ರಾಹುಲ್ ಗಾಂಧಿಗೆ ಚುನಾವಣೆ ಆಯೋಗದಿಂದ ನೋಟಿಸ್, ಕಾರಣವೇನು?
ಬೆಂಗಳೂರು, ಆಗಸ್ಟ್ 10: ಕರ್ನಾಟಕ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ. ಎರಡು ಭಾರಿ ಮತ ಚಲಾಯಿಸಲಾಗಿದೆ ಎಂದು 'ಮತಗಳ್ಳತನ' ಹೆಸರಿನಲ್ಲಿ ಸಂಸದ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗಂಭೀರ ಆರೋಪ ಮಾಡಿದ್ದರು. ಈ ವಿಚಾರದ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಆಡಳಿತ ಮತ್ತು ವಿಪಕ್ಷಗಳ ಮಧ್ಯ ವಾಕ್ಸಮರಕ್ಕೆ ಕಾರಣವಾಗಿತ್ತು. ಇದೀಗ ಭಾರತೀಯ ಚುನಾವಣೆ ಆಯೋಗವೇ ಆರೋಪ ಮಾಡಿದ್ದ ರಾಹುಲ್ ಗಾಂಧಿಯವರಿಗೆ ನೋಟಿಸ್ ನೀಡಿದೆ.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿಯವರು ಬೆಂಗಳೂರಿನ ಮತದಾರ ಪಟ್ಟಿಯಲ್ಲಿ ಮತಗಳ್ಳತನ ನಡೆದಿದೆ. ಎರಡು ಬಾರಿ ಮತ ಚಲಾಯಿಸಲಾಗಿದೆ ಎಂದೆಲ್ಲ ಆರೋಪ ಮಾಡಿದ್ದಾರೆ. ಭಾರತೀಯ ಚುನಾವಣೆ ಆಯೋಗ ವಿರುದ್ಧವು ಹರಿಹಾಯ್ದಿದ್ದರು. ಈ ಸಂಬಂಧ ಸೂಕ್ತ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಿ ಚುನಾವಣೆ ಆಯೋಗ ರಾಹುಲ್ ಗಾಂಧಿಯವರಿಗೆ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲುವನ್ನು ಖಚಿತಪಡಿಸಿಕೊಳ್ಳಲು 1,00,250 "ನಕಲಿ ಮತಗಳನ್ನು" ಸೃಷ್ಟಿಸಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಅವರು ಆಗಸ್ಟ್ 07ರಂದು ದಾಖಲೆ ಬಿಡುಗಡೆ ಮಾಡಿದ್ದರು. ಅವರ ದಾಖಲೆಗಳು ಸಂಪೂರ್ಣ ತನಿಖೆ ಆಗಲಿದೆ ಎಂದು ಹೇಳಿದ್ದ ಚುನಾವಣೆ ಆಯೋಗ ಅವರಿಂದ ಸಾಕ್ಷ್ಯ ಕೇಳಿ ನೋಟಿಸ್ ನೀಡಿದೆ.
ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶುಕುನ್ ರಾಣಿ ಎಂಬುವವರು ಎರಡು ಬಾರಿ ಮತ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಆದರೆ ಈ ಬಗ್ಗೆ ವಿಚಾರಣೆ ಮಾಡಿದ ಸಂದರ್ಭದಲ್ಲಿ ಅವರು ಒಂದೇ ಬಾರಿ ನಿಯಮದಂತೆ ಮತದಾನ ಹಕ್ಕು ಚಲಾಯಿಸಿದ್ದಾರೆ.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ನೋಟಿಸ್ನಲ್ಲಿ 1960 ರ ಮತದಾರರ ನೋಂದಣಿ ನಿಯಮಗಳ ನಿಯಮ 20 (3) (ಬಿ) ಅಡಿಯಲ್ಲಿ ನಿಮ್ಮ ಆರೋಪಗಳಿಗೆ ದಾಖಲೆ ಸಲ್ಲಿಸಬೇಕು. ಟಿಸ್ ನೀಡಲಾಗಿರುವ ಪ್ರತಿಯೊಂದು ಹಕ್ಕು ಅಥವಾ ಆಕ್ಷೇಪಣೆಯ ಬಗ್ಗೆ ನೋಂದಣಿ ಅಧಿಕಾರಿ ಬಳಿಕ ದಾಖಲೆ ನೀಡಬೇಕು. ಆಕ್ಷೇಪಕ ಅಥವಾ ಆಕ್ಷೇಪಣೆ ವ್ಯಕ್ತಪಡಿಸಿದ ವ್ಯಕ್ತಿಯನ್ನು ತನ್ನ ಮುಂದೆ ಖುದ್ದಾಗಿ ಹಾಜರಾಗುವಂತೆ ಕೇಳಬಹುದೆಂದು ನಿಯಮ ಹೇಳುತ್ತದೆ ಎಂದು ಇಸಿಐ ತಿಳಿಸಿದೆ.
ನಿಯಮಗಳ ಪ್ರಕಾರ, ಮತದಾರರ ಪಟ್ಟಿ ಪ್ರಕಟವಾದ 30 ದಿನಗಳ ಒಳಗೆ ದೂರು ಸಲ್ಲಿಸಬೇಕಾಗಿರುತ್ತದೆ. ಇಲ್ಲಿ ಅದು ಆಗಿಲ್ಲ. ರಾಹುಲ್ ಗಾಂಧಿ ತೋರಿಸಿದ ಮತಗಟ್ಟೆಯಲ್ಲಿ ಅಧಿಕಾರಿ ನೀಡಿಲ್ಲ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ. ನೀವು ಆಯೋಗದ ಮುಂದೆ ದಾಖಲೆ ನೀಡಿದರೆ ಅದರ ಆಧಾರದಲ್ಲಿ ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದರಾ ಅಥವಾ ಬೇರೆಯವರು ಮತ ಚಲಾಯಿಸಿದರಾ ಎಂಬುದುನ್ನು ಖಚಿತಪಡಿಸಿಕೊಳ್ಳಬಹುದೆಂದು ಆಯೋಗವು ನೋಟಿಸ್ನಲ್ಲಿ ಹೇಳಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications