ಬಂಧನ ಭೀತಿಯಲ್ಲಿ ಡಿಕೆ ಶಿವಕುಮಾರ್: ಶ್ರೀರಾಮುಲು ಅಣ್ಣ ಉವಾಚ
ಬೆಂಗಳೂರು, ಆಗಸ್ಟ್ 30: ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮನ್ನು ಬಾಯಿತುಂಬ ಅಣ್ಣ ಎಂದು ಕರೆಯುತ್ತಿದ್ದ ಡಿ ಕೆ ಶಿವಕುಮಾರ್ ಅವರಿಗೆ ಇಡಿ ಸಮನ್ಸ್ ನೀಡಿದ ವಿಚಾರದಲ್ಲಿ, ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.
" ಇದೊಂದು ಡಿ ಕೆ ಶಿವಕುಮಾರ್ ಅವರೊಬ್ಬರಿಗೆ ಸಂಬಂಧಪಟ್ಟ ವಿಚಾರವಲ್ಲ. ಅನೇಕ ಉದಾಹರಣೆಗಳು ದೇಶದಲ್ಲಿ ಸಿಗುತ್ತವೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ " ಎಂದು ಶ್ರೀರಾಮುಲು ಹೇಳಿದರು.
" ಯಾರ್ಯಾರು ಭ್ರಷ್ಟಾಚಾರ, ಹವಾಲ ದಂಧೆ, ಅಕ್ರಮವಾಗಿ ವ್ಯವಹಾರ ಮಾಡಿಕೊಂಡು ಬಂದಿದ್ದಾರೋ, ಅವರಿಗೆಲ್ಲಾ ಇವತ್ತಿಲ್ಲಾಂದ್ರೆ, ನಾಳೆ ಇದೇ ಆಗುವುದು. ಉಪ್ಪು ತಿಂದವನು ನೀರು ಕುಡಿಯಲೇ ಬೇಕಲ್ಲವೇ " ಎಂದು ಶ್ರೀರಾಮುಲು ಅಭಿಪ್ರಾಯ ಪಟ್ಟರು.

" ಈ ಹಿಂದೆ ಆದಾಯ ತೆರಿಗೆ ಅಧಿಕಾರಿಗಳು ಅವರ ಮನೆಗೆ ದಾಳಿ ನಡೆಸಿದ ಸಂದರ್ಭದಲ್ಲಿ, ಅವರ ಎದುರೇ ದಾಖಲೆಗಳನ್ನು ಡಿ ಕೆ ಶಿವಕುಮಾರ್ ಹರಿದು ಹಾಕಿರುವ ಉದಾಹರಣೆ ಇದೆ. ಸುಮ್ಮನೇ, ಎಲ್ಲದಕ್ಕೂ ಮೋದಿಯನ್ನು ದೂರಿದರೆ ಆಗುತ್ತಾ " ಎಂದು ಶ್ರೀರಾಮುಲು ಪ್ರಶ್ನಿಸಿದರು.
" ಬೇನಾಮಿ ಆಸ್ತಿಗಳನ್ನು ಅವರು ಮಾಡಿದ್ದರೆ ಅವರು ಸಿಕ್ಕಿ ಹಾಕಿಕೊಳ್ಳುತ್ತಾರೆ. ವಿಚಾರಣೆಯ ವೇಳೆ ಏನೂ ತಪ್ಪು ಮಾಡಿಲ್ಲ ಎಂದಾದರೆ, ಅವರು ನಿರ್ದೋಷಿಯಾಗುತ್ತಾರೆ " ಎಂದು ಶ್ರೀರಾಮುಲು ಹೇಳಿದರು.
" ರಾಜಕಾರಣ ಬೇರೆ, ವ್ಯಾಪಾರ ಬೇರೆ. ವ್ಯಾಪಾರದಲ್ಲಿ ಏನು ಆಗಬೇಕೋ ಅದು ಆಗಬೇಕು, ರಾಜಕೀಯದಲ್ಲಿ ಏನು ಆಗಬೇಕೋ, ಅದು ಆಗುತ್ತೆ " ಎಂದು ಶ್ರೀರಾಮುಲು, ಎರಡಕ್ಕೂ ಒಂದಕ್ಕೊಂದು ಸಂಬಂಧ ಕಲ್ಪಿಸಬೇಡಿ ಎಂದು ಅಭಿಪ್ರಾಯ ಪಟ್ಟರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications