Earthquake: ದಾವಣಗೆರೆ, ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಭೂಕಂಪದ ಅನುಭವ: ಬೆದರಿದ ಜನ
Earthquake: ರಾಜ್ಯದಲ್ಲಿ ಅತೀ ಹೆಚ್ಚು ಭೂಕಂನಕ್ಕೆ ಒಳಗಾಗಿರುವ ಜಿಲ್ಲೆ ಅಂದ್ರೆ ಅದು ವಿಜಯಪುರ. ಆದರೆ, ಇದೀಗ ಡಿಸೆಂಬರ್ 13ರ ಶನಿವಾರ ಸಂಜೆ ವಿಜಯನಗರ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವ ಆಗಿರುವ ಘಟನೆ ನಡೆದಿದೆ. ಹಾಗಾದ್ರೆ, ಯಾವ್ಯಾವ ಭಾಗಗಳಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾವಣಗೆರೆ ಜಿಲ್ಲೆಯ ಜಗಳೂರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನಿನ್ನೆ ಸಂಜೆ 7.30ರ ವೇಳೆ ಭಾರೀ ಸದ್ದಿನೊಂದಿಗೆ ಭೂ ಕಂಪನದ ಅನುಭವ ಆಗಿದೆ. ಪಡಿಣಾಮ ಮನೆಗಳಲ್ಲಿನ ವಸ್ತುಗಳು ಅಲ್ಲಾಡಿ ನೆಲಕ್ಕುರುಳಿದ್ದು, ಈ ವೇಳೆ ಜನರು ಭಯಗೊಂಡು ಮನೆಯಿಂದ ಹೊರಗೆ ಓಡಿ ಬಂದ ಘಟನೆ ನಡೆದಿದೆ.

ಜಗಳೂರು ತಾಲೂಕಿನ ಚಿಕ್ಕಮಲ್ಲನ ಹೊಳೆ ಚಿರಂಜೀವಿ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ಜಗಳೂರು ತಹಶೀಲ್ದಾರರಿಗೆ ಗ್ರಾಮಸ್ಥರು ಈ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. ಬಳಿಕ ಭೂಕಂಪನ ಹಾಗೂ ಕೇಳಿಬಂದ ಭಯಂಕರ ಶಬ್ಧಕ್ಕೆ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಅಲ್ಲದೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕಲ್ಲಹಳ್ಳಿ, ಚಿತ್ರದುರ್ಗ ತಾಲ್ಲೂಕಿನ ಕೋಲನ್ಮಳ್ಳಿ ಗ್ರಾಮಗಳಲ್ಲಿಯೂ ಇದೇ ರೀತಿಯ ಅನುಭವ ಆಗಿದ್ದು, ಪರಿಣಾಮ ಜನರು ಮನೆಯಿಂದ ಹೊರಗಡೆ ಓಡಿಬಂದ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ಶನಿವಾರ ಸಂಜೆ 7:10ರ ಸುಮಾರಿಗೆ ಗಡಿ ಗ್ರಾಮ ಟಿ.ಕಲ್ಲಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಟಿ.ಕೋಲಮ್ಮನಹಳ್ಳಿಯಲ್ಲಿ ಭಾರೀ ಶಬ್ಧದೊಂದಿಗೆ ಭೂಮಿ ಗಢಗಢ ನಡುಗಿದ ಅನಭವ ಜನರಿಗೆ ಆಗಿದೆ. ಈಗಲೂ ಕೂಡ ಈ ಭಾಗಗಳಲ್ಲಿ ಜನರು ಅದೇ ಆತಂಕದಲಿದ್ದಾರೆ.
ಭೂಕಂನದಿಂದ ಬೆಚ್ಚಿದ ಜನ: ಇನ್ನೂ ದೇಶದಗಳ ವಿಚಾರಕ್ಕೆ ಬಂದರೆ ಅತೀ ಹೆಚ್ಚು ಭೂಕಂಪನಕ್ಕೆ ಒಳಗಾಗಿರುವ ದೇಶ ಜಪಾನ್ ಆಗಿದೆ.ಇತ್ತೀಚೆಗಷ್ಟೇ ಜಪಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7ರಷ್ಟು ದಾಖಲಾಗಿದೆ.
ಒಂದೇ ದಿನದಲ್ಲಿ 5 ಬಾರಿ ಭೂಮಿ ಕಂಪಿಸಿದ್ದು, ಪರಿಣಾಮ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ದತ್ತಾಂಶ ಸಂಗ್ರಹಿಸಿವೆ. ಆದರೆ, ವಿವರವಾದ ಮಾಹಿತಿಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಬಂದಿದೆ.
ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ ಕೇವಲ 10 ಕಿಲೋ ಮೀಟರ್ ಆಳದಲ್ಲಿ ಇತ್ತು. ಜಪಾನ್ನಲ್ಲಿ ಸಂಭವಿಸಿದ 5ನೇ ಭೂಕಂಪ ಇದಾಗಿದೆ. ಜಪಾನ್ ಹವಾಮಾನ ಸಂಸ್ಥೆ ಪ್ರಕಾರ, ಶುಕ್ರವಾರ ಈಶಾನ್ಯ ಜಪಾನ್ನಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದೆ. ಸುನಾಮಿ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಈ ಹಿನ್ನೆಲೆ ಈ ಭಾಗಗಳ ಜನರು ಆತಂಕದಲ್ಲಿದ್ದಾರೆ.
ಈ ವಾರದ ಆರಂಭದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಪೆಸಿಫಿಕ್ ಮಹಾಸಾಗರದ ಕರಾವಳಿಯಲ್ಲಿ ಬಿರುಕುಗಳು, ಸಣ್ಣ ಹಾನಿ ಮತ್ತು ಸುನಾಮಿಯನ್ನು ಉಂಟುಮಾಡಿತ್ತು. ಜಪಾನ್ನ ಪ್ರಮುಖ ದ್ವೀಪವಾದ ಹೊನ್ಶುವಿನ ಉತ್ತರದ ತುದಿಯಲ್ಲಿರುವ ಅಮೋರಿ ಕರಾವಳಿಯಲ್ಲಿ ಸೋಮವಾರ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 34 ಜನರು ಗಾಯಗೊಂಡಿದ್ದಾರೆ.
ಭೂಕಂಪದ ನಂತರ ಜಪಾನ್ ಹವಾಮಾನ ಸಂಸ್ಥೆಯು 1 ಮೀಟರ್ ಎತ್ತರದ ಅಲೆಗಳು ಏಳಬಹುದು ಎಂದು ಎಚ್ಚರಿಕೆ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಲವಾರು ಕರಾವಳಿ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಸಂದೇಶ ಕಳುಹಿಸಲಾಗಿದೆ.
ಇನ್ನೂ ಭೂಕಂಪದ ನಂತರ ಮುಂಜಾಗ್ರತಾ ಕ್ರಮವಾಗಿ ಈ ಭಾಗಗಳಲ್ಲಿ ಹಲವಾರು ರೈಲುಗಳನ್ನು ಸ್ಥಗಿತಗೊಳಿಸಲಾಯಿತು ಮತ್ತು ಕರಾವಳಿ ಭಾಗದ ಹೆದ್ದಾರಿಗಳನ್ನು ಮುಚ್ಚಲಾಯಿತು. ಈಗಲೂ ಸಹ ಈ ಭಾಗಗಳ ಜನರು ಮತ್ತೆ ಎಲ್ಲಿ ಭೂಕಂಪ ಸಂಭವಿಸುತ್ತದೆಯೋ ಎನ್ನುವ ಭಯದಲ್ಲೇ ಜೀವನ ನಡೆಸುತ್ತಿದ್ದಾರೆ ಎನ್ನುವ ಮಾಹಿತಿಯಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications