Government Employee; ಗಳಿಕೆ ರಜೆಗಾಗಿ ಸರ್ಕಾರಿ ನೌಕರರ ಸಂಘದ ಪತ್ರ
ಬೆಂಗಳೂರು, ಮೇ 18: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಕ್ತಾಯಗೊಂಡಿದೆ. ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ಪೂರ್ಣಗೊಂಡಿದ್ದು, ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದ ಸರ್ಕಾರಿ ನೌಕರರು ಚುನಾವಣಾ ಕಾರ್ಯವನ್ನು ಮುಗಿಸಿಕೊಂಡು ಕೆಲಸಕ್ಕೆ ಹಾಜರಾಗಿದ್ದಾರೆ. ಶಿಕ್ಷಕರ ಬೇಸಿಗೆ ರಜೆಗಳು ಮುಗಿಯುತ್ತಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿವೆ. ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರು ಈಗ ಚುನಾವಣಾ ಆಯೋಗದ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ.

ಗಳಿಕೆ ರಜೆ ನೀಡಲು ಕೋರಿ ಪತ್ರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ ಅವರು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಮತಗಟ್ಟೆ ಮಟ್ಟದ (ಬಿ.ಎಲ್.ಓ) ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡುವ ಬಗ್ಗೆ ಎಂಬ ವಿಷಯವನ್ನು ಪತ್ರ ಒಳಗೊಂಡಿದೆ. ಅಲ್ಲದೇ ಬಿ.ಎಲ್.ಓ. ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮನವಿ ದಿನಾಂಕ 14/4/2024 ಉಲ್ಲೇಖ ಮಾಡಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯಾದ್ಯಂತ ಕರ್ತವ್ಯ ಶಿಕ್ಷಕರು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ಚುನಾವಣಾ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವತ್ರಿಕ ರಜಾ ಅವಧಿಯಲ್ಲಿಯೂ ಸಹ ಕಾರ್ಯನಿರ್ವಹಿಸುತ್ತಿರುವುದರಿಂದ ಗೌರವಧನದ ಜೊತೆಗೆ ಗಳಿಕೆ ರಜೆಯನ್ನು ಮಂಜೂರು ಮಾಡುವಂತೆ ಉಲ್ಲೇಖಿತ ಪತ್ರದಲ್ಲಿ ಮನವಿ ಮಾಡಿಕೊಂಡಿರುತ್ತಾರೆ.
ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ಚುನಾವಣೆಗಳಿಗೆ ಪೂರಕವಾದ ಕರ್ತವ್ಯಗಳನ್ನು ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆಯನ್ನು ಮಂಜೂರು ಮಾಡುವ ಸಂಬಂಧ ಈ ಅಂಶಗಳನ್ನು ತಮ್ಮ ಅವಗಾಹನೆಗೆ ತರಬಯಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
* ಈ ಹಿಂದಿನಂತೆ ಬಿ.ಎಲ್.ಓ.ಗಳು ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೆಲಸ ನಿರ್ವಹಿಸದೆ ವರ್ಷಪೂರ್ತಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ವಿಳಾಸ ತಿದ್ದುಪಡಿ ಹಾಗೂ ವರ್ಗಾವಣೆ ಮತ್ತು 17+ ವಯೋಮಾನದ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.
* ಶಿಕ್ಷಕರು ಅವರ ಹಕ್ಕಿನ ರಜೆ ದಿನಗಳಾದ ದಸರಾ ರಜೆ ಹಾಗೂ ಬೇಸಿಗೆ ರಜಾ ದಿನಗಳಲ್ಲಿ ಹಾಗೂ ಸಾರ್ವತ್ರಿಕ ರಜಾ ದಿನಗಳಲ್ಲೂ ಸಹ ಮೇಲ್ಕಂಡ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ.
* ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮನೆ ಮನೆ ಸಮೀಕ್ಷೆ, ಮತದಾರರ ಚೀಟಿ ಹಂಚುವ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವ ಕೆಲಸವನ್ನು ನಿರ್ವಹಿಸುವುದರ ಜೊತೆಗೆ, ಹಿರಿಯ ಅಧಿಕಾರಿಗಳು ಮತಗಟ್ಟೆಗೆ ಭೇಟಿ ಕೊಡುವ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿದ್ದು, ಅಧಿಕಾರಿಗಳಿಗೆ ಅವಶ್ಯ ಮಾಹಿತಿಯನ್ನು ಒದಗಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.
* ಶಿಕ್ಷಣ ಇಲಾಖೆಗೆ ಸಂಬಂಧಿಸಿದ ತರಬೇತಿಗಳನ್ನು ರಜಾ ದಿನಗಳಂದು ಪಡೆದಾಗ ವಿಶೇಷ ಭತ್ಯೆ ಮತ್ತು ಗಳಿಕೆ ರಜೆಯನ್ನು ಶಿಕ್ಷಕರು ಪಡೆಯುತ್ತಿದ್ದಾರೆ. ಅದೇ ರೀತಿ ಚುನಾವಣಾ ಕಾರ್ಯ ನಿರ್ವಹಿಸುವ ಶಿಕ್ಷಕರು ವಿಶೇಷ ಭತ್ಯೆ ಮತ್ತು ಗಳಿಕೆ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
* ಕರ್ನಾಟಕ ನಾಗರೀಕ ಸೇವಾ ನಿಯಮ 113(ಎ) ಪ್ರಕಾರ ರಜಾ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಗಳಿಕೆ ರಜೆಯನ್ನು ಪಡೆಯಲು ಅವಕಾಶವಿರುತ್ತದೆ.
ಈ ಅಂಶಗಳ ಹಿನ್ನೆಲೆಯಲ್ಲಿ ಶಾಲಾ ಕರ್ತವ್ಯದ ಜೊತೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ವರ್ಷಪೂರ್ತಿ ಚುನಾವಣೆಗೆ ಸಂಬಂಧಿಸಿದ ಪೂರಕ ಕಾರ್ಯಗಳನ್ನು ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮ 113(ಎ)ರಲ್ಲಿನ ಅವಕಾಶದಂತೆ ಲಭ್ಯವಾಗುವ ಗಳಿಕೆ ರಜೆಯನ್ನು ಮಂಜೂರು ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications