E Khata Updates: ಪ್ರಾಪರ್ಟಿಗಳಿಗೆ ಇ -ಖಾತಾ ಬಜೆಟ್ನಲ್ಲಿ ಹೇಳಿದ್ದೇನು, ಈ ವಿಷಯ ನೆನಪಿರಲಿ!
ಕರ್ನಾಟಕ ಸರ್ಕಾರವು ಪ್ರಾಪರ್ಟಿಗಳಿಗೆ ಇ -ಖಾತಾ ನೀಡುವುದನ್ನು ಕಡ್ಡಾಯ ಮಾಡಿದೆ. ಇದರೊಂದಿಗೆ ಕರ್ನಾಟಕ ಸರ್ಕಾರದ 2025- 2026ನೇ ಸಾಲಿನ ಬಜೆಟ್ನಲ್ಲಿ ಇ- ಖಾತಾ ಹಾಗೂ ಆಸ್ತಿಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಅಂಶಗಳನ್ನು ಹಂಚಿಕೊಳ್ಳಲಾಗಿದೆ. ಆಸ್ತಿ ನೋಂದಣಿಯನ್ನು ಸುಗಮಗೊಳಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಇ - ಖಾತಾ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಕ್ರಮವು ಆಸ್ತಿ ವಂಚನೆ ಮತ್ತು ತೆರಿಗೆ ತಪ್ಪಿಸಲು ಆಸ್ತಿಗಳ ಮೌಲ್ಯ ಕಡಿಮೆ ಮಾಡುವುದನ್ನು ನಿಯಂತ್ರಿಸುವ ಉದ್ದೇಶವನ್ನೂ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಲ್ಲದೆ ಇ ಖಾತಾಗೆ ಸಂಬಂಧಿಸಿದಂತೆ ಮತ್ತೊಂದು ಅಪ್ಡೇಟ್ ಅನ್ನು ಸಹ ಕೊಡಲಾಗಿದೆ.
ಇ ಖಾತಾ ಆಸ್ತಿ ವ್ಯಾಪ್ತಿಯಿಂದ ಹೊರಗುಳಿದವರನ್ನು ಆಸ್ತಿ ವ್ಯಾಪ್ತಿಗೆ ತರುತ್ತದೆ. ದಾಖಲೆಗಳನ್ನು ನೋಂದಾಯಿಸುವಾಗ ವಂಚನೆ ಮತ್ತು ದುರುಪಯೋಗವನ್ನು ತಡೆಗಟ್ಟಲು ಸರ್ಕಾರವು ಪ್ರಸಕ್ತ ವರ್ಷದಿಂದ ನೋಂದಾಯಿಸಲಾಗದ ದಾಖಲೆಗಳಿಗೆ ಸಹ ಡಿಜಿಟಲ್ ಇ - ಸ್ಟ್ಯಾಂಪಿಂಗ್ ಜಾರಿ ಮಾಡಿರುವುದಾಗಿ ಹೇಳಿದೆ.

ಇನ್ನು ಅನೇಕ ಜಾಗಗಳಲ್ಲಿ ಒಂದು ಆಸ್ತಿಯಿಂದ ಇನ್ನೊಂದು ಆಸ್ತಿಯ ಮಾರ್ಗ ಮಾರ್ಗಸೂಚಿ ಮೌಲ್ಯದಲ್ಲಿ ವ್ಯತ್ಯಾಸಗಳನ್ನು ಸರಿಪಡಿಸುವ ಉದ್ದೇಶದಿಂದ ಜಿಐಎಸ್ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಇದರಿಂದ ವೈಜ್ಞಾನಿಕವಾಗಿ ದರ ನಿಗದಿ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
ಇನ್ನು 2024 -25ನೇ ಸಾಲಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಬರೋಬ್ಬರಿ 24,000 ಸಾವಿರ ಕೋಟಿಯನ್ನು ನಿರೀಕ್ಷೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಲ್ಲದೆ 2025 -2026ನೇ ಸಾಲಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 28,000 ಸಾವಿರ ಕೋಟಿ ಆದಾಯ ಸಂಗ್ರಹ ಮಾಡುವ ಗುರಿಯನ್ನು ಕೊಡಲಾಗಿದೆ. ಇನ್ನು ಆಸ್ತಿಗಳ ಮೌಲ್ಯಮಾಪನದಲ್ಲಿ ವಿಶೇಷ ನಿಗಾ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೇಳಿದೆ. ಹೀಗಾಗಿ, ಆಸ್ತಿದಾರರು ಅಥವಾ ಆಸ್ತಿಯನ್ನು ಖರೀದಿ ಮಾಡುವವರು ಆಸ್ತಿ ಖರೀದಿ ಹಾಗೂ ಆಸ್ತಿ ಮಾರಾಟದ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. ಇ ಖಾತಾ ಇರುವುದರಿಂದ ಆಸ್ತಿಯಲ್ಲಿ ಯಾವುದೇ ಲೋಪವಾದರೂ ಸ್ಪಷ್ಟವಾಗಿ ತಿಳಿಯಲಿದೆ.
ಬಿ ಖಾತಾದಿಂದ ಭರ್ಜರಿ ಆದಾಯ: ಇನ್ನು ರಾಜ್ಯ ಸರ್ಕಾರವು ಬರೋಬ್ಬರಿ 40 ರಿಂದ 50 ಲಕ್ಷದಷ್ಟು ಆಸ್ತಿಗಳಿಗೆ ಬಿ ಖಾತಾ ನೀಡಲು ನಿರ್ಧರಿಸಿದೆ. ಅನಧಿಕೃತ ಹಾಗೂ ರೆವಿನ್ಯೂ ಸೈಟ್ಗಳಿಗೆ ಬಿ ಖಾತಾ ನೀಡಲಾಗುತ್ತಿದೆ. ಇಲ್ಲಿಯ ವರೆಗೆ ಯಾವುದೇ ಖಾತಾ ಇಲ್ಲದೆ ಒಂದೇ ಬಡಾವಣೆಯಲ್ಲಿ ಮನೆ ಕಟ್ಟಿಕೊಂಡಿದ್ದವರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗಿದೆ. ಮೂರು ತಿಂಗಳ ಅವಧಿಯಲ್ಲಿ ಎಲ್ಲಾ ಅಕ್ರಮ ಆಸ್ತಿಗಳಿಗೂ ಬಿ ಖಾತಾ ನೀಡಲು ನಿರ್ಧರಿಸಲಾಗಿದ್ದು. ಈಗಾಗಲೇ ಸಾವಿರಾರು ಆಸ್ತಿಗಳಿಗೆ ಬಿ ಖಾತಾ ವಿತರಣೆ ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಇದರಿಂದ ಕೋಟ್ಯಾಂತರ ರೂಪಾಯಿ ಆದಾಯ ಸರ್ಕಾರಕ್ಕೆ ಹರಿದು ಬರಲಿದೆ ಎಂದು ನಿರೀಕ್ಷೆ ಮಾಡಲಾಗುತ್ತಿದೆ. ಯಾಕೆಂದರೆ ಕೆಲವು ಆಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದಿದ್ದವು. ಇದೀಗ ಈ ಆಸ್ತಿಗಳು ಸಹ ಆಸ್ತಿ ತೆರಿಗೆ ವ್ಯಾಪ್ತಿಗೆ ಬರಲಿವೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications