ್ನಡ ಪರ ಸಂಘಟನೆಗಳು ಆಕ್ಷೇಪ ಎತ್ತಿದ್ದು, ಪ್ರತಿಭಟನೆಯನ್ನು ಮಾಡುತ್ತಿವೆ. ಬೆಳಗಾವಿಯಲ್ಲಿ ಕನ್ನಡಿಗರ ಹಕ್ಕುಗಳನ್ನು ರಕ್ಷಣೆ ಮಾಡಬೇಕು, ಎಂಇಎಸ್ ನಿಷೇಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದು ಒತ್ತಾಯಿಸಲಾಗಿದೆ.
ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿದ್ದಾರೆ. ರಾಜ್ಯ ಸರ್ಕಾರ ಗಡಿಭಾಗದ ನಿವಾಸಿಗಳ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ. ಗಡಿಭಾಗದ ಜನತೆಯನ್ನು ರಾಜಕೀಯ ಲಾಭಕ್ಕಾಗಿ ಬಳಸುವುದನ್ನು ಬಿಟ್ಟು, ಅವರ ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು. ಇದಕ್ಕೆ ಕಾರಣವಾಗುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯಂತಹ ಸಂಘಟನೆಗಳನ್ನು ನಿಷೇಧಿಸುವುದು ಅವಶ್ಯಕ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಡಿವಿಎಸ್ ಪತ್ರದ ವಿವರ: ಡಿ. ವಿ. ಸದಾನಂದ ಗೌಡರು ಪತ್ರದಲ್ಲಿ ನಾನು ಸಹ ಗಡಿನಾಡಿನವನೇ, ಗಡಿನಾಡಿನ ಕನ್ನಡಿಗರು ನಮ್ಮ ರಾಜ್ಯದ ಗರ್ಭಗುಡಿಯ ಸಮಾನರು. ಆದರೆ ಇಂದು, ಗಡಿನಾಡಿನಲ್ಲಿ ಕನ್ನಡಿಗರ ಆತ್ಮಗೌರವಕ್ಕೆ ದೊಡ್ಡ ಸವಾಲು ಎದುರಾಗಿದೆ.
ಗಡಿನಾಡಿನಲ್ಲಿ ಕನ್ನಡ ಶಾಲೆಗಳ ಸ್ಥಿತಿ ಹೃದಯವಿದ್ರಾವಕವಾಗಿದೆ. ಸರಕಾರ ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ, ನಾವು ನಮ್ಮ ಮುಂದಿನ ಪೀಳಿಗೆಯ ಕನ್ನಡ ಭವಿಷ್ಯವನ್ನು ಕಳೆದುಕೊಳ್ಳಬಹುದು. ಇತ್ತೀಚಿನ ವರ್ಷಗಳಲ್ಲಿ ಗಡಿನಾಡಿನಲ್ಲಿ ಕನ್ನಡ ಶಾಲೆಗಳು ಕಡಿಮೆಯಾಗುತ್ತಿವೆ. ಅಲ್ಲಿಯ ಕನ್ನಡ ಸಂಸ್ಕೃತಿ ಅಪಾಯಕ್ಕೆ ಸಿಲುಕಿದೆ. ಪರಭಾಷೆಯ ಪ್ರಭಾವ ಹೆಚ್ಚುತ್ತಿದ್ದು, ಕನ್ನಡ ಶಾಲೆಗಳು ಸಂಚಲನಗೊಳ್ಳುತ್ತವೆ. ಆದರೆ ಸರಕಾರ ಮಾತ್ರ ಈ ಬಗ್ಗೆ ಮೌನವಾಗಿದೆ.
ಇತ್ತೀಚಿನ ಬೆಳಗಾವಿಯ NWKRTC ಬಸ್ ಸಂಚಾರದ ಕಂಡಕ್ಟರ್ ಮಲ್ಲಪ್ಪ ಹುಕ್ಕೇರಿಯವರ ಮೇಲೆ ನಡೆದ ಹಲ್ಲೆ, ಕರ್ನಾಟಕದ ಗೌರವಕ್ಕೆ ಕಪ್ಪು ಚುಕ್ಕೆ. ಇದಕ್ಕೆ ಕಾರಣವಾದವರು ಶಿಕ್ಷೆಯ ಭಯವಿಲ್ಲದೆ ರಾಜ್ಯದಲ್ಲಿ ತಿರುಗಾಡುತ್ತಿದ್ದಾರೆ. ಈ ಘಟನೆಯ ಮೂಲ ಕಾರಣವೇ ಸರ್ಕಾರದ ಉಚಿತ ಸವಲತ್ತುಗಳ ತಪ್ಪು ನಿರ್ವಹಣೆ. ಕನ್ನಡ ರಾಜ್ಯ ಸಾರಿಗೆ ಬಸ್ನಲ್ಲಿ ಕೆಲಸ ಮಾಡುವ ನೌಕರನ ಮೇಲೆ ಹಲ್ಲೆ ಮಾಡಲಾಗುವುದು, ಆಮೇಲೆ ಅವನ ಮೇಲೆಯೇ POCSO ಕೇಸ್ ಹಾಕಲಾಗುವುದು ಇದು ಸರ್ಕಾರದ ಅಸಹಾಯಕತೆ ಹಾಗೂ ಆಡಳಿತ ವೈಫಲ್ಯದ ಸ್ಪಷ್ಟ ಉದಾಹರಣೆ ಎಂದು ದೂರಿದ್ದಾರೆ.
ಈ ಎಲ್ಲಾ ಘಟನೆಗಳಿಗೆ ಸ್ಪಷ್ಟವಾದ ಪರಿಹಾರಗಳು ಇದ್ದರೂ, ಸರ್ಕಾರವು ಗಡಿನಾಡಿನ ಕನ್ನಡಿಗರ ಹಿತಾಸಕ್ತಿಗೆ ಬೆಂಬಲ ನೀಡುವ ಬದಲು, ಮರಾಠಿ ಸಮುದಾಯಕ್ಕೆ ಮಾತ್ರ ಆದ್ಯತೆ ನೀಡುತ್ತಿದೆ. ವಿಶೇಷವಾಗಿ, ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವ ಸತೀಶ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಮರಾಠಿ ಜನಾಂಗದ ಮುಂದೆ ಮರಾಠಿಯಲ್ಲಿ ಭಾಷಣ ಮಾಡುವುದರಿಂದ ಅವರ ನಿಜಸ್ವರೂಪ ಬೆಳಕಿಗೆ ಬಂದಿದೆ.
ಸ್ವಾಮೀ, ಒಮ್ಮೆ ಗಡಿನಾಡಿನ ಕನ್ನಡಿಗರ ಸಮಸ್ಯೆಗಳನ್ನು ಕೇಳಿ, ಕನ್ನಡಿಗರಿಗೆ ಭರವಸೆ ನೀಡುವ ಬದಲು, ಅವರು ಮರಾಠಿ ಸಮುದಾಯವನ್ನು ಶಾಂತಿಗೊಳಿಸಲು ಮಾತ್ರ ಯತ್ನಿಸುತ್ತಿದ್ದಾರೆ. ಇಂತಹ ಶಕ್ತಿಗಳು ಕರ್ನಾಟಕದ ದುಃಖವನ್ನು ತಗ್ಗಿಸುವ ಬದಲು, ಬೇರೆ ಭಾಷಾ ಪ್ರಭಾವ ಹೆಚ್ಚುವಂತೆ ಮಾಡುತ್ತಿರುವುದು ತುಂಬಾ ಖೇದಕರ.
ಇಲ್ಲಿಗೆ ಮಾತ್ರ ಸೀಮಿತವಾಗದೆ, ಮಹಾರಾಷ್ಟ್ರ ಏಕೀಕರಣ ಸಮಿತಿ ಸಂಘಟನೆಯು ಕರ್ನಾಟಕದ ಗಡಿನಾಡು ಪ್ರದೇಶಗಳಲ್ಲಿ ಅಶಾಂತಿ ಸೃಷ್ಟಿಸಲು, ಕನ್ನಡಿಗರ ಹಕ್ಕುಗಳನ್ನು ಹರಣ ಮಾಡಲು ಪ್ರಯತ್ನಿಸುತ್ತಿದೆ. ಈ ಸಂಘಟನೆಯು ಬೆಳಗಾವಿ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ವಿಲೀನಗೊಳ್ಳುವಂತೆ ಆಗ್ರಹಿಸುತ್ತಿದ್ದು, ಇದು ನಮ್ಮ ರಾಜ್ಯದ ಭೌಗೋಳಿಕ ಮತ್ತು ಸಾಂಸ್ಕೃತಿಕ ಅಖಂಡತೆಗೆ ಧಕ್ಕೆಯಾಗಿದೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಗಡಿನಾಡಿನಲ್ಲಿ ಕನ್ನಡಿಗರಿಗೆ ಶಕ್ತಿಯುತ ಅನುಕೂಲತೆಗಳು ನೀಡುವ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕನ್ನಡ ಶಾಲೆಗಳ ಬಲವರ್ಧನೆ, ಗಡಿನಾಡು ಕನ್ನಡಿಗರಿಗೆ ಸರ್ಕಾರದ ವಿವಿಧ ಯೋಜನೆಗಳ ಅನುಕೂಲತೆ ತಲುಪಿಸುವಿಕೆ, ಗಡಿನಾಡು ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ, ಕನ್ನಡ ಸಾಹಿತ್ಯ ಪರಿಷತ್ತುಗಳ ಕಾರ್ಯಕ್ಷೇತ್ರ ವಿಸ್ತರಣೆ, ಗಡಿನಾಡಿನಲ್ಲಿ ಕನ್ನಡ ನೌಕರರಿಗೆ ಹೆಚ್ಚಿನ ಭದ್ರತಾ ವ್ಯವಸ್ಥೆ ಮುಂತಾದವುಗಳ ಮೂಲಕ ಗಡಿನಾಡಿನ ಸಶಕ್ತತೆಗೆ ಕಾರಣನಾಗಿದ್ದ, ಆದರೆ ಈಗಿನ ಸರ್ಕಾರ ಈ ನಿಲುವಿಗೆ ಬದ್ಧವಿಲ್ಲ.
ಸರ್ಕಾರ ತಕ್ಷಣ ಗಡಿನಾಡಿನ ಕನ್ನಡಿಗರ ರಕ್ಷಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು, ಅಕ್ರಮ ಗೂಂಡಾಗಿರಿ ನಿಲ್ಲಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಮತ್ತು ಉಚಿತ ಸವಲತ್ತುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ನಾವು ಕನ್ನಡಿಗರ ಶಕ್ತಿ, ಏಕತೆ, ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಳ್ಳೋಣ. ನಮ್ಮ ಕರ್ನಾಟಕ, ನಮ್ಮ ಹಕ್ಕು, ನಮ್ಮ ಹೋರಾಟ ಮುಂದೆ ಸಾಗಲಿ! ಎಂದು ಹೇಳಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications