ಇಲಾಖೆಯಲ್ಲಿ ಕಿರುಕುಳ ತಾಳಲಾರದೆ ಡಿಜಿಪಿಗೆ ಪತ್ರ ಬರೆದ ಡಿವೈಎಸ್ಪಿ
ಬೆಂಗಳೂರು, ಜು.7: ಪೊಲೀಸ್ ಇಲಾಖೆಯಲ್ಲಿ ಪೇದೆಗಳಿಗೆ ಉನ್ನತ ಅಧಿಕಾರಿಗಳು ಕಿರುಕುಳ ನೀಡುತ್ತಾರೆ ಎಂಬ ಆರೋಪ ಸರ್ವೇ ಸಾಮಾನ್ಯ, ಆದರೆ ಡಿವೈಎಸ್ಪಿ ಮಟ್ಟದ ಅಧಿಕಾರಿ ಒಂದು ದಿನದ ರಜೆಗಾಗಿ ಡಿಜಿಪಿಗೆ ಮೊರೆ ಹೋದ ಘಟನೆ ಬೆಳಕಿಗೆ ಬಂದಿದೆ.
ಡಿವೈಎಸ್ಪಿ ಮಟ್ಟದ ಅಧಿಕಾರಿಯೊಬ್ಬರು ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಅವರಿಗೆ ಕಳೆದ ಡಿಸೆಂಬರ್ನಿಂದ ಈವರೆಗೆ ನಾಲ್ಕು ಪತ್ರಗಳನ್ನು ಬರೆದಿದ್ದು, ತಮ್ಮ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಹೇಳಿಕೊಳ್ಳಲು ಪರದಾಡುತ್ತಿದ್ದಾರೆ.
ಅಷ್ಟೇ ಅಲ್ಲ ಆತ್ಮಹತ್ಯೆಗೆ ಒಳಗಾದ ಡಿವೈಎಸ್ ಎಂಕೆ ಗಣಪತಿ ಪ್ರಕರಣವನ್ನು ಪ್ರಸ್ತಾಪಿಸಿರುವ ಡಿವೈಎಸ್ಪಿ ಮೇಲಾಧಿಕಾರಿಗಳ ಕಿರುಕುಳ ಹಾಗೂ ಹಲವಾರು ನ್ಯೂನತೆಗಳ ಕುರಿತಂತೆ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. ಈ ಪತ್ರ ಈಗ ಬಹಿರಂಗಗೊಂಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಡಿವೈಎಸ್ಪಿ ತರಬೇತಿ ಕ್ಯಾಂಪ್ಗೆ ಬಿಟ್ಟುಬರಲು 1 ದಿನದ ರಜೆ ಸಿಗದೆ ಪರದಾಡಿದ್ದಾರೆ. 9 ದಿನಗಳ ಮಮೊದಲೇ ರಜೆಗೆ ಅರ್ಜಿ ಹಾಕಿದ್ದರೂ ಸಿಗಲಿಲ್ಲ, ರಜೆ ದೊರೆಯದ ಹಿನ್ನೆಲೆಯಲ್ಲಿ ಮೌಖಿಕವಾಗಿ ತಿಳಿಸಿ ಅಧಿಕಾರಿ ಹೋಗಿದ್ದರು, ಇದನ್ನು ಅಶಿಸ್ತು ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್ ಜಾರಿಮಾಡಲಾಗಿತ್ತು.
ಹೀಗಾಗಿ ಅಸಮಾಧಾನಗೊಂಡ ಡಿವೈಎಸ್ಪಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು ಕೆಲವರಿಗೆ ಮೂರ್ನಾಲ್ಕು ದಿನ ಹೊರಗಡೆ ಹೋಗಲು ಅನುಮತಿ ನೀಡಲಾಗಿತ್ತು ನನಗೇಕೆ ಹೀಗೆ ಎಂದು ಪ್ರಶ್ನಿಸಿದ್ದಾರೆ. ನೀಲಮಣಿರಾಜುಗೆ ಸರಿಯಾಗಿ ಕನ್ನಡ ಬಾರದೆ ಇರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದು, ಪತ್ರದಲ್ಲಿರುವುದನ್ನು ಓದಿ ಅರಗಿಸಿಕೊಳ್ಳಲು ಅವರಿಗೆ ಸಾಧ್ಯವಿಲ್ಲ ಹಾಗಾಗಿ ನೇರವಾಗಿ ಭೇಟಿಯಾಗಿ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದ್ದಾರೆ.
ಮಂಗಳೂರು ಐಜಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅವರು ಮಡಿಕೇರಿಯ ವಸತಿಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ವಿಷಯಕ್ಕೆ ಸಂಬಂಧಿಸಿದಂತೆ ಸಹ ಪತ್ರದಲ್ಲಿ ಉಲ್ಲೇಖಿಸಿದ್ದು ಒಂದು ದಿನ ಮೊದಲೇ ಕ್ಲೀನ್ ಚಿಟ್ ನೀಡಿದ್ದರೆ ಅಂದು ಗಣಪತಿ ಬದುಕುತ್ತಿದ್ದರು ಎಂದಿದ್ದಾರೆ.
ಕಲ್ಲಪ್ಪ ಹಂಡಿಬಾಗ್ ಪ್ರಕರಣದಲ್ಲೂ ಪ್ರಾಮಾಣಿಕ ತನಿಖೆ ನಡೆದಿಲ್ಲ, ಇಲಾಖೆಯಲ್ಲಿನ ಕಿರುಕುಳದಿಂದ ಇಂತಹ ಘಟನೆಗಳು ಸಂಭವಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications