BY Vijayendra: ಅನಂತಕುಮಾರ್ ಅವರನ್ನ ನೆನಪು ಮಾಡಿಕೊಂಡ ಬಿ ವೈ ವಿಜಯೇಂದ್ರ: ಕಾರಣವೇನು?
ಬೆಂಗಳೂರು, ನವೆಂಬರ್ 13: ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲೇ ಫುಲ್ ಆಕ್ಟಿವ್ ಆಗಿದ್ದು, ಮೊದಲ ದಿನವೇ ಕಾರ್ಯಕರ್ತರ ಮನೆಗೆ ಭೇಟಿ ನೀಡಿದ್ದ ವಿಜಯೇಂದ್ರ, ಇದೀಗ ಬಿಜೆಪಿ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದ ದಿ ಅನಂತಕುಮಾರ್ ಅವರನ್ನ ನೆನಪು ಮಾಡಿಕೊಂಡಿದ್ದಾರೆ.
ಹೌದು, ಮುತ್ಸದ್ಧಿ ಶ್ರೀ ಅನಂತಕುಮಾರರ ಪುಣ್ಯತಿಥಿಯ ಸ್ಮರಣಾರ್ಥ ಅದಮ್ಯ ಚೇತನ ಹಾಗೂ ಅನಂತಕುಮಾರ್ ಪ್ರತಿಷ್ಠನದ ಸಹಯೋಗದಲ್ಲಿ ʻಅನಂತ ಸ್ಮೃತಿ ನಡಿಗೆʼ ಶೀರ್ಷಿಕೆಯಡಿ ಪಂಜಿನ ಮೆರವಣಿಗೆ ಕಾರ್ಯಕ್ರಮವನ್ನ ವಿಜಯೇಂದ್ರ ಅವರು ಉದ್ಘಾಟಿಸಿ ಮಾತನಾಡಿ, ಬಿಜೆಪಿಗೆ ಭದ್ರ ಬುನಾದಿ ಹಾಕಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಕೇಂದ್ರದ ಹಿಂದಿನ ಸಚಿವ ಅನಂತಕುಮಾರ್ ಅವರ ಪರಿಶ್ರಮವನ್ನು ನಾವ್ಯಾರೂ ಮರೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಅನಂತಕುಮಾರ್ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲೇ ದೇಶಭಕ್ತಿಯ ಭಾವನೆಯೊಂದಿಗೆ ದೇಶದ ಅನೇಕ ಯುವಜನರಲ್ಲಿ ದೇಶಭಕ್ತಿಯ ಭಾವವನ್ನು ಬಿತ್ತಿದವರು ಅನಂತಕುಮಾರ್. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಿಜೆಪಿಗೆ ಅನಂತಕುಮಾರ್ ಅವರ ಸೇವೆ ಯಾವತ್ತೂ ಮರೆಯಲಸಾಧ್ಯ. ಅನಂತಕುಮಾರ್, ಯಡಿಯೂರಪ್ಪ ಅವರ ಸಂಘಟನಾ ಚಾತುರ್ಯ, ಪಕ್ಷಕ್ಕೆ ನೀಡಿದ ಕೊಡುಗೆಗಳನ್ನು ಮರೆಯುವುದು ಅಸಾಧ್ಯ ಎಂದು ಹೇಳಿದರು.
ಯಡಿಯೂರಪ್ಪ, ಅನಂತಕುಮಾರರ ನಡುವಿನ ಆತ್ಮೀಯತೆ, ಸಂಘಟನೆಗಾಗಿ ಅವರು ಪಡುತ್ತಿದ್ದ ಶ್ರಮವನ್ನು ಮೆಲುಕು ಹಾಕಿದ ಅವರು, ಅಂಥ ರಾಜಕಾರಣಿಗಳು ಈಗ ವಿರಳ ಎಂದು ತಿಳಿಸಿದರು. ಹಗಲಿರುಳೆನ್ನದೆ ಪಕ್ಷದ ಸಂಘಟನೆಗಾಗಿ ಯಡಿಯೂರಪ್ಪ ಮತ್ತು ಅನಂತಕುಮಾರ್ ಅವರು ದುಡಿದಿದ್ದರು ಎಂದು ವಿವರಿಸಿದರು.
ತೇಜಸ್ವಿನಿ ಅನಂತಕುಮಾರ್ ಅವರು ಕೂಡ ಸುಮ್ಮನೆ ಕುಳಿತವರಲ್ಲ. ಅನಂತಕುಮಾರ್ ಅವರ ಕುಟುಂಬದಿಂದ ಬಂದರೂ ತೇಜಸ್ವಿನಿಯವರು ಸಾಮಾನ್ಯರಲ್ಲಿ ಸಾಮಾನ್ಯರಂತೆ ಅದಮ್ಯ ಚೇತನದ ಮೂಲಕ ಲಕ್ಷಾಂತರ ಮಕ್ಕಳಿಗೆ ಎರಡು ತುತ್ತು ಅನ್ನ ಕೊಡುವ ಪುಣ್ಯ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಇವತ್ತು ನಾನು, ತೇಜಸ್ವಿ ಸೂರ್ಯ ಮತ್ತು ಅನೇಕ ಶಾಸಕರು ಇಲ್ಲಿ ನಿಂತು ಮಾತನಾಡಲು ಅನಂತಕುಮಾರರ ಪ್ರೇರಣೆಯೇ ಅದಕ್ಕೆ ಕಾರಣ ಎಂದು ಹೆಮ್ಮೆಯಿಂದ ತಿಳಿಸುವುದಾಗಿ ಹೇಳಿದರು.
ರಾಜಕಾರಣಿಗಳು ತಮ್ಮ ಲಾಭಕ್ಕಾಗಿ ಕೆಲಸ ಮಾಡುತ್ತಾರೆ. ಆದರೆ, ತೇಜಸ್ವಿನಿ ಅವರ ಸಮಾಜಮುಖಿ ಸೇವಾಕಾರ್ಯ ಅಭಿನಂದನೀಯ ಎಂದು ತಿಳಿಸಿದರು. ಅನಂತಕುಮಾರ್ ಅವರು ನಮ್ಮ ಮುಂದೆ ಇಲ್ಲದಿದ್ದರೂ ಅವರ ಮಾರ್ಗದರ್ಶನ, ಪ್ರೇರಣೆಯೊಂದಿಗೆ ನಾವು ನಮ್ಮಲ್ಲಿ ದೇಶಭಕ್ತಿ ಜೊತೆಗೆ ಸಮಾಜಸೇವೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು. ಇದೇವೇಳೆ ಅವರು ದೀಪಾವಳಿ ಶುಭಾಶಯ ಕೋರಿದರು.
ಅದಮ್ಯ ಚೇತನದ ಅಧ್ಯಕ್ಷ ಕೃಷ್ಣ ಭಟ್, ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ಸಂಸದ ಮತ್ತು ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ, ಮಾಜಿ ಶಾಸಕ ಗುಂಡ್ಲುಪೇಟೆ ನಿರಂಜನ್, ಶಾಸಕರಾದ ರಾಮಮೂರ್ತಿ, ರವಿ ಸುಬ್ರಹ್ಮಣ್ಯ, ಮಾಜಿ ಮೇಯರ್ ಕಟ್ಟೆ ಸುಬ್ರಹ್ಮಣ್ಯ ಅವರು ಭಾಗವಹಿಸಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications