E - Property: ಇ–ಸ್ವತ್ತು: "ಗ್ರಾಮೀಣ ಆಸ್ತಿ" ತೆರಿಗೆ ವಿಚಾರದಲ್ಲಿ ಸರ್ಕಾರದಿಂದ ಗುಡ್ನ್ಯೂಸ್!
ಕರ್ನಾಟಕ ಸರ್ಕಾರವು ಆಸ್ತಿದಾರರಿಗೆ ಭರ್ಜರಿ ಗುಡ್ನ್ಯೂಸ್ ನೀಡಿದೆ. ಸರ್ಕಾರವು ಆಸ್ತಿಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಇ ಖಾತಾ ಹಾಗೂ ಇ ಸ್ವತ್ತುಗಳನ್ನು ಪರಿಚಯಿಸಿದೆ. ಆದರೆ, ಗ್ರಾಮೀಣ ಹಾಗೂ ನಗರ ಭಾಗದಲ್ಲಿನ ಆಸ್ತಿದಾರರು ಇ ಖಾತಾ ಹಾಗೂ ಇ -ಸ್ವತ್ತುಗಳ ವಿಚಾರದಲ್ಲಿ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಇದೀಗ ಈ ಸಂಕಷ್ಟವನ್ನು ತಪ್ಪಿಸುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು. ರಾಜ್ಯದ ಆಸ್ತಿದಾರರು ತುಸು ನಿರಾಳವಾಗುವಂತಹ ಸುದ್ದಿಯೊಂದನ್ನು ಕೊಟ್ಟಿದೆ.
ರಾಜ್ಯದ ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ದಾಖಲೆ ನೀಡುವ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆ ಆಗುತ್ತಿದೆ ಎನ್ನುವ ಆರೋಪವು ಕಳೆದ ಮೂರು ತಿಂಗಳಿಗೂ ಹೆಚ್ಚಿನ ಅವಧಿಯಿಂದ ಕೇಳಿ ಬರುತ್ತಿದೆ. ಇದೀಗ ಈ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ. ರಾಜ್ಯದಾದ್ಯಂತ ಆಸ್ತಿಗಳ ಸಂರಕ್ಷಣೆ ಹಾಗೂ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ಉದ್ದೇಶದಿಂದ ಇ ಖಾತಾ ಹಾಗೂ ಇ ಸ್ವತ್ತುಗಳನ್ನು ಕಡ್ಡಾಯ ಮಾಡಲಾಗಿದೆ. ಆದರೆ, ಇದರ ವಿತರಣೆಯಲ್ಲಿ ನಿರಂತರವಾಗಿ ಸಮಸ್ಯೆಗಳು ಎದುರಾಗುತ್ತಿದ್ದು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಕ್ರಮವೊಂದನ್ನು ತೆಗೆದುಕೊಂಡಿದೆ.

ರಾಜ್ಯದ ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ದಾಖಲೆ ನೀಡುವ ಸಂದರ್ಭದಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ ಪರಿಹಾರ ಸೂಚಿಸುವುದಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಾಜ್ಯ ಸರ್ಕಾರವು ರಚಿಸಿದೆ. ಈ ಸಮಿತಿಯಲ್ಲಿ 12 ಜನ ಸದಸ್ಯರು ಇರಲಿದ್ದಾರೆ. ಈ ಸಂಬಂಧ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಚಂದ್ರಶೇಖರ್ ಅವರು ಆದೇಶ ಮಾಡಿದ್ದಾರೆ. ಈ ಮೂಲಕ ಕರ್ನಾಟಕದ ಗ್ರಾಮೀಣ ಭಾಗದ ರೈತರಿಗೆ ಸಮಸ್ಯೆ ತಪ್ಪುವ ಭರವಸೆ ಮೂಡಿದೆ.
ಇ-ಸ್ವತ್ತು ಹಾಗೂ ಗ್ರಾಮೀಣ ಆಸ್ತಿಗಳ ತೆರಿಗೆ ನಿಗದಿಗೆ ಸಂಬಂಧಿಸಿದಂತೆ ವಿಷಯ ತಜ್ಞ ಹಾಗೂ ಪಂಚಾಯತ್ ರಾಜ್ ಆಯುಕ್ತಾಲಯದ ನಿವೃತ್ತ ಉಪ ನಿರ್ದೇಶಕ ಕೆ.ಜಿ. ಜಗದೀಶ ಅವರನ್ನು ವಿಶೇಷ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಇನ್ನು ಈ ಸಮಿತಿಯು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆ 1993ರ ಸೆಕ್ಷನ್ 199ರ ಇ-ಸ್ವತ್ತು ವಿಷಯಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡುವುದಕ್ಕೆ ನಿರ್ದಿಷ್ಟ ಸಲಹೆ ಹಾಗೂ ಸೂಚನೆಗಳನ್ನು ನೀಡಬೇಕಿದೆ. ಮುಂದುವರಿದು ಕರ್ನಾಟಕದ ಇ ಸ್ವತ್ತು ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಸ್ವತ್ತು ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಪರಿಶೀಲನೆ ನಡೆಸಿ, ಅದಕ್ಕೂ ಪರಿಹಾರ ಸೂಚಿಸಬೇಕಿದೆ. ಇ-ಸ್ವತ್ತು ತಂತ್ರಾಂಶದಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡುವುದಕ್ಕೂ ಈ ಸಮಿತಿ ಸಲಹೆ ನೀಡಲಿದೆ ಎಂದು ಹೇಳಲಾಗಿದೆ ಇನ್ನು. ಈ ಸಮಿತಿಯು ವರದಿ ಸಲ್ಲಿಸಲು ಎರಡು ತಿಂಗಳ ಗಡುವು ವಿಧಿಸಲಾಗಿದೆ.
ಆಸ್ತಿದಾರರಿಗೆ ಸಮಸ್ಯೆ: ಇನ್ನು ರಾಜ್ಯ ಸರ್ಕಾರವು ಇ ಸ್ವತ್ತುಗಳನ್ನು ನೀಡುತ್ತಿದೆ. ಗ್ರಾಮೀಣ ಭಾಗದ ಆಸ್ತಿದಾರರಿಗೆ ಇ ಸ್ವತ್ತು ನೀಡಲಾಗುತ್ತಿದೆಯಾದರೂ ಆಸ್ತಿದಾರರಿಗೆ ಸಕಾಲದಲ್ಲಿ ಇ ಸ್ವತ್ತು ಸಿಗದೆ ಸಂಕಷ್ಟ ಎದುರಾಗಿದೆ.
ಇ ಸ್ವತ್ತು ಸಂಕಷ್ಟಗಳಿಗೆ ಮುಕ್ತಿ: ಇನ್ನು ಇಲ್ಲಿಯ ವರೆಗೆ ಇ- ಸ್ವತ್ತಿನಲ್ಲಿ ಉಂಟಾಗಿದ್ದ ಗೊಂದಲಗಳು ಇನ್ನು ಪರಿಹಾರವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇ - ಸ್ವತ್ತಿನಲ್ಲಿ ಎದುರಾಗಿದ್ದ ಸಮಸ್ಯೆಯಿಂದ ಗ್ರಾಮೀಣ ಭಾಗದ ಆಸ್ತಿದಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications