ಇ-ಖಾತಾದಿಂದ ಸಂಕಷ್ಟ: ಬೆಂಗಳೂರು, ಮೈಸೂರು ರಿಯಲ್ ಎಸ್ಟೇಟ್ ಮೇಲೆ ಕಾರ್ಮೋಡ, 1 ಸಾವಿರ ಕೋಟಿ ರೂ ಮೌಲ್ಯದ ಆಸ್ತಿ ನೋಂದಣಿ ವಿಳಂಬ
E-Khata: ಕರ್ನಾಟಕದಲ್ಲಿ ಆಸ್ತಿಗಳ ಮಾರಾಟ ಹಾಗೂ ಖರೀದಿಯಲ್ಲಿ ಆಗುವ ಲೋಪಗಳನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಇ - ಖಾತಾ ಪರಿಚಯಿಸಿದೆ. ಇದು ಆಸ್ತಿಗಳ ವಿವರ ಹೊಂದಿರುವ ಡಿಜಿಟಲ್ ಸ್ವರೂಪವಾಗಿದೆ. ಆದರೆ ಇ ಖಾತಾ ವಿತರಣೆಯಲ್ಲಿ ಕೆಲವೊಂದು ಸಮಸ್ಯೆಗಳು ಸಹ ಸೃಷ್ಟಿ ಆಗಿವೆ. ಬೆಂಗಳೂರಿನ ನಂತರ ಕರ್ನಾಟಕದ ಮತ್ತೊಂದು ಪ್ರಮುಖ ನಗರದಲ್ಲಿ ಇ ಖಾತಾ ಸಮಸ್ಯೆ ಆಗಿದ್ದು, ಇದರಿಂದ ರಿಯಲ್ ಎಸ್ಟೇಟ್ನ ಮೇಲೆ ಪರಿಣಾಮ ಬೀರಿದೆ. ಇ ಖಾತಾ ವಿತರಣೆ ಸಮಸ್ಯೆಯಿಂದಾಗಿ ಬರೋಬ್ಬರಿ 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ನೋಂದಣಿ ವಿಳಂಬವಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಆಸ್ತಿಗಳಿಗೆ ಇ - ಖಾತಾ ಸಮಸ್ಯೆ ಎದುರಾದ ನಂತರ ಇದೀಗ ಮೈಸೂರಿನಲ್ಲೂ ಇ - ಖಾತಾ ವಿಚಾರದಲ್ಲಿ ಭಾರೀ ಸಮಸ್ಯೆ ಎದುರಾಗಿದೆ. ಕರ್ನಾಟಕ ಸರ್ಕಾರವು ಪ್ರಾಪರ್ಟಿಗಳ ರಿಜಿಸ್ಟ್ರೇಷನ್ ಹಾಗೂ ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳಿಗೆ ಕಡ್ಡಾಯ ಇ-ಖಾತಾ ವ್ಯವಸ್ಥೆ ಜಾರಿ ಮಾಡಿದೆ. ಪ್ರಾಪರ್ಟಿಗಳಿಗೆ ಇ ಖಾತಾ ವಿತರಣೆಯನ್ನು ಮೊದಲು ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ ಪರಿಚಯಿಸಲಾಗಿತ್ತು.

ಇದಾದ ನಂತರ ಇ ಖಾತಾ ವಿತರಣೆ ಹಾಗೂ ಕಡ್ಡಾಯವನ್ನು ಕರ್ನಾಟಕದಾದ್ಯಂತ ವಿಸ್ತರಿಸಲಾಗಿತ್ತು. ಆದರೆ ಇ ಖಾತಾ ವಿತರಣೆಯಲ್ಲಿನ ತಾಂತ್ರಿಕ ದೋಷಗಳಿಂದಾಗಿ ಮೈಸೂರು ಜಿಲ್ಲೆಯಲ್ಲಿ ಅಂದಾಜು 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ನೋಂದಣಿ ಎರಡೂವರೆ ತಿಂಗಳಿಗೂ ಹೆಚ್ಚು ಕಾಲ ಬಾಕಿ ಉಳಿದಿದೆ ಎಂದು ಹೇಳಲಾಗಿದೆ. ಈ ಸಂಬಂಧ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಕರ್ನಾಟಕ ಸರ್ಕಾರದ ಕಡ್ಡಾಯ ಇ-ಖಾತಾ ವ್ಯವಸ್ಥೆಯಲ್ಲಿನ ದೋಷಗಳಿಂದಾಗಿ ಮೈಸೂರಿನಲ್ಲಿ ಅಂದಾಜು 1,000 ಕೋಟಿ ಮೌಲ್ಯದ ಆಸ್ತಿ ನೋಂದಣಿ ಎರಡೂವರೆ ತಿಂಗಳಿಗೂ ಹೆಚ್ಚು ಕಾಲ ಸ್ಥಗಿತಗೊಂಡಿದೆ. ದೀರ್ಘಕಾಲದ ಇ ಖಾತಾ ಸಮಸ್ಯೆಯಿಂದಾಗಿ ಕಾನೂನುಬದ್ಧ ಆಸ್ತಿ ಮಾರಾಟ ಮತ್ತು ಅಡಮಾನ ವಹಿವಾಟುಗಳ ಮೇಲೆ ಭಾರೀ ಪರಿಣಾಮ ಬೀರಿದೆ. ಇ ಖಾತಾದಲ್ಲಿ ಎದುರಾಗಿರುವ ಸಮಸ್ಯೆಗಳಿಂದಾಗಿ ಡೆವಲಪರ್ಗಳು ಮತ್ತು ಮನೆ ಖರೀದಿದಾರರು ಅಡಕತ್ತರಿಯಲ್ಲಿ ಸಿಲುಕಿದಂತೆ ಆಗಿದೆ.
ಪ್ರಾಪರ್ಟಿಗಳಿಗೆ ಇ - ಖಾತಾ ವಿತರಣೆಯಲ್ಲಿ ಎರಡೂವರೆ ತಿಂಗಳುಗಳಿಂದ ವಿಳಂಬವಾಗಿದೆ. ಇನ್ನೂ ಯಾವುದೇ ಆಶಾದಾಯಕ ಬೆಳವಣಿಗೆಯು ಇ ಖಾತಾ ವಿತರಣೆಯಲ್ಲಿ ಆಗಿಲ್ಲ. ಸರ್ಕಾರವು ಇ ಖಾತಾ ವಿತರಣೆ ಪ್ರಕ್ರಿಯೆಯಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಬೇಕು. ಎಲ್ಲಾ ತಾಂತ್ರಿಕ ದೋಷಗಳನ್ನು ಪರಿಹರಿಸಬೇಕು ಮತ್ತು ಸುಗಮ ಇ ಖಾತಾ ವಿತರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಪ್ರಾಪರ್ಟಿದಾರರು ಆಗ್ರಹಿಸಿದ್ದಾರೆ.
ಡಿಜಿಟಲ್ ಇ-ಖಾತಾ ವ್ಯವಸ್ಥೆಯಲ್ಲಿನ ಕೆಲವೊಂದು ತಾಂತ್ರಿಕ ದೋಷಗಳು ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುವ ರಿಯಲ್ ಎಸ್ಟೇಟ್ನ ಮೇಲೆ ಪರಿಣಾಮ ಬೀರಿದೆ. ಬೆಂಗಳೂರಿನಲ್ಲೂ ಇ ಖಾತಾ ವಿತರಣೆ ಸಮಸ್ಯೆ ಆಗುತ್ತಿದ್ದು, ಇದು ರಿಯಲ್ ಎಸ್ಟೇಟ್ನ ಮೇಲೆ ಪರಿಣಾಮ ಬೀರಿದೆ. ಇದು ಆಸ್ತಿ ಖರೀದಿ ಹಾಗೂ ಮಾರಾಟದ ಮೇಲೂ ಪರಿಣಾಮ ಬೀರಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications