ಎಂ.ಕೆ.ಗಣಪತಿ ಆತ್ಮಹತ್ಯೆ, ನ್ಯಾಯಾಂಗ ತನಿಖೆ?
ಬೆಂಗಳೂರು, ಜುಲೈ 09 : ಡಿವೈಎಸ್ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಯುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರ ಈಗಾಗಲೇ ತನಿಖೆಯನ್ನು ಸಿಐಡಿಗೆ ವಹಿಸಿದೆ. ಆದರೆ ಪ್ರತಿಪಕ್ಷಗಳಿಂದ ತಪ್ಪಿಸಿಕೊಳ್ಳಲು ಈ ತೀರ್ಮಾನ ಕೈಗೊಳ್ಳಬಹುದು.
ಮಳೆಗಾಲದ
ವಿಧಾನಮಂಡಲ
ಅಧಿವೇಶನ
ಈಗಾಗಲೇ
ಆರಂಭವಾಗಿದೆ.
ಸೋಮವಾರದ
ಕಲಾಪದಲ್ಲಿ
ಪ್ರತಿಪಕ್ಷಗಳು
ಡಿವೈಎಸ್ಪಿ
ಆತ್ಮಹತ್ಯೆ
ಪ್ರಕರಣವನ್ನು
ಪ್ರಸ್ತಾಪಿಸಲಿವೆ.
ಸಿಬಿಐ
ತನಿಖೆಗೆ
ನೀಡುವಂತೆಯೂ
ಬಿಜೆಪಿ
ಮತ್ತು
ಜೆಡಿಎಸ್
ಒತ್ತಾಯಿಸಬಹುದು.
[ಗಣಪತಿ
ಆತ್ಮಹತ್ಯೆ,
ಶುಕ್ರವಾರದ
10
ಬೆಳವಣಿಗೆಗಳು]
ಆದ್ದರಿಂದ, ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸೋಮವಾರ ಸದನದಲ್ಲಿ ಗದ್ದಲ ಹೆಚ್ಚಾದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿಯೇ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. [ಜಾರ್ಜ್ ವಿರುದ್ಧ FIR ದಾಖಲಿಸಬೇಕೆ?, ಓದುಗರ ಅಭಿಪ್ರಾಯ]
'ನನಗೆ ಮುಂದೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಹೇಳಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ, ಸೋಮವಾರ ಈ ಬಗ್ಗೆ ಸದನದಲ್ಲಿ ಬಿಸಿ-ಬಿಸಿ ಚರ್ಚೆ ನಡೆಯಲಿದೆ. [ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]
ಅವರು ಹೇಳಿದಂತೆ ಕೇಳಲು ಆಗುತ್ತದೆಯೇ? : ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದಾದರೂ ಪ್ರಕರಣವನ್ನು ಸಿಬಿಐಗೆ ನೀಡಿದೆಯೇ?' ಎಂದು ಪ್ರಶ್ನಿಸಿದರು.[ಗಣಪತಿ ಆತ್ಮಹತ್ಯೆ : ಯಾರು, ಏನು ಹೇಳಿದರು?]
'ಪ್ರಕರಣದ ಬಗ್ಗೆ ಈಗಾಗಲೇ ಸಿಐಡಿ ತನಿಖೆ ನಡೆಯುತ್ತಿದೆ. ಬೇಗ ತನಿಖೆ ಮುಗಿಯುತ್ತದೆ. ವಿರೋಧ ಪಕ್ಷದವರು ಹೇಳಿದಂತೆ ಕೇಳಲು ಆಗುತ್ತಾ?. ಜನರ ಹಿತಾಸಕ್ತಿಯಂತೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ' ಎಂದು ಸಿದ್ದರಾಮಯ್ಯ ಹೇಳಿದರು.