ಟಿಪ್ಪು ಮತಾಂತರ ಮಾಡಿದ್ದ: ಈ ಸತ್ಯವನ್ನು ಪಠ್ಯದಲ್ಲಿ ಸೇರಿಸಿದ್ದೇವೆ- ಬಿ.ಸಿ. ನಾಗೇಶ್

ಬೆಂಗಳೂರು, ಮೇ. 23: ಶಾಲಾ ಹಾಗೂ ಕಾಲೇಜು ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಏರ್ಪಟ್ಟಿರುವ ಗೊಂದಲ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಸರ್ಕಾರದ ಕೆಲಸಗಳನ್ನು ಸಹಿಸಿಕೊಳ್ಳದೇ ಅನಾವಶ್ಯಕವಾಗಿ ಸುಳ್ಳು ಪ್ರಚಾರ ಮಾಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್‌ಗೆ ಟಾಂಗ್ ನೀಡಿದ್ದಾರೆ.

ದ್ವಿತೀಯ ಪಿಯುಸಿ ಇತಿಹಾಸ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದರು.

''ಕಳೆದ ವರ್ಷ ಹಲವರು ಕಾರಣಗಳಿಂದ ಶಾಲೆ ಆರಂಭವಾಗಲ್ಲ ಎಂದಿದ್ದರು. ಶಾಲೆ ಪ್ರಾರಂಭ ಎಂದಾಗಲೂ ಕೋವಿಡ್ ನೆಪ ಹೇಳಿದ್ದರು. ಬಡವರ ಪ್ರಾಣದ ಜತೆ ಚೆಲ್ಲಾಟ ಎಂದಿದ್ದರು. ಶಾಲೆಯಲ್ಲಿನ ಬಡ ವಿದ್ಯಾರ್ಥಿಗಳ ವ್ಯಾಸಂಗ ಗಮನಿಸಿ ಸರ್ಕಾರ ಶಾಲೆ ಪ್ರಾರಂಭಿಸಿತು. ಹಿಜಾಬ್ ವಿಚಾರದಲ್ಲಿ ತಗಾದೆ ತೆಗೆದರು. ಅದು ಸರಿಯಾಗಲಿಲ್ಲ. ಕೋರ್ಟ್ ಆದೇಶ ಬಂದಾಗ ಅದನ್ನೂ ಸಹಿಸಲಿಲ್ಲ. ಬೊಮ್ಮಾಯಿ ಸರ್ಕಾರದ ಕೆಲಸಗಳನ್ನು ಸಹಿಸದೇ ವಿರೋಧ ಪಕ್ಷದವರು ಗೊಂದಲ ಸೃಷ್ಟಿಸುತ್ತಿದ್ದಾರೆ,'' ಎಂದು ಆರೋಪಿಸಿದರು.

Education Minister BC Nagesh clarification on Karnataka text book revision row

ಬೊಮ್ಮಾಯಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ. ಹದಿನೈದು ಸಾವಿರ ಶಿಕ್ಷಕರ ನೇಮಕಾತಿ ಆಗುತ್ತಿದೆ. 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ ಸಹಿಸೋಕೆ ವಿರೋಧ ಪಕ್ಷಕ್ಕೆ ಆಗುತ್ತಿಲ್ಲ. 7000 ಶಾಲಾ ಕಟ್ಟಡ ನಿರ್ಮಾಣ ಮಾಡಿದರು. ಕಲಿಕಾ ಚೇತರಿಕೆ ಹಮ್ಮಿಕೊಂಡೆವು. ಇವನ್ನು ಸಹಿಸಲು ವಿರೋಧ ಪಕ್ಷಕ್ಕೆ ಆಗುತ್ತಿಲ್ಲ.

''ಪಠ್ಯ ಪುಸ್ತಕ ವಿಚಾರಕ್ಕೆ ಬಂದರೆ, ಟಿಪ್ಪು ಸುಲ್ತಾನ್ ಪಠ್ಯ ತೆಗೆಸಿದ್ದಾರೆ, ಭಗತ್ ಸಿಂಗ್ ಪಠ್ಯ ಬಿಟ್ಟಿದ್ದಾರೆ ಎಂದು ಹಬ್ಬಿಸಿದರು. ಶಿಕ್ಷಣ ಸಚಿವನಾಗಿ ನಾನು ಸ್ಪಷ್ಟನೆ ನೀಡಿದ್ದರೂ ಸುಳ್ಳು ಪ್ರಚಾರ ಮಾಡಿದರು. ಬಸವಣ್ಣ, ನಾರಾಯಣ ಗುರು, ಪಠ್ಯ ತೆಗೆಸಿದರು ಎಂದು ಹಬ್ಬಿಸಿದರು. ಈಗ ಕುವೆಂಪು ಪಠ್ಯ ಕುರಿತ ಗೊಂದಲ ಸೃಷ್ಠಿಸಿ ಜಾತಿ ವಿಚಾರ ಎಳೆದು ತರುತ್ತಿದ್ದಾರೆ'' ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕಿಡಿ ಕಾರಿದ್ದಾರೆ.

Recommended Video

      Rohit Sharma ಹೀಗೆ ಯಾವ IPLನಲ್ಲೂ ಆಡಿಲ್ಲ | #Cricket | Oneindia Kannada

      ಟಿಪ್ಪು ಸುಲ್ತಾನ್ ಮತಾಂತರ ಮಾಡ್ತಿದ್ದ. ಬಲವಂತವಾಗಿ ಟಿಪ್ಪು ಸುಲ್ತಾನ್ ಮತಾಂತರ ಮಾಡುತ್ತಿದ್ದ ಬಗ್ಗೆ ಉಲ್ಲೇಖಗಳಿವೆ. ಕೊಡಗು, ಮೈಸೂರು, ಮತಾಂತರ ಮಾಡಿದ್ದವ ಟಿಪ್ಪು ಮಾಡಿದ್ದು ಸತ್ಯ.. ಅವರ ಬಗ್ಗೆ ನಿಜ ಬರೆಯಬೇಕಿತ್ತು. ಬ್ರಿಟಿಷರ ವಿರುದ್ದ ಹೋರಾಡಿದ್ದ ಕುರಿತು 10ನೇ ತರಗತಿ, ಸಂಗೊಳ್ಳಿ ರಾಯಣ್ಣ, ಅಬ್ಬಕ್ಕ, ಮದಕರಿ, ಎಲ್ಲರೂ ಬ್ರಿಟೀಷರ ವಿರುದ್ದ ಹೋರಾಡಿದವರೇ ಹಿಂದೂ ಎಂಬ ಕಾರಣಕ್ಕೆ ಅವರನ್ನೆಲ್ಲಾ ಕೈಬಿಟ್ಟು, ಟಿಪ್ಪು ಬಗ್ಗೆ ಮಾತ್ರ ಆರು ಪುಟ ಪಠ್ಯ ಸೇರಿಸಿದ್ದರು. ಬರಗೂರು ರಾಮಚಂದ್ರಪ್ಪರಂತೆ ನಾವು ಕೆಟ್ಟರಾಜಕೀಯ ನಾವು ಮಾಡುವುದಿಲ್ಲ, ಟಿಪ್ಪು ಸುಲ್ತಾನ್ ಪಠ್ಯ ತೆಗೆದಿಲ್ಲ. ಇಂತಹ ಸತ್ಯವನ್ನು ಅಳವಡಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+