Breaking; ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ಗೆ ತಡೆ
ಶಿಕ್ಷಕರ ಸ್ಥಳ ನಿಯುಕ್ತಿಗೆ ಜನವರಿ 24ರಂದು ನಡೆಸಲಾಗುತ್ತಿದ್ದ ಕೌನ್ಸಿಲಿಂಗ್ ಸ್ಥಗಿತಗೊಳಿಸಲಾಗಿದೆ. ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ. ನಾಗೇಶ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು, ಜನವರಿ 24; ಕರ್ನಾಟಕದಲ್ಲಿ ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಲ್ಲದೇ ಜನವರಿ 24ರಂದು ನಡೆದ ಎಲ್ಲಾ ಪ್ರಕ್ರಿಯೆ ರದ್ದುಗೊಳಿಸಲು ಆದೇಶ ನೀಡಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. 24/1/2023ರಂದು ಕೌನ್ಸಿಲಿಂಗ್ ಮೂಲಕ ಹೆಚ್ಚುವರಿ ಶಿಕ್ಷಕರುಗಳಿಗೆ ಸ್ಥಳ ನಿಯುಕ್ತಿಗೊಳಿಸಲಾಗುತ್ತಿತ್ತು.
ಈ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷದಿಂದಾಗಿ ಹೆಚ್ಚುವರಿ ಶಿಕ್ಷಕರ ಪಟ್ಟಿಯಲ್ಲಿ ನ್ಯೂನ್ಯತೆಗಳಿದ್ದರೂ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುತ್ತಿರುವುದು ಸಚಿವರ ಗಮನಕ್ಕೆ ಬಂದಿತ್ತು.

ಸಚಿವರು ಈ ಹಿನ್ನಲೆಯಲ್ಲಿ ಕೌನ್ಸಿಲಿಂಗ್ಗೆ ತಾತ್ಕಾಲಿಕ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ಕೌನ್ಸಿಲಿಂಗ್ ಪ್ರಕ್ರಿಯೆ ಕುರಿತ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಕಡತದಲ್ಲಿ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಸದರಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಮತ್ತು ಇಂದಿನ ದಿನದ ಎಲ್ಲಾ ಪ್ರಕ್ರಿಯೆ ರದ್ದುಗೊಳಿಸುವಂತೆ ಸಚಿವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ಗೆ ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಆನ್ಲೈನ್ ಮೂಲಕ ಕೌನ್ಸಿಲಿಂಗ್ ನಡೆಸಲಾಗುತ್ತಿತ್ತು. ಜನವರಿ 25ರಂದು ಪ್ರೌಢಶಾಲಾ ಶಿಕ್ಷಕರ ಕೌನ್ಸಿಲಿಂಗ್ ನಡೆಯಲಿದೆ.
ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಹಲವು ಜಿಲ್ಲೆಗಳಲ್ಲಿ ವಿರೋಧ ವ್ಯಕ್ತವಾಗಿದೆ. ಶಿಕ್ಷಕರನ್ನು ವರ್ಗಾವಣೆ ಮಾಡಬಾರದು ಎಂದು ಪೋಷಕರು ಪ್ರತಿಭಟನೆ ನಡೆಸಿದ್ದರು. ಇದರ ನಡುವೆಯೇ ಮಂಗಳವಾರ ಕೌನ್ಸಿಲಿಂಗ್ ನಡೆದಿತ್ತು. ಅದರಲ್ಲಿ ತಾಂತ್ರಿಕ ದೋಷಗಳು ಕಂಡು ಬಂದಿದ್ದು, ಸಚಿವರು ಇಡೀ ದಿನದ ಪ್ರಕ್ರಿಯೆ ರದ್ದುಗೊಳಿಸಿದ್ದಾರೆ.
ಮುಂದಿನ ಕೌನ್ಸಿಲಿಂಗ್ ಪ್ರಕ್ರಿಯೆಯ ಮಾಹಿತಿಯನ್ನು ಶಿಕ್ಷಣ ಇಲಾಖೆ ಶೀಘ್ರದಲ್ಲಿಯೇ ಪ್ರಕಟಿಸುವ ನಿರೀಕ್ಷೆ ಇದೆ. ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಆರಂಭವಾದರೆ ಕೌನ್ಸಿಲಿಂಗ್ ಪ್ರಕ್ರಿಯೆಯೂ ವಿಳಂಬವಾಗುವ ನಿರೀಕ್ಷೆ ಇದೆ.
-
ಉಡುಪಿ ಜಿಲ್ಲೆಯ ವಂಡ್ಸೆ ಸರ್ಕಾರಿ ಶಾಲೆಗೆ ರಾಜ್ಯದ ಮೊದಲ ಎಐ ಟೀಚರ್ 'ಐರಿಸ್' ಎಂಟ್ರಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ











Click it and Unblock the Notifications