ವಿಜಯಪುರದಲ್ಲಿ ಸಿಕ್ಕ ವಿವಿ ಪ್ಯಾಟ್ ಗಳು ಕರ್ನಾಟಕದ್ದಲ್ಲ: ಆಯೋಗ ಸ್ಪಷ್ಟನೆ
ಬೆಂಗಳೂರು, ಮೇ 21 : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಗ್ರಾಮದಲ್ಲಿ ದೊರೆತಿರುವ ವಿವಿಪ್ಯಾಟ್ ನ ಖಾಲಿ ಬಾಕ್ಸ್ ಗಳು, ವಿಜಯಪುರ ಜಿಲ್ಲೆ ಅಥವಾ ಕರ್ನಾಟಕ ಚುನಾವಣಾ ಆಯೋಗಕ್ಕೆ ಸಂಬಂಧಿಸಿರುವುದಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದವರು ವಾಸಿಸುತ್ತಿದ್ದ ತಾತ್ಕಾಲಿಕ ಶೆಡ್ ನಲ್ಲಿ ಪತ್ತೆಯಾಗಿರುವ ವಿವಿಪ್ಯಾಟ್ ನ ಖಾಲಿ ಬಾಕ್ಸ್ ಗಳಲ್ಲಿ ಯಾವುದೇ ರೀತಿಯ ಮಷೀನ್ ಇರುವುದಿಲ್ಲ. ಹಾಗೆಯೇ, ಪೇಪರ್ ಕೂಡ ಇರುವುದಿಲ್ಲ. ಜೊತೆಗೆ ಇವುಗಳ ಮೇಲೆ ಯೂನಿಕ್ ಐಡಿ ಸಂಖ್ಯೆ ಇರುವುದಿಲ್ಲ ಎಂದು ಸಂಜೀವ್ ಕುಮಾರ್ ತಿಳಿಸಿದ್ದಾರೆ.
ದೊರೆತಿರುವ ವಿವಿಪ್ಯಾಟ್ ನ ಖಾಲಿ ಬಾಕ್ಸ್ ಗಳಿಗೆ ಸಂಬಂಧಿಸಿದಂತೆ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿರುವವರ ಬಗ್ಗೆ ಆಯೋಗವುಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ ಎಂದು ಮುಖ್ಯಚುನಾವಣಾಧಿಕಾರಿಗಳು ಎಚ್ಚರಿಸಿದ್ದಾರೆ.

ಮೇ 20ರಂದು ಮನಗೂಳಿ ಗ್ರಾಮದಲ್ಲಿ ವಿವಿಪ್ಯಾಟ್ ದೊರೆತಿವೆ ಎನ್ನುವ ಸುದ್ದಿಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ, ಎಂಟು (8) ವಿವಿಪ್ಯಾಟ್ ನ ಖಾಲಿ ಬಾಕ್ಸ್ ಗಳು ಮಾತ್ರ ದೊರೆತಿದ್ದವು.
ಅಲ್ಲದೆ ಸ್ಥಳದಲ್ಲಿ ಯಾವುದೇ ವಿವಿಪ್ಯಾಟ್ ಮಷೀನ್ಗಳು ಲಭ್ಯವಾಗಿರುವುದಿಲ್ಲ ಮತ್ತು ಜಿಲ್ಲೆಗೆ ಹಂಚಿಕೆಯಾಗಿದ್ದ 2744 ವಿವಿಪ್ಯಾಟ್ ಗಳು ಸುರಕ್ಷಿತವಾಗಿದ್ದು, ಸ್ಟ್ರಾಂಗ್ ರೂಂನಲ್ಲಿ ಭದ್ರ ಪಡಿಸಿಟ್ಟುಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿರುವುದಾಗಿ ಮುಖ್ಯ ಚುನಾವಣಾಧಿಕಾರಿಗಳು ಹೇಳಿದರು. ಈ ಸಂಬಂಧ ಬಸವನಬಾಗೇವಾಡಿಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications