ಕಲ್ಲಪ್ಪ ಆತ್ಮಹತ್ಯೆ ಪ್ರಕರಣ, ಸಿಐಡಿಯಿಂದ ತೀವ್ರ ವಿಚಾರಣೆ
ಚಿಕ್ಕಮಗಳೂರು, ಜುಲೈ 07: ಡಿವೈಎಸ್ಪಿ ಕಲ್ಲಪ್ಪ ಅವರ ಮೇಲಿನ ಅಪಹರಣ ಆರೋಪ, ಆತ್ಮಹತ್ಯೆ ಹಿಂದಿನ ಸತ್ಯವನ್ನು ಶೋಧಿಸಲು ಸಿಐಡಿ ತಂಡ ಚಿಕ್ಕಮಗಳೂರಿಗೆ ಆಗಮಿಸಿದೆ. ಕಲ್ಲಪ್ಪ ಅವರ ವಿರುದ್ಧ ಕಿಡ್ನಾಪ್ ದೂರು ನೀಡಿರುವ ತೇಜಸ್ ಗೌಡ ಸೇರಿದಂತೆ ಹಲವಾರು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ. [ಸಿಐಡಿಗೆ ಮಾಹಿತಿ ನೀಡುವುದು ಹೇಗೆ?]
ಚಿಕ್ಕಮಗಳೂರಿನ ಪೊಲೀಸ್ ಅತಿಥಿಗೃಹದಲ್ಲಿ ತೇಜಸ್ ಗೌಡ, ಪವನ್, ಶಿವು ಅವರ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ರಾಜಪ್ಪ ನೇತೃತ್ವದ ಸಿಐಡಿ ತನಿಖಾ ತಂಡಕ್ಕೆ ಇನ್ಸ್ ಪೆಕ್ಟರ್ ರಾಕೇಶ್ ಅವರು ನೆರವಾಗುತ್ತಿದ್ದಾರೆ. [ಹಂದಿಗುಂದಿ ಗ್ರಾಮದ ಪ್ರಾಮಾಣಿಕ ಅಧಿಕಾರಿ ಕಲ್ಲಪ್ಪ ವ್ಯಕ್ತಿಚಿತ್ರ]

ಜೂನ್ 27ರಂದು ಮಾಧವ ಎಂಬುವವರಿಗೆ ಸೇರಿರುವ ತೋಟದಲ್ಲಿ ಚಿಕ್ಕೊಲಳೆ ಗ್ರಾಮದಲ್ಲಿ ಇಸ್ಪೀಟ್ ಜೂಜಾಡುತ್ತಿದ್ದವರ ಮೇಲೆ ಇನ್ಸ್ ಪೆಕ್ಟರ್ ರಾಕೇಶ್ ಅವರು ದಾಳಿ ಮಾಡಿ 26ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದರು. [ತೇಜಸ್ ಗೌಡ ಅಪಹರಣ, ಪ್ರಮುಖ ಆರೋಪಿ ಬಂಧನ]
ಈ ಪೈಕಿ ತೇಜಸ್ ಗೌಡ ಸೇರಿದಂತೆ 6 ಮಂದಿಗೆ ಅಂದಿನ ದಿನವೇ ಜಾಮೀನು ಸಿಕ್ಕಿತ್ತು. ಮರುದಿನ ತೇಜಸ್ ಕಿಡ್ನಾಪ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಬಿಜೆಪಿ ನಗರ ಸಭಾ ಸದಸ್ಯ ಸುಧೀರ್ ಅವರನ್ನು ಸಿಐಡಿ ತಂಡ ಪ್ರಶ್ನಿಸಿದೆ.[ಕಲ್ಲಪ್ಪ ಅವರ ತೇಜೋವಧೆ ಮಾಡಬೇಡಿ : ಪ್ರತಾಪ್ ಸಿಂಹ]

ಕಲ್ಲಪ್ಪ ಅವರ ಜತೆ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಾದ ರಂಗನಾಥ್, ಜಗದೀಶ್, ರಮೇಶ್ ಅವರಿಂದ ಕೂಡಾ ಸಿಐಡಿ ತಂಡ ಮಾಹಿತಿ ಪಡೆದುಕೊಂಡಿದೆ. [ಕಲ್ಲಪ್ಪ ಅವರಿಗೆ ಇಲಾಖೆ ಕಿರುಕುಳ ನೀಡಿಲ್ಲ: ಎಸ್ಪಿ ಸಂತೋಷ್]
ಕಿಡ್ನಾಪ್ ಪ್ರಕರಣದಲ್ಲಿ ಆರೋಪಿಗಳು ಎನ್ನಲಾದ ಚಿಟ್ ಫಂಡ್ ಸಂಸ್ಥೆ ನಡೆಸುವ ನಟರಾಜ್ ಹಾಗೂ ಹಿಂದೂ ಸಂಘಟಕ ಪ್ರವೀಣ್ ಖಾಂಡ್ಯ ಅವರ ಬಂಧನವಾಗಿದೆ ಎಂಬ ಸುದ್ದಿಯನ್ನು ಸಿಐಡಿ ಐಜಿಪಿ ಪ್ರತಾಪ್ ರೆಡ್ಡಿ ತಳ್ಳಿ ಹಾಕಿದ್ದಾರೆ.[ಕಿಡ್ನಾಪ್ ಆಗಿದ್ದ ತೇಜಸ್ ಹೇಳಿದ ಕಥೆ]
ಡಿಐಜಿ ನಾರಂಗ್ ಎಂಟ್ರಿ: ಡಿಐಜಿ ಸೋನಿಯಾ ನಾರಂಗ್, ಎಸ್ಪಿ ಹೈದಿ ಮಾರ್ಟಿನ್ ಅವರು ಕಲ್ಲಪ್ಪ ಅವರ ಮಾವ ಸಿದ್ರಾಮಪ್ಪ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಪೊಲೀಸ್ ಇಲಾಖೆಯಿಂದ ಕಿರುಕುಳವಾಗಿದೆ ಎಂದು ಕಲ್ಲಪ್ಪ ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications