Get Updates
Get notified of breaking news, exclusive insights, and must-see stories!

ವಾಲ್ಮೀಕಿ ಹಗರಣ: 5114 ಪುಟಗಳ ಚಾರ್ಜ್‌ಶೀಟ್‌ನಿಂದ ಕೋಟಿ ಕೋಟಿ ಲೂಟಿ ಸತ್ಯ ಬಯಲು

ಬೆಂಗಳೂರು, ಸೆಪ್ಟಂಬರ್ 11: ಅಧಿಕಾರಿಯೊಬ್ಬರ ಆತ್ಮಹತ್ಯೆಗೆ ಕಾರಣವಾದ ರಾಜ್ಯ ವಾಲ್ಮೀಕಿ ನಿಗಮದ ಹಗರಣವು ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ರಾಜ್ಯ ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 196 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದ ಜಾರಿ ನಿರ್ದೇಶನಾಲಯ (ED) ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಕಾಂಗ್ರೆಸ್ ಮಾಜಿ ಸಚಿವ ಬಿ. ನಾಗೇಂದ್ರ ಅವರ ಕೈವಾಡ ಇರುವುದು ಖಚಿತವಾಗಿದೆ. ಹಗರಣದ ಮಾಸ್ಟರ್ ಮೈಂಡ್ ಈ ನಾಗೇಂದ್ರ ಎಂದು ಉಲ್ಲೇಖಿಸಲಾಗಿದೆ.

ಜಾರಿ ನಿರ್ದೇಶನಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 5,114 ಪುಟಗಳಲ್ಲಿ 15 ಸಾಕ್ಷಿಗಳ ಹೇಳಿಕೆ ಸಹಿತ ಚಾರ್ಜ್‌ಶೀಟ್ ಅನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದರಲ್ಲಿ ಬಿ.ನಾಗೇಂದ್ರ, ಸತ್ಯನಾರಾಯಣ ವರ್ಮಾ (ಹೈದರಾಬಾದ್), ಎಟಕರಿ ಸತ್ಯನಾರಾಯಣ (ತೆಲಂಗಾಣ), ಜೆ ಜಿ ಪದ್ಮನಾಭ (ಪಾಲಿಕೆಯ ಮಾಜಿ ಎಂಡಿ) ಸೇರಿದಂತೆ 20 ಮಂದಿಯ ಹೆಸರನ್ನು ದೋಷಾರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ.

ED Chargesheet Submission B Nagendra as Mastermind of Valmiki Corporation Scam

ಮೊಬೈಲ್‌ನಲ್ಲಿ ಸಿಕ್ಕ ಸಾಕ್ಷ್ಯವೇನು?

ಮಾಜಿ ಸಚಿವ ಸೇರಿದಂತೆ ಈ ಮೇಲಿನ ಎಲ್ಲ ಆರೋಪಿಗಳಿಂದ ಬಹುಕೋಟಿ ಹಗರಣ ನಡೆದಿದೆ. ಈ ಪೈಕಿ ನಿಗಮದ 20 ಕೋಟಿ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಲಾಗಿದೆ. ಚುನಾವಣೆ ಹೊತ್ತಲ್ಲಿ ತೆಲಂಗಾಣದಲ್ಲಿ ಮದ್ಯ ಖರೀದಿಗೆ ಇಷ್ಟೊಂದು ಹಣ ಬಳಕೆ ಆಗಿರುವುದು, ಬಿ.ನಾಗೇಂದ್ರ ಆಪ್ತ ಸಹಾಯಕ ವಿಜಯ್ ಕುಮಾರ್ ಗೌಡ ಮೊಬೈಲ್ ನಲ್ಲಿ ಸಿಕ್ಕ ಸಾಕ್ಷ್ಯಗಳಿಂದ ರುಜುವಾತಾಗಿದೆ.

ಪ್ರಕರಣದಲ್ಲಿ ಮುಖ್ಯವಾಗಿ ನಿಗಮಕ್ಕೆ ಪದ್ಮನಾಭ ಎಂಬುವವರನ್ನು ನೇಮಕ ಮಾಡುವುದರೊಂದಿಗೆ ಕೋಟಿ ಕೋಟಿ ಲೂಟಿಗೆ ಆರೋಪಿಗಳು ಸಂಚು ಮಾಡಿದ್ದಾರೆ. ಇದರಲ್ಲಿ ಮಾಜಿ ಸಚಿವ ಬಿ.ನಾಗೇಂದ್ರರು ಪ್ರಮುಖ ಪಾತ್ರ ವಹಿಸಿರುವುದುತ ತನಿಖೆಯಿಂದ ತಿಳಿದು ಬಂದಿದೆ. ಹೀಗಾಗಿ ಮಾಜಿ ಸಚಿವರನ್ನೇ ಪ್ರಧಾನ ಆರೋಪಿಯನ್ನಾಗಿ ಮಾಡಲಾಗಿದೆ.

ಬಿ.ನಾಗೇಂದ್ರ ಸಹಚರರ ಜೊತೆಗೂಡಿ ಕೆಲವು ಖಾಸಗಿ ಸಭೆಗಳನ್ನು ಮಾಡಿದ್ದರು. ಹಣ ಹೊಡೆಯಲು ಹೊಸ ಬ್ಯಾಂಕ್ ಖಾತೆಯೊಂದನ್ನು ತೆರದು ಹಣ ಜಮಾ ಮಾಡುವಂತೆ ಮೊದಲೇ ನೇಮಕವಾಗಿದ್ದ ಪದ್ಮನಾಭ ಅವರಿಗೆ ಸೂಚನೆ ಕೊಡಲಾಗಿತ್ತು ಎಂದು ದೋಷಾರೋಪಲ್ಲಿ ಮಾಹಿತಿ ನೀಡಲಾಗಿದೆ.

ಇನ್ನೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜುಲೈ 12ರಂದು ಅವರನ್ನು ಬಂಧಿಸಿದ್ದರು. ಈ ಪ್ರಕರಣದಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ವಿಪಕ್ಷಗಳು ಆರೋಪ ಮಾಡಿದ್ದವು. ಪ್ರಕರಣದಿಂದ ಸರ್ಕಾರ ಮುಜುಗರ ಅನುಭವಿಸಬೇಕಾಯಿತು.

ಇದೇ ವಾಲ್ಮೀಕಿ ಪ್ರಕರಣವಾಗಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರನ್ ಅವರು ಕೋಟಿ ಕೋಟಿ ಲೂಟಿ, ಬ್ಯಾಂಕ್ ಖಾತೆಗೆ ಹಣ ವಿನಿಮಯ ಬ್ಯಾಂಕ್ ಜೊತೆಗಿನ ಆಡಿಟಿಂಗ್ ವಿಚಾರವಾಗಿ ಹೆಚ್ಚು ಒತ್ತಡ ಅನುಭವಿಸಿದ್ದರು. ಈ ಹಗರಣ ಅವರ ತಲೆಗೆ ಕಟ್ಟಲು ಪ್ರಯತ್ನ ನಡೆಸಲಾಗಿತ್ತು ಎಂಬ ಆರೋಪ ಸಹ ಕೇಳಿ ಬಂದಿದೆ. ಇದೆಲ್ಲ ಕಾರಣದಿಂದ ಅವರು ಮೇ 26ರಂದು ಶಿಮವೊಗ್ಗದ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ಬಳಿಕ ಅಂದು ಅವರು ಬರೆದಿಟ್ಟಿದ್ದ ಡೆತ್‌ನೋಟ್ ಪೊಲೀಸರ ಕೈ ಸೇರಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+