ಇ- ಪೋರ್ಟಲ್ ಹ್ಯಾಕ್ ಮಾಡಿದವರ ರಕ್ಷಣೆ ಇಲ್ಲ: ಆರಗ ಜ್ಞಾನೇಂದ್ರ
ಬೆಂಗಳೂರು, ಮಾ. 07: ಸರಕಾರದ ಇಲಾಖೆಯ ಇ- ಪೋರ್ಟಲ್ ಹ್ಯಾಕ್ ಮಾಡಿ ಸಾರ್ವಜನಿಕ ಹಣ ಲೂಟಿ ಮಾಡಿದವರು ಎಷ್ಟೇ ಬಲಾಢ್ಯರಾಗಿದ್ದರೂ ಲೆಕ್ಕಿಸದೇ ಹಣ ವಸೂಲಾತಿಗೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ಯು. ಬಿ ವೆಂಕಟೇಶ್ ನಿಯಮ 330 ರ ಅಡಿಯಲ್ಲಿ ಎತ್ತಿದ ವಿಷಯಕ್ಕೆ ಸಂಬಂಧಿಸಿದಂತೆ ಸಚಿವರು ಉತ್ತರ ನೀಡಿದರು.
ಈ ಪೋರ್ಟ್ಲ್ ಹ್ಯಾಕ್ ಮಾಡಿ ಸಾರ್ವಜನಿಕರ ಹಣ ಲೂಟಿ ಮಾಡಿದ ಸಂಬಂಧ ಈವರೆಗೂ ಹನ್ನೆರಡು ಮಂದಿಯನ್ನು ಬಂಧಿಸಿ ಎರಡು ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಹ್ಯಾಕರ್ ಶ್ರೀಕಿ ಹಾಗೂ ಇತರರು ಒಳಗೊಂಡಿದ್ದಾರೆ ಎನ್ನಲಾದ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ತನಿಖೆ ತೀವ್ರ ಪ್ರಗತಿಯಲ್ಲಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದರು.

ಇದಕ್ಕೆ ಮುನ್ನ ವಿಷಯ ಪ್ರಸ್ತಾಪಿಸಿದ, ಕಾಂಗ್ರೆಸ್ ಸದಸ್ಯ ಶ್ರೀ ಯು ಬಿ ವೆಂಕಟೇಶ್, ಬಿಟ್ ಕಾಯಿನ್ ವಿಷಯದಲ್ಲಿ, ಯಾವುದೇ ಕ್ರಮ ಆಗಿಲ್ಲ, ಸಾವಿರಾರು ಕೋಟಿ ರೂಪಾಯಿಗಳ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಹಲವು ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮ ಆಗಿಲ್ಲ, ಸರಕಾರ ಈ ವಿಷಯದಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸದಸ್ಯರ ಆರೋಪವನ್ನು ತಳ್ಳಿಹಾಕಿದ ಗೃಹ ಸಚಿವರು, ಸರಕಾರ ಹ್ಯಾಕಿಂಗ್ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಯಾರ ಬಳಿಯಾದರೂ ಹೆಚ್ಚಿನ ದಾಖಲೆ ಇದ್ದರೆ ಒದಗಿಸಬೇಕು ಎಂದು ಮನವಿ ಮಾಡಿದರು.
ಇ ಪೋರ್ಟ್ ಲ್ ನಿಂದ ಹನ್ನೊಂದುವರೆ ಕೋಟಿ ರೂ. ಹ್ಯಾಕ್ ಮಾಡಿದ್ದು, ವಿವಿಧ 36 ಬ್ಯಾಂಕ್ ಖಾತೆಗಳಿವೆ ವರ್ಗಾವಣೆ ಮಾಡಲಾಗಿದೆ. ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.
ಪರಿಷತ್ ನಲ್ಲಿ, ವಿರೋಧ ಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಜೆಡಿಎಸ್ ಸದಸ್ಯ ಮರಿ ತಿಬ್ಬೆಗೌಡ, ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, ತೇಜಸ್ವಿನಿ ಗೌಡ, ಸಹ ಚರ್ಚೆಯಲ್ಲಿ ಪಾಲ್ಗೊಂಡರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications