Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು ನಗರದಲ್ಲಿ ಆಸ್ತಿ ದಾಖಲೆಗಳ ಸರಳೀಕರಣದ ಹೆಸರಿನಲ್ಲಿ ಘೋಷಿಸಲಾದ ಎ-ಖಾತಾ ಪರಿವರ್ತನೆ ಯೋಜನೆ, ಈಗ ಸಾರ್ವಜನಿಕರ ನಿರೀಕ್ಷೆಗಳಿಗೆ ವಿರುದ್ಧವಾಗಿ ಸಂಕೀರ್ಣತೆ ಮತ್ತು ವಿಳಂಬದ ಸಂಕೇತವಾಗಿ ಪರಿಣಮಿಸಿದೆ. ಲಕ್ಷಾಂತರ ಬಿ-ಖಾತಾ ಆಸ್ತಿಗಳಿಗೆ ಕಾನೂನು ಮಾನ್ಯತೆ ನೀಡಬೇಕಿದ್ದ ಈ ಮಹತ್ವಾಕಾಂಕ್ಷಿ ಯೋಜನೆ, ಕಾರ್ಯಗತಗೊಳಿಸುವ ಹಂತದಲ್ಲಿ ತೀವ್ರ ಕುಂಠಿತಗೊಂಡಿದ್ದು, ಸರ್ಕಾರದ ಆಡಳಿತ ಸಾಮರ್ಥ್ಯ ಮತ್ತು ಪಾರದರ್ಶಕತೆ ಕುರಿತು ಪ್ರಶ್ನೆಗಳನ್ನು ಎಬ್ಬಿಸಿದೆ. ಸಾರ್ವಜನಿಕರು ಸುಗಮ ಸೇವೆಯ ನಿರೀಕ್ಷೆಯಲ್ಲಿ ಇದ್ದಾಗ, ಕಡಿಮೆ ಪ್ರಮಾಣದ ಅರ್ಜಿ ವಿಲೇವಾರಿ ಮತ್ತು ಹೆಚ್ಚುತ್ತಿರುವ ಅಸಮಾಧಾನ ಈ ಯೋಜನೆಯ ನಿಜಸ್ಥಿತಿಯನ್ನು ಹೊರಹಾಕುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಸುಮಾರು 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ ಪರಿವರ್ತಿಸುವ ಕಾಂಗ್ರೆಸ್ ಸರ್ಕಾರದ ಯೋಜನೆ ಇಂದು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಯೋಜನೆ ಘೋಷಣೆಯಾಗಿ ಆರು ತಿಂಗಳು ಕಳೆದರೂ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಕೇವಲ ಶೇ.10ಕ್ಕಿಂತ ಕಡಿಮೆ ಅರ್ಜಿಗಳು ವಿಲೇವಾರಿಯಾಗಿರುವುದು ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿದೆ.

E Khata

ಪಾಲಿಕೆಯ ಅಂಕಿ-ಅಂಶಗಳ ಪ್ರಕಾರ, ನಗರದಲ್ಲಿ ಸುಮಾರು 8.25 ಲಕ್ಷ ಬಿ-ಖಾತಾ ಆಸ್ತಿಗಿದ್ದರೂ, ಕೇವಲ 8,308 ಅರ್ಜಿಗಳು ಮಾತ್ರ ಸ್ವೀಕೃತವಾಗಿರುವುದು ಸರ್ಕಾರದ ವಿಶ್ವಾಸಾರ್ಹತೆ ಎಷ್ಟು ಪಾತಾಳಕ್ಕೆ ಕುಸಿದಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ.

ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿ: 'ಸಿಎಂಗೆ ದೋಸೆ ಮಜಾ, ಮಕ್ಕಳಿಗೆ ಜೀವ ಭಯ' ಎಂದ ಆರ್. ಅಶೋಕ್
ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿ: 'ಸಿಎಂಗೆ ದೋಸೆ ಮಜಾ, ಮಕ್ಕಳಿಗೆ ಜೀವ ಭಯ' ಎಂದ ಆರ್. ಅಶೋಕ್

ವ್ಯಾಪಕವಾಗಿ ಹರಡಿರುವ ಲಂಚಗುಳಿತದ ಭೀತಿಯಿಂದಾಗಿ ಸಾರ್ವಜನಿಕರು ಈ ಪ್ರಕ್ರಿಯೆಯಿಂದ ದೂರ ಉಳಿಯುತ್ತಿದ್ದಾರೆ. ಸಲ್ಲಿಕೆಯಾಗಿರುವ ಅಲ್ಪ ಪ್ರಮಾಣದ ಅರ್ಜಿಗಳಲ್ಲಿ ಕೇವಲ 818 ಅರ್ಜಿಗಳಿಗೆ ಮಾತ್ರ ಇ-ಖಾತಾ ಮಂಜೂರು ಮಾಡಲಾಗಿದೆ. ಉಳಿದ 7,490 ಅರ್ಜಿಗಳು ಧೂಳು ಹಿಡಿಯುತ್ತಿದ್ದು, ಸಾರ್ವಜನಿಕರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಈ ಅಂಕಿಅಂಶಗಳೇ ಹೇಳುವಂತೆ, ಈ ಯೋಜನೆ ಬೆಂಗಳೂರಿಗರ ಸಮಸ್ಯೆಗಳನ್ನು ಪರಿಹರಿಸುವ ಬದಲು ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವ "ಲೂಟಿ ವ್ಯವಸ್ಥೆ"ಯಾಗಿ ಬದಲಾಗಿದೆ ಎಂಬುದು ಸ್ಪಷ್ಟವಾಗುತ್ತಿದೆ. "ಸೇವೆ"ಯ ಹೆಸರಿನಲ್ಲಿ ನಡೆಯುತ್ತಿರುವ ಈ ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತಿದೆ ಎಂಬ ಭಾವನೆ ಜನಸಾಮಾನ್ಯರಲ್ಲಿ ಗಾಢವಾಗಿ ಬೇರೂರಿದೆ.

ಸಿದ್ದರಾಮಯ್ಯ ವಿರುದ್ಧ ಆರ್‌. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ
ಸಿದ್ದರಾಮಯ್ಯ ವಿರುದ್ಧ ಆರ್‌. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ

ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಈ ಅಭಿಯಾನದ ವೈಫಲ್ಯಕ್ಕೆ ಕಾಂಗ್ರೆಸ್ ಸರ್ಕಾರದ ಒಳಜಗಳವೇ ಮುಖ್ಯ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ಅಧಿಕಾರದ ಹಪಾಹಪಿ ಹಾಗೂ ಕುರ್ಚಿ ಕಿತ್ತಾಟದಲ್ಲಿ ಸಾಮಾನ್ಯ ಜನರ ಮೂಲಭೂತ ಸಮಸ್ಯೆಗಳು ಮೂಲೆಗುಂಪಾಗಿವೆ. ಕೇವಲ ಬಣ್ಣಬಣ್ಣದ ಜಾಹೀರಾತುಗಳು ಮತ್ತು ಸುಳ್ಳು ಭರವಸೆಗಳ ಮೂಲಕ ಭ್ರಮೆ ಸೃಷ್ಟಿಸುತ್ತಿರುವ ಸರ್ಕಾರ, ಜನರಿಗೆ ಸಿಗಬೇಕಾದ ಕನಿಷ್ಠ ಸೇವೆಗಳನ್ನು ನೀಡುವಲ್ಲಿಯೂ ವಿಫಲವಾಗಿದೆ. ಈ ಆಡಳಿತಾತ್ಮಕ ಅಸಮರ್ಥತೆ ಮತ್ತು ಲಂಚಗುಳಿತಕ್ಕೆ ಬೆಂಗಳೂರಿನ ನಾಗರಿಕರು ಮುಂಬರುವ ದಿನಗಳಲ್ಲಿ ತಕ್ಕ ಉತ್ತರ ನೀಡುವುದು ನಿಶ್ಚಿತ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+