ಸೋನಿಯಾಗೆ ಮತ್ತೆ ಇಡಿ ಸಮನ್ಸ್; ಕಾಂಗ್ರೆಸ್ನಿಂದ ಮೌನ ಸತ್ಯಾಗ್ರಹ
ಬೆಂಗಳೂರು ಜುಲೈ 24: ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿಚಾರಣೆ ಎದುರಿಸಿ ಬಂದಿದ್ದರು. ಆದರೆ ಅವರಿಗೆ ನೀಡುವ ಕಿರುಕುಳ ನಿಲ್ಲುತ್ತಿಲ್ಲ. ಇದರ ವಿರುದ್ಧ ಜುಲೈ 26ರಂದು ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ಮೌನ ಸತ್ಯಾಗ್ರಹ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.
ಭಾನುವಾರ ಸದಾಶಿವನಗರ ನಿವಾಸದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜುಲೈ 26ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಆನಂದ್ರಾವ್ ವೃತ್ತ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಮುಂದೆ ಮೌನ ಸತ್ಯಾಗ್ರಹ ಮಾಡಲಿದ್ದೇವೆ. ಈ ವೇಳೆ ರಾಜ್ಯ ಕಾಂಗ್ರೆಸ್ನ ಎಲ್ಲ ನಾಯಕರು, ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಾಲಿಕೆ ಸದಸ್ಯರು, ಮಾಜಿ ಕಾರ್ಪೊರೇಟರ್ಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಪಾಲ್ಗೊಂಡು, ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಒಡ್ಡುತ್ತಿರುವ ಕಿರುಕುಳ ಖಂಡಿಸಲಿದ್ದಾರೆ" ಎಂದರು.
"ಜುಲೈ 26 ರಂದು ಮಂಗಳವಾರ ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಇಡಿ ದಾಳಿ ಪ್ರಕರಣದಲ್ಲೂ ಸಹ ನನ್ನ ತಾಯಿಗೂ ಇಡಿ ಅಧಿಕಾರಿಗಳು ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ಅನುಮತಿ ನೀಡುವಂತೆ ನಾನು ನ್ಯಾಯಾಲಯದ ಮೊರೆ ಹೋಗಿದ್ದೆ" ಎಂದು ತಮಗಾದ ಅನುಭವ ಕುರಿತು ಡಿ. ಕೆ. ಶಿವಕುಮಾರ್ ವಿವರಿಸಿದರು.

ವಿಚಾರಣೆ ಎದುರಿಸದರೂ ಕಿರುಕುಳ ತಪ್ಪುತ್ತಿಲ್ಲ
"ಸೋನಿಯಾ ಗಾಂಧಿ ಯಾವುದಕ್ಕೂ ಹೆದರಿಲ್ಲ. ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿ ಬಂದಿದ್ದಾರೆ. ವಿಚಾರಣೆಗೆ ಹಾಜರಾದರೂ ಸಹ ಮತ್ತೆ ಸಮನ್ಸ್ , ವಿಚಾರಣೆ ಎಂದು ಅಧಿಕಾರಿಗಳ ಕಿರುಕುಳ ನಿಲ್ಲುತ್ತಿಲ್ಲ. ಇದೆಲ್ಲವನ್ನು ನೋಡಿದರೆ ಇದರಲ್ಲಿ ಬಿಜೆಪಿಯ ರಾಜಕೀಯ ದುರುದ್ದೇಶ ಅಡಗಿರುವುದು ಗೊತ್ತಾಗುತ್ತಿದೆ" ಎಂದು ಡಿ. ಕೆ. ಶಿವಕುಮಾರ್ ಆರೋಪಿಸಿದರು.

ಪಕ್ಷ ಸಂಘಟನೆ ವಿಚಾರ ಚರ್ಚೆ ಆಗಿದೆ
"ಭಾರತ ಜೋಡೋ ಪಾದಯಾತ್ರೆ ಚಾಮರಾಜನಗರ, ಮೈಸೂರು, ಶ್ರೀರಂಗಪಟ್ಟಣ, ನಾಗಮಂಗಲ, ಮೇಲುಕೋಟೆ, ಪಾಂಡವಪುರ, ಮಾರ್ಗವಾಗಿ ತುಮಕೂರು ಜಿಲ್ಲೆ ಪ್ರವೇಶಿಸಲಿದೆ. ಇದಕ್ಕೆ ಸಂಬಂಧಿಸಿದ ತಯಾರಿ ಕುರಿತು ಚರ್ಚೆ ಮಾಡಿದ್ದೇವೆ. ರಾಜ್ಯದಲ್ಲಿ ಪಕ್ಷದ ಸಂಘಟನೆ ವಿಚಾರ ಹೊರತುಪಡಿಸಿ ಬೇರೆ ಯಾವ ವಿಚಾರವಾಗಿ ಯಾವುದೇ ನಾಯಕರು ನನ್ನ ಬಳಿ ಚರ್ಚೆ ಮಾಡಿಲ್ಲ. ಇತರ ವಿಷಯಗಳ ಕುರಿತು ಚರ್ಚೆ ಮಾಡಲು ಅವಕಾಶ ನೀಡುವುದಿಲ್ಲ" ಎಂದು ಚೆಲುವರಾಯಸ್ವಾಮಿ, ಬಾಲಕೃಷ್ಣ ಅವರ ಜತೆ ಶನಿವಾರ ರಾತ್ರಿ ನಡೆದ ಸಮಾಲೋಚನೆಯ ಪ್ರಶ್ನೆಗೆ ಅವರು ಉತ್ತರಿಸಿದರು.

ಜನ ಕಾಂಗ್ರೆಸ್ಗೆ ಅಧಿಕಾರ ನೀಡಲಿದ್ದಾರೆ
"ಕಾಂಗ್ರೆಸ್ ಜಗಳ ಬೀದಿಗೆ ಬಂದಿದೆ. ಒಂದು ಹುದ್ದೆಗೆ ನಾಲ್ಕು ಜನ ಕಿತ್ತಾಡುತ್ತಿದ್ದಾರೆ" ಎಂಬ ಸಚಿವ ಆರ್. ಅಶೋಕ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ. ಕೆ. ಶಿವಕುಮಾರ್, "ಜನರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆ ಎಂಬ ಸತ್ಯವನ್ನು ಬಿಜೆಪಿಯವರು ಒಪ್ಪಿಕೊಂಡಿದ್ದಾರೆ. ಅವರಿಗೆ ಅಭಿನಂದನೆಗಳು" ಎಂದು ಲೇವಡಿ ಡಿ. ಕೆ. ಶಿವಕುಮಾರ್ ಲೇವಡಿ ಮಾಡಿದರು.

ಬಿಜೆಪಿಯಿಂದ ನಾವು ಶಿಸ್ತು ಕಲಿಯಬೇಕಿಲ್ಲ
"ಬಿಜೆಪಿ ನೋಡಿ ಕಾಂಗ್ರೆಸ್ ಪಕ್ಷ ಶಿಸ್ತು ಕಲಿಯಬೇಕಾಗಿಲ್ಲ. ಅದರ ಅಗತ್ಯವು ನಮಗಿಲ್ಲ. ಬಿಜೆಪಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ತುಂಬಿದೆ. ಜನರ ಹಣ ಲೂಟಿ ಮಾಡೋದನ್ನು ಅವರಿಂದ ಕಲಿಯಬೇಕಾ?. ಬಿಜೆಪಿಯಲ್ಲಿರವ ಕೊಳಕು, ಬಿಜೆಪಿ ನಾಯಕರೇ ಅರಗಿಸಿಕೊಳ್ಳಲು ಸಾಧ್ಯವಿದೆಯೇ. ಈ ಬಗ್ಗೆ ಅವರ ಕಾರ್ಯಕರ್ತರೇ ಉತ್ತರಿಸುತ್ತಾರೆ" ಎಂದು ಡಿ. ಕೆ. ಶಿವಕುಮಾರ್ ಪ್ರಶ್ನೆಯೊಂದಕ್ಕೆ ಉತ್ತರಿಸಿ ವ್ಯಂಗ್ಯವಾಡಿದರು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಮತ್ತೆ ಮಂಗಳವಾರ ದೆಹಲಿಯಲ್ಲಿನ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಇತ್ತ ಕರ್ನಾಟಕ, ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆಗಳು ತೀವ್ರಗೊಳ್ಳುವ ಸಾಧ್ಯತೆ ಇದೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications