ಪಾರ್ವತಮ್ಮ ಅಗಲಿಕೆಗೆ ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಗಣ್ಯರ ಕಂಬನಿ
ಬೆಂಗಳೂರು, ಮೇ 31: ಕನ್ನಡ ಚಿತ್ರರಂಗದ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿವಿ ಸದಾನಂದ ಗೌಡ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.
"ಡಾ ರಾಜ್ ಪತ್ನಿಯಾಗಿ ಅವರಂತೆಯೇ ಘನತೆ, ವಾತ್ಸಲ್ಯ ಮತ್ತು ಉನ್ನತಿಕೆಯ ವ್ಯಕ್ತಿತ್ವದಿಂದ ಅಮ್ಮ ಎಂದು ಗೌರವಿಸುವಂತಹ ಎತ್ತರದ ಸ್ಥಾನಕ್ಕೆ ಏರಿದವರು ಪಾರ್ವತಮ್ಮ," ಎಂದು ಪಾರ್ವತಮ್ಮ ರಾಜ್ ಕುಮಾರ್ ವ್ಯಕ್ತಿತ್ವವನ್ನು ಯಡಿಯೂರಪ್ಪ ಕೊಂಡಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ಪಾರ್ವತಮ್ಮ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಮತ್ತು ಕಲಾಭಿಮಾನಿಗಳಲ್ಲಿ ಅನಾಥ ಪ್ರಜ್ಞೆ ಉಂಟಾಗಿದೆ," ಎಂದು ಅವರು ಹೇಳಿದ್ದಾರೆ.[ದಿ. ಪಾರ್ವತಮ್ಮ ರಾಜ್ ಕುಮಾರ್ ಅವರ ಮರೆಯಲಾರದ ಚಿತ್ರಗಳು]
ಇನ್ನು "ಪಾರ್ವತಮ್ಮ ರಾಜಕುಮಾರ್ ಅವರು ವಿಧಿವಶರಾಗಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.[ಕನ್ನಡ ಸಿನಿಮಾ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ವಿಧಿವಶ]
|
ಡಿವಿ ಸದಾನಂದ ಗೌಡ

ಅನಂತ್ ಕುಮಾರ್
|
ಸಿದ್ದರಾಮಯ್ಯ
|
ಬಿಎಸ್ ಯಡಿಯೂರಪ್ಪ
"ಕನ್ನಡ ಚಿತ್ರ ರಂಗದ ಆಧಾರ ಸ್ತಂಭದಂತಿದ್ದ ಚಲನಚಿತ್ರ ನಿರ್ಮಾಪಕಿ ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಡಾ ರಾಜ್ ಪತ್ನಿಯಾಗಿ ಅವರಂತೆಯೇ ಘನತೆ, ವಾತ್ಸಲ್ಯ ಮತ್ತು ಉನ್ನತಿಕೆಯ ವ್ಯಕ್ತಿತ್ವದಿಂದ ಅಮ್ಮ ಎಂದು ಗೌರವಿಸುವಂತಹ ಎತ್ತರದ ಸ್ಥಾನಕ್ಕೆ ಏರಿದ್ದರು. ಅವರ ನಿಧನದಿಂದ ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಮತ್ತು ಕಲಾಭಿಮಾನಿಗಳಲ್ಲಿ ಅನಾಥ ಪ್ರಜ್ಞೆ ಉಂಟಾಗಿದೆ," ಎಂದು ಬಿಎಸ್ ಯಡಿಯೂರಪ್ಪ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
|
ಸಿಟಿ ರವಿ
"ಇಡೀ ಕನ್ನಡ ಚಿತ್ರರಂಗಕ್ಕೆ ಮಾತೃ ಸ್ಥಾನ ನೀಡಿದ್ದ ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ರವರ ನಿಧನದಿಂದ ಮನಸ್ಸಿಗೆ ನೋವಾಗಿದೆ. ಅಮ್ಮನವರ ಆತ್ಮಕ್ಕೆ ಭಗವಂತ ಶಾoತಿ ನೀಡಲ," ಎಂದು ಮಾಜಿ ಸಚಿವ ಸಿಟಿ ರವಿ ಟ್ವಿಟ್ಟರ್ ಸಂದೇಶದಲ್ಲಿ ಹೇಳಿದ್ದಾರೆ.
|
ಎಸ್ ಸುರೇಶ್ ಕುಮಾರ್
ಇನ್ನು ಬಿಜೆಪಿ ನಾಯಕ ಎಸ್ ಸುರೇಶ್ ಕುಮಾರ್ ಕೂಡಾ ಟ್ವೀಟ್ ಮಾಡಿದ್ದು, "ಪಾರ್ವತಮ್ಮ ರಾಜ್ ಕುಮಾರ್ ರವರ ನಿಧನಕ್ಕೆ ನನ್ನ ಸಂತಾಪ. ಮೇರು ನಟ ಡಾ. ರಾಜ್ ಕುಮಾರ್ ರವರ ಧರ್ಮಪತ್ನಿಯಾಗಿ ಈ ಧೀಮಂತ ಮಹಿಳೆ ಕನ್ನಡ ಚಿತ್ರರಂಗಕ್ಕೆ ಶಕ್ತಿಯಾಗಿದ್ದರು," ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿ ಪದ್ಮಾವತಿ
ಪಾರ್ವತಮ್ಮ ರಾಜ್ ಕುಮಾರ್ ಅವರೊಬ್ಬರು ವಿಶೇಷ ಮಹಿಳೆ. ಪ್ರತಿಯೊಬ್ಬರ ಕನ್ನಡಿಗರ ಮನಸ್ಸಲ್ಲಿ ಮಾತೃ ಸ್ವರೂಪಿಣಿಯಾಗಿ ಉಳಿದುಕೊಂಡಿದ್ದಾರೆ. ಹಲವು ಕಾದಂಬರಿ ಆಧಾರಿತ ಸಾಮಾಜಿಕ ಕಳಕಳಿ ಉಳ್ಳ ಚಿತ್ರಗಳನ್ನು ಅವರು ಕೊಡುಗೆಯಾಗಿ ನೀಡಿದವರು. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಕೇಳಿಕೊಳ್ಳುತ್ತೇನೆ," ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಜಿ ಪದ್ಮಾವತಿ ಹೇಳಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications