ಚುನಾವಣಾ ಸಿಬ್ಬಂದಿ ಕ್ಷೇಮಾಭಿವೃದ್ಧಿ ನೀತಿ ಪ್ರಕಟ!
ಬೆಂಗಳೂರು, ಮೇ 10: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿ ತುರ್ತು ಪರಿಸ್ಥಿತಿಯಲ್ಲಿ ಎದುರಿಸಬಹುದಾದ ಪರಿಸ್ಥಿತಿಗಳ ಕುರಿತು ಕೇಂದ್ರ ಚುನಾವಣಾ ಆಯೋಗ ತನ್ನ ನೀತಿಯನ್ನು ಪ್ರಕಟಿಸಿದೆ.
ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಯು ನಿಧನ ಹೊಂದಿದ ಸಂದರ್ಭದಲ್ಲಿ ಆ ಅಧಿಕಾರಿಯ ಹತ್ತಿರದ ರಕ್ತ ಸಂಬಂಧಿಗೆ 10 ಲಕ್ಷ ರೂಗಳನ್ನು ಸಂದಾಯ ಮಾಡಬೇಕು. ಮರಣವು ಯಾವುದೇ ಹಿಂಸಾತ್ಮಕ ಚಟುವಟಿಕೆ, ಉಗ್ರಗಾಮಿಗಳು ಅಥವಾ ಪ್ರಕೃತಿ ವಿಕೋಪ, ಬಾಂಬ್ ಶಸ್ತ್ರಗಳ ದಾಳಿ, ಸಮಾಜ-ಘಾತುಕ ಅಂಶಗಳಿಂದ ಸಂಭಂವಿಸಿದ್ದಲ್ಲಿ, ಪರಿಹಾರದ ಮೊತ್ತವು ದ್ವಿಗುಣಗೊಳಿಸಿ 20 ಲಕ್ಷ ರೂಗಳನ್ನು ನೀಡಬೇಕು.
ಅಂಗವಿಕಲತೆ, ದೃಷ್ಟಿ ಕಳೆದುಕೊಳ್ಳುವುದು ಇತ್ಯಾದಿ ಶಾಶ್ವತ ಶಾರೀರಿಕ ದೌರ್ಬಲ್ಯಗಳು ಉಂಟಾದ ಸಂದರ್ಭದಲ್ಲಿ ಕನಿಷ್ಠ 5 ಲಕ್ಷ ರೂಗಳನ್ನು ಅನುಗ್ರಹ ಪೂರಕ ಪರಿಹಾರವಾಗಿ ಸಂದಾಯ ಮಾಡುವುದು ಇಂತಹ ಅವಘಡಗಳು ಉಗ್ರಗಾಮಿಗಳು ಅಥವಾ ಸಮಾಜ ಘಾತುಕ ಶಕ್ತಿಗಳಿಂದ ಸಂಭವಿಸಿದಲ್ಲಿ ಈ ಪರಿಹಾರವನ್ನೂ ದ್ವಿಗುಣಗೊಳಿಸಬೇಕು.

ಇದರೊಂದಿಗೆ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಕೆಸಿಎಸ್ಆರ್ ನಿಯಮಗಳನ್ವಯ ಡಿ.ಸಿ.ಆರ್.ಜಿ. ನಿವೃತ್ತಿ ವೇತನ, ಕೆಜಿಐಡಿ, ಸಾಮೂಹಿಕ ಜೀವವಿಮೆ(ಜಿ.ಐ.ಎಸ್.) ಸೇರಿದಂತೆ ಲಭ್ಯವಿರುವ ಇತರೆ ಎಲ್ಲಾ ಅರ್ಹ ಸವಲತ್ತುಗಳನ್ನು ನೀಡಲಾಗುತ್ತಿದೆ.
ತುರ್ತು ವೈದ್ಯಕೀಯ ಸಂದರ್ಭದಲ್ಲಿ ವೈದ್ಯಕೀಯ ನೆರವು ನೀಡಲು ವೈದ್ಯರ ತಂಡವನ್ನು ನಿಯೋಜಿಸಬೇಕು. ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿಗೆ ತುರ್ತು ಸಂದರ್ಭದಲ್ಲಿ ವೈದ್ಯಕೀಯ ನೆರವು ದೊರೆಯಬೇಕು.
ಚುನಾವಣಾ ಸಿಬ್ಬಂದಿಗೆ ಮತದಾನದ ದಿನವಷ್ಟೇ ಅಲ್ಲದೆ, ಚುನಾವಣಾ ಕಾರ್ಯಕ್ಕೆ ತೆರಳುವ ಮತ್ತು ಅಲ್ಲಿಂದ ಮರಳುವ ದಿನಗಳಂದು ರವಾನೆ ಕೇಂದ್ರಗಳಲ್ಲಿ ಹಾಗೂ ತರಬೇತಿ ದಿನಗಳಂದು ಸೂಕ್ತ ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಪೂರಕವಾಗಿ ಜಿಲ್ಲಾ ಆರೋಗ್ಯಾಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಬೇಕು ಎಂದು ಶಿಫಾರಸು ಮಾಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications