ವಿಜಯಪುರದಲ್ಲಿ ಸಿಕ್ಕ ವಿವಿ ಪ್ಯಾಟ್ ಗಳು ಕರ್ನಾಟಕದ್ದಲ್ಲ: ಆಯೋಗ ಸ್ಪಷ್ಟನೆ
ಬೆಂಗಳೂರು, ಮೇ 21 : ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಗ್ರಾಮದಲ್ಲಿ ದೊರೆತಿರುವ ವಿವಿಪ್ಯಾಟ್ ನ ಖಾಲಿ ಬಾಕ್ಸ್ ಗಳು, ವಿಜಯಪುರ ಜಿಲ್ಲೆ ಅಥವಾ ಕರ್ನಾಟಕ ಚುನಾವಣಾ ಆಯೋಗಕ್ಕೆ ಸಂಬಂಧಿಸಿರುವುದಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದವರು ವಾಸಿಸುತ್ತಿದ್ದ ತಾತ್ಕಾಲಿಕ ಶೆಡ್ ನಲ್ಲಿ ಪತ್ತೆಯಾಗಿರುವ ವಿವಿಪ್ಯಾಟ್ ನ ಖಾಲಿ ಬಾಕ್ಸ್ ಗಳಲ್ಲಿ ಯಾವುದೇ ರೀತಿಯ ಮಷೀನ್ ಇರುವುದಿಲ್ಲ. ಹಾಗೆಯೇ, ಪೇಪರ್ ಕೂಡ ಇರುವುದಿಲ್ಲ. ಜೊತೆಗೆ ಇವುಗಳ ಮೇಲೆ ಯೂನಿಕ್ ಐಡಿ ಸಂಖ್ಯೆ ಇರುವುದಿಲ್ಲ ಎಂದು ಸಂಜೀವ್ ಕುಮಾರ್ ತಿಳಿಸಿದ್ದಾರೆ.
ದೊರೆತಿರುವ ವಿವಿಪ್ಯಾಟ್ ನ ಖಾಲಿ ಬಾಕ್ಸ್ ಗಳಿಗೆ ಸಂಬಂಧಿಸಿದಂತೆ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿರುವವರ ಬಗ್ಗೆ ಆಯೋಗವುಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ ಎಂದು ಮುಖ್ಯಚುನಾವಣಾಧಿಕಾರಿಗಳು ಎಚ್ಚರಿಸಿದ್ದಾರೆ.

ಮೇ 20ರಂದು ಮನಗೂಳಿ ಗ್ರಾಮದಲ್ಲಿ ವಿವಿಪ್ಯಾಟ್ ದೊರೆತಿವೆ ಎನ್ನುವ ಸುದ್ದಿಯ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗಳ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ, ಎಂಟು (8) ವಿವಿಪ್ಯಾಟ್ ನ ಖಾಲಿ ಬಾಕ್ಸ್ ಗಳು ಮಾತ್ರ ದೊರೆತಿದ್ದವು.
ಅಲ್ಲದೆ ಸ್ಥಳದಲ್ಲಿ ಯಾವುದೇ ವಿವಿಪ್ಯಾಟ್ ಮಷೀನ್ಗಳು ಲಭ್ಯವಾಗಿರುವುದಿಲ್ಲ ಮತ್ತು ಜಿಲ್ಲೆಗೆ ಹಂಚಿಕೆಯಾಗಿದ್ದ 2744 ವಿವಿಪ್ಯಾಟ್ ಗಳು ಸುರಕ್ಷಿತವಾಗಿದ್ದು, ಸ್ಟ್ರಾಂಗ್ ರೂಂನಲ್ಲಿ ಭದ್ರ ಪಡಿಸಿಟ್ಟುಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿರುವುದಾಗಿ ಮುಖ್ಯ ಚುನಾವಣಾಧಿಕಾರಿಗಳು ಹೇಳಿದರು. ಈ ಸಂಬಂಧ ಬಸವನಬಾಗೇವಾಡಿಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications