Breaking; ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ಗೆ ತಡೆ
ಶಿಕ್ಷಕರ ಸ್ಥಳ ನಿಯುಕ್ತಿಗೆ ಜನವರಿ 24ರಂದು ನಡೆಸಲಾಗುತ್ತಿದ್ದ ಕೌನ್ಸಿಲಿಂಗ್ ಸ್ಥಗಿತಗೊಳಿಸಲಾಗಿದೆ. ಪ್ರಾಥಮಿಕ, ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ. ನಾಗೇಶ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು, ಜನವರಿ 24; ಕರ್ನಾಟಕದಲ್ಲಿ ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಲ್ಲದೇ ಜನವರಿ 24ರಂದು ನಡೆದ ಎಲ್ಲಾ ಪ್ರಕ್ರಿಯೆ ರದ್ದುಗೊಳಿಸಲು ಆದೇಶ ನೀಡಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. 24/1/2023ರಂದು ಕೌನ್ಸಿಲಿಂಗ್ ಮೂಲಕ ಹೆಚ್ಚುವರಿ ಶಿಕ್ಷಕರುಗಳಿಗೆ ಸ್ಥಳ ನಿಯುಕ್ತಿಗೊಳಿಸಲಾಗುತ್ತಿತ್ತು.
ಈ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷದಿಂದಾಗಿ ಹೆಚ್ಚುವರಿ ಶಿಕ್ಷಕರ ಪಟ್ಟಿಯಲ್ಲಿ ನ್ಯೂನ್ಯತೆಗಳಿದ್ದರೂ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುತ್ತಿರುವುದು ಸಚಿವರ ಗಮನಕ್ಕೆ ಬಂದಿತ್ತು.

ಸಚಿವರು ಈ ಹಿನ್ನಲೆಯಲ್ಲಿ ಕೌನ್ಸಿಲಿಂಗ್ಗೆ ತಾತ್ಕಾಲಿಕ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ಕೌನ್ಸಿಲಿಂಗ್ ಪ್ರಕ್ರಿಯೆ ಕುರಿತ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಕಡತದಲ್ಲಿ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಸದರಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಮತ್ತು ಇಂದಿನ ದಿನದ ಎಲ್ಲಾ ಪ್ರಕ್ರಿಯೆ ರದ್ದುಗೊಳಿಸುವಂತೆ ಸಚಿವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ಗೆ ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಜಿಲ್ಲಾ ಉಪ ನಿರ್ದೇಶಕರ ಕಚೇರಿಯಲ್ಲಿ ಆನ್ಲೈನ್ ಮೂಲಕ ಕೌನ್ಸಿಲಿಂಗ್ ನಡೆಸಲಾಗುತ್ತಿತ್ತು. ಜನವರಿ 25ರಂದು ಪ್ರೌಢಶಾಲಾ ಶಿಕ್ಷಕರ ಕೌನ್ಸಿಲಿಂಗ್ ನಡೆಯಲಿದೆ.
ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಹಲವು ಜಿಲ್ಲೆಗಳಲ್ಲಿ ವಿರೋಧ ವ್ಯಕ್ತವಾಗಿದೆ. ಶಿಕ್ಷಕರನ್ನು ವರ್ಗಾವಣೆ ಮಾಡಬಾರದು ಎಂದು ಪೋಷಕರು ಪ್ರತಿಭಟನೆ ನಡೆಸಿದ್ದರು. ಇದರ ನಡುವೆಯೇ ಮಂಗಳವಾರ ಕೌನ್ಸಿಲಿಂಗ್ ನಡೆದಿತ್ತು. ಅದರಲ್ಲಿ ತಾಂತ್ರಿಕ ದೋಷಗಳು ಕಂಡು ಬಂದಿದ್ದು, ಸಚಿವರು ಇಡೀ ದಿನದ ಪ್ರಕ್ರಿಯೆ ರದ್ದುಗೊಳಿಸಿದ್ದಾರೆ.
ಮುಂದಿನ ಕೌನ್ಸಿಲಿಂಗ್ ಪ್ರಕ್ರಿಯೆಯ ಮಾಹಿತಿಯನ್ನು ಶಿಕ್ಷಣ ಇಲಾಖೆ ಶೀಘ್ರದಲ್ಲಿಯೇ ಪ್ರಕಟಿಸುವ ನಿರೀಕ್ಷೆ ಇದೆ. ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಆರಂಭವಾದರೆ ಕೌನ್ಸಿಲಿಂಗ್ ಪ್ರಕ್ರಿಯೆಯೂ ವಿಳಂಬವಾಗುವ ನಿರೀಕ್ಷೆ ಇದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications