ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣ, ವರದಿ ಕೇಳಿದ ಎಐಸಿಸಿ
ಬೆಂಗಳೂರು, ಜುಲೈ 11 : ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಪ್ರಕರಣಗಳಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗುತ್ತಿರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ವರದಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಸೂಚನೆ ನೀಡಿದೆ.
ಮಂಗಳೂರು
ಐಜಿ
ಕಚೇರಿ
ಡಿವೈಎಸ್ಪಿ
ಎಂ.ಕೆ.ಗಣಪತಿ
ಮತ್ತು
ಚಿಕ್ಕಮಗಳೂರು
ವಿಭಾಗದ
ಡಿವೈಎಸ್ಪಿ
ಕಲ್ಲಪ್ಪ
ಹಂಡಿಭಾಗ್
ಆತ್ಮಹತ್ಯೆ
ವಿಚಾರದಲ್ಲಿ
ಸರ್ಕಾರದ
ವಿರುದ್ಧ
ಪ್ರತಿಪಕ್ಷಗಳು
ವಾಗ್ದಾಳಿ
ನಡೆಸುತ್ತಿವೆ.
ಇದರಿಂದ
ಸರ್ಕಾರದ
ವರ್ಚಸ್ಸಿಗೆ
ಧಕ್ಕೆ
ಆಗುತ್ತಿದೆ.
[ಸಚಿವ
ಜಾರ್ಜ್
ವಿರುದ್ಧ
ಗಣಪತಿ
ಪತ್ನಿ,
ಪುತ್ರರಿಂದ
ದೂರು]
ಅದರಲ್ಲೂ ಎಂ.ಕೆ.ಗಣಪತಿ ಅವರು ಆತ್ಮಹತ್ಯೆಗೆ ಮುನ್ನ 'ನನಗೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. [ಜಾರ್ಜ್ ವಿರುದ್ಧ FIR ದಾಖಲಿಸಬೇಕೆ?, ಓದುಗರ ಅಭಿಪ್ರಾಯ]
ಗಣಪತಿ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಹಿಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ವಿವಿಧ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಆದ್ದರಿಂದ, ಎಐಸಿಸಿ ಎರಡೂ ಪ್ರಕರಣದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದೆ. [ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]
ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ವರದಿ ನೀಡುವಂತೆ ಎಐಸಿಸಿ ಸೂಚನೆ ನೀಡಿದೆ. ಮೊತ್ತೊಂದು ಕಡೆ ಜಾರ್ಜ್ ರಾಜೀನಾಮೆ ನೀಡುವ ತನಕ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲು ಬಿಜೆಪಿ ನಿರ್ಧರಿಸಿದೆ. [DySP ಕಲ್ಲಪ್ಪ ಆತ್ಮಹತ್ಯೆ]
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಠಾಣಾ ವ್ಯಾಪ್ತಿಯಲ್ಲಿರುವ ಮಾವನ ಮನೆಯಲ್ಲಿ ಕಲ್ಲಪ್ಪ ಹಂಡಿಭಾಗ್ ಅವರು ಜುಲೈ 5ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 7ರಂದು ಎಂ.ಕೆ.ಗಣಪತಿ ಅವರು ಮಡಿಕೇರಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.