Education Department: ಸರ್ಕಾರಿ ಪದವಿ ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ
ಬೆಂಗಳೂರು, ಫೆಬ್ರವರಿ 14: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಜಾನಪದ ಉತ್ಸವ -2025 ವನ್ನು ಆಚರಿಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಅಡಗಿರುವ ಆಯಾ ಪ್ರಾದೇಶಿಕ ಸಾಂಪ್ರದಾಯಿಕ ಕಲೆ ಹಾಗೂ ಕೌಶಲ್ಯಗಳನ್ನು ಪುದರ್ಶಿಸಲು ಹಾಗೂ ಸ್ಪರ್ಧೆ/ಆಚರಣೆಗಳು ಇತ್ಯಾದಿಗಳನ್ನು ಮುಂಬರುವ ಫೆಬ್ರವರಿ/ ಮಾರ್ಚ್ ತಿಂಗಳುಗಳಲ್ಲಿ ಆಯೋಜಿಸಿ, ಅರ್ಥಪೂರ್ಣವಾಗಿ ಆಚರಿಸಬೇಕೆಂದು ಸೂಚಿಸಲಾಗಿದೆ.
ಈ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನ ಹೊರಡಿಸಿದ್ದು, ಇಂದಿನ ಪಾಶ್ಚಾತ್ಯ ಶೈಲಿಯ ಆಧುನಿಕ ಜೀವನದಲ್ಲಿ ದೇಸೀ ಸಂಸ್ಕೃತಿಯು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ. ಜನಪದ ಸಾಹಿತ್ಯ, ಪರಿಸರ, ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯ, ಪಾರಂಪರಿಕ ಕರಕುಶಲ ವಸ್ತುಗಳ ತಯಾರಿಕೆ, ಜನಾಂಗೀಯ ಪಾಕಪದ್ಧತಿ (ದೇಸೀ ಆಹಾರ), ದೇಸೀ ಉಡುಗೆ-ತೊಡುಗೆ, ದೇಸೀ ನೃತ್ಯ-ಸಂಗೀತ, ಆಟ, ಈ ಎಲ್ಲವನ್ನು ಒಳಗೊಂಡಿರುವುದೇ ಜಾನಪದವೆಂದು ಹೇಳಬಹುದು.

ಈ ದೇಸೀ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿ ತಲೆ-ತಲೆಮಾರುಗಳಿಂದ ಬಂದಿರುವ ಆಯಾ ಪ್ರಾದೇಶಿಕ/ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿ / ಸೊಗಡುಗಳ ಬಗ್ಗೆ, ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಹಾಗೂ ತನ್ನ ಸುತ್ತಲಿನ ಪರಿಸರ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತೆ ಮಾಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು, ಸೃಜನಶೀಲತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇಲಾಖಾ ವತಿಯಿಂದ " ನಮ್ಮ ಸಂಸ್ಕೃತಿ-ನಮ್ಮ ಹೆಮ್ಮೆ" ಶೀರ್ಷಿಕೆಯಡಿಯಲ್ಲಿ "ಜಾನಪದ ಉತ್ಸವ-2025" ನ್ನು ಆಚರಿಸಲು ಉದ್ದೇಶಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಅಡಗಿರುವ ಆಯಾ ಪ್ರಾದೇಶಿಕ ಸಾಂಪ್ರದಾಯಿಕ ಕಲೆ ಹಾಗೂ ಕೌಶಲ್ಯಗಳನ್ನು ಪುದರ್ಶಿಸಲು ಹಾಗೂ ಸ್ಪರ್ಧೆ/ಆಚರಣೆಗಳು ಇತ್ಯಾದಿಗಳನ್ನು ಮುಂಬರುವ ಫೆಬ್ರವರಿ/ ಮಾರ್ಚ್ ತಿಂಗಳುಗಳಲ್ಲಿ ಆಯೋಜಿಸಿ, ಅರ್ಥಪೂರ್ಣವಾಗಿ ಆಚರಿಸಬೇಕೆಂದು ಸೂಚಿಸಲಾಗಿದೆ. "ಜಾನಪದ ಉತ್ಸವ-2025″ ನ್ನು ಫೆಬ್ರವರಿ ಹಾಗೂ ಮಾರ್ಚ್- 2025 ರ ತಿಂಗಳಿನಲ್ಲಿ ತಮ್ಮ ತಮ್ಮ ಕಾಲೇಜಿನ ಹಂತದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮಕೈಗೊಳ್ಳುವುದು ಹಾಗೂ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಸಚಿತ್ರ ಸಮೇತ ವರದಿಗಳನ್ನು ಕೇಂದ್ರ ಕಛೇರಿಯ ಇ-ಮೇಲ್ ವಿಳಾಸ : [email protected] ಕ್ಕೆ ಏಪ್ರಿಲ್-5 ರೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈ ಕೆಳಗೆ ನೀಡಿರುವ ಕಾರ್ಯಕ್ರಮಗಳಲ್ಲಿ ತಮಗೆ ಸೂಕ್ತವಾದ ಕಾರ್ಯಕ್ರಮ/ಕಾರ್ಯಕ್ರಮಗಳನ್ನು "ಜಾನಪದ ಉತ್ಸವ-2025" ದಡಿಯಲ್ಲಿ ಹಮ್ಮಿಕೊಳ್ಳಬಹುದಾಗಿರುತ್ತದೆ.
1. ಜನಪದ. ಸಾಹಿತ್ಯ, ಪರಿಸರ, ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯ, ಇವುಗಳ ಕುರಿತ ಕಾರ್ಯಗಾರಗಳು.
2. ಪಾರಂಪರಿಕ ಕರಕುಶಲ ವಸ್ತುಗಳ ತಯಾರಿಕೆ/ವಸ್ತು ಪ್ರದರ್ಶನ.
3. ಜನಾಂಗೀಯ ಪಾಕಪದ್ಧತಿ (ದೇಸೀ ಆಹಾರ) - ಇವುಗಳ ಪ್ರದರ್ಶನ ಹಾಗೂ ಸ್ಪರ್ಧೆ.
4. ಸ್ಥಳೀಯ ಕಲಾವಿದರುಗಳಿಂದ ದೇಸೀ ಉಡುಗೆ-ತೊಡುಗೆಗಳು - ಇವುಗಳ ಪ್ರದರ್ಶನ ಹಾಗೂ ಸ್ಪರ್ಧೆ.
5. ಸ್ಥಳೀಯ ಕಲಾವಿದರುಗಳಿಂದ ದೇಸೀ ನೃತ್ಯ-ಸಂಗೀತ, ಆಟ - ಇವುಗಳ ಪ್ರದರ್ಶನ ಹಾಗೂ ಸ್ಪರ್ಧೆ.
6. ಮೇಲೆ ತಿಳಿಸಿರುವ ವಿಷಯಗಳಲ್ಲಷ್ಟೇ ಅಲ್ಲದೆ ವಿದ್ಯಾರ್ಥಿಗಳಲ್ಲಿ ವಿಶೇಷವಾದ ಸೃಜನಾತ್ಮಕ/ಕಲಾತ್ಮಕ ಕೌಶಲ್ಯತೆಗಳೇನಾದರೂ ಇದ್ದಲ್ಲಿ ಅಂತಹ ಕೌಶಲ್ಯತೆಗಳನ್ನು ಗುರುತಿಸಿ, ಅವುಗಳನ್ನು ಪ್ರದರ್ಶಿಸಲು ತಮ್ಮ ಹಂತದಲ್ಲೇ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಿಕೊಡುವಂತೆ ಸೂಚಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications