ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ED ದಾಳಿ: ಯಾಕೆ?
ಬೆಂಗಳೂರು, ಏಪ್ರಿಲ್ 25: ಈವರೆಗೂ ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಹೆಸರು ತುಳುಕು ಹಾಕಿಕೊಂಡು ಸಂಕಷ್ಟ ಎದುರಿಸುತ್ತಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು, ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸದ ಮೇಲೆ ಏಪ್ರಿಲ್ 23 ಬುಧವಾರ ರಾತ್ರಿ ಏಕಾಏಕಿ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಂಪೂರ್ಣ ೨೮ ಗಂಟೆಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದಲ್ಲಿ ಚಿನ್ನ ಅವ್ಯವಹಾರ ಪ್ರಕರಣ ಬಹಳಷ್ಟು ಸದ್ದು ಮಾಡಿದ್ದು, ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಪ್ರಕರಣದಲ್ಲಿ ಕೋಟ್ಯಾಂತರ ರೂಪಾಯಿ ಬೇನಾಮಿ ವ್ಯವಹಾರ ನಡೆಸಿದ್ದಾರೆ ಎಂದು ಪೊಲೀಸರು ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿ ಆಧರಿಸಿ ಇಸಿಐಆರ್ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹಲವಾರು ಉದ್ಯಮಿಗಳ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಸ್ವತಃ ವಿನಯ್ ಕುಲಕರ್ಣಿ ಮಾಧ್ಯಮಗಳ ಜೊತೆ ಮಾತನಾಡಿದ್ದು, 'ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅವರ ಕೆಲಸ ಅವರು ಮಾಡಿದ್ದಾರೆ. ಈ ಪ್ರಕರಣದ ಹಿಂದಿನ ಕೈಗಳೇ ಬೇರೆ. ನನ್ನ ಮೇಲೆ ಯಾವ್ಯಾವ ಕೇಸ್ ಹಾಕಬೇಕು ಅದನೆಲ್ಲಾ ಈಗಾಗಲೇ ಹಾಕಿದ್ದಾರೆ. ಇದೆಲ್ಲಾ ರಾಜಕೀಯ ಷಡ್ಯಂತ್ರ. ನನ್ನ ಮನೆಯಲ್ಲಿ ಏನೂ ಸಿಕ್ಕಿಲ್ಲ. ನಾನು ಯಾವುದೇ ವ್ಯವಹಾರ ಮಾಡುವುದಿಲ್ಲ. ನಾವು ರೈತರು. ಅದನ್ನು ಬಿಟ್ಟು ಬೇರೆ ಉದ್ಯೋಗ ನನಗೆ ಗೊತ್ತಿಲ್ಲ' ಎಂದರು.

'ಅವರಿಗೆ ಏನು ಬೇಕಾಗಿತ್ತು ಅದೆಲ್ಲಾ ಹುಡುಕಿದ್ದಾರೆ. ಆದರೆ ನನ್ನ ಹತ್ತಿರ ಏನೂ ಸಿಕ್ಕಿಲ್ಲ. ನಿರಂತರವಾಗಿ ಒಂದು ತಿಂಗಳಿನಿಂದ ನನ್ನ ಮೇಲೆ ಈ ರೀತಿಯ ಕಿರುಕುಳ ನಡೆಯುತ್ತಿದೆ. ರಾಜಕೀಯವಾಗಿ ನಾನು ಯಾರನ್ನೂ ಭೇಟಿಯಾಗಲು ಆಗುತ್ತಿಲ್ಲ. ನಾನು ಶಾಸಕನಾದರೂ ಕೂಡ ನನ್ನ ಕ್ಷೇತ್ರಕ್ಕೆ ಹೋಗಲು ಆಗುವುತ್ತಿಲ್ಲ. ಪಕ್ಷ ಯಾವುದೇ ಆದರೂ ಕೂಡ ಒಬ್ಬ ಮನುಷ್ಯನಿಗೆ ಕಿರುಕುಳ ಕೊಡುವುದಕ್ಕೆ ಒಂದು ಮಿತಿ ಇರಬೇಕು. ತುಂಬಾ ನೋವಾಗುತ್ತದೆ' ಎಂದು ಭಾವುಕರಾಗಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications