Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ಸಂಭ್ರಮದಿಂದ ಈದ್ ಅಲ್-ಅಧಾ, ದೇವಶಯನಿ ಏಕಾದಶಿ ಆಚರಣೆ

ಬೆಂಗಳೂರು, ಜೂನ್‌ 29: ನಾಡಿನಾದ್ಯಂತ ಗುರುವಾರ ಮುಸ್ಲಿಂ ಬಾಂಧವರು ಈದ್ ಅಲ್-ಅಧಾವನ್ನು ಸಂಭ್ರಮದಿಂದ ಆಚರಿಸಿದರು. ಮುಸ್ಲಿಂ ಹಬ್ಬ ಆಷಾಢ ಏಕಾದಶಿ ಅಥವಾ ದೇವಶಯನಿ ಏಕಾದಶಿ ದಿನವೇ ಬಂದಿರುವುದರಿಂದ ಹಲವು ವಿಷ್ಣು ದೇವಾಲಯಗಳಲ್ಲಿ ಭಕ್ತರು ವಿಶೇಷ ಪೂಜೆಯನ್ನು ಸಲ್ಲಿಸಿದರು.

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ರಾಜ್ಯದ ವಸತಿ ಸಚಿವ ಬಿಝಡ್ ಜಮೀರ್ ಅಹಮದ್ ಖಾನ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಈದ್ ಹಬ್ಬದ ಶುಭ ಸಂದರ್ಭದಲ್ಲಿ ಜನತೆಗೆ ಅವರು ಶುಭ ಕೋರಿದರು.

Eid al-Adha, Devashayani Ekadashi celebrations in Karnataka with gusto

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸಮಾಜದಲ್ಲಿ ದ್ವೇಷ ಹರಡುವವರಿಗೆ ಮಹತ್ವ ನೀಡಬೇಡಿ. ನಾವೆಲ್ಲರೂ ವಿವಿಧ ಧರ್ಮ, ಜಾತಿಗಳಿಗೆ ಸೇರಿದವರಾಗಿದ್ದೇವೆ. ಆದರೆ ನಾವೆಲ್ಲರೂ ಮನುಷ್ಯರು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿ ಮತ್ತು ವಿಶ್ವಾಸದಿಂದ ಬದುಕಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ನಮ್ಮೊಳಗೆ ದ್ವೇಷವನ್ನು ಹುಟ್ಟುಹಾಕುವ ಅನೇಕ ಶಕ್ತಿಗಳಿವೆ. ಆ ಶಕ್ತಿಗಳು ಉದ್ದೇಶಪೂರ್ವಕವಾಗಿ ಇದನ್ನು ಮಾಡುತ್ತವೆ. ನಾವು ಮನ್ನಿಸಬಾರದು ಅಥವಾ ಅದಕ್ಕೆ ಪ್ರಾಮುಖ್ಯತೆ ನೀಡಬಾರದು. ಜನರು ಪ್ರೀತಿ ಮತ್ತು ವಿಶ್ವಾಸದಿಂದ ಮನುಷ್ಯರಂತೆ ಬದುಕುವ ವಾತಾವರಣವನ್ನು ನಾವು ನಿರ್ಮಿಸಬೇಕು ಎಂದು ಅವರು ಹೇಳಿದರು.

ಬಕ್ರೀದ್ ಕುರಿತು ಮಾತನಾಡಿದ ಅವರು, ಹಬ್ಬ ತ್ಯಾಗ ಬಲಿದಾನದ ಸಂಕೇತವಾಗಿದೆ. ಕರಾವಳಿ ಕರ್ನಾಟಕ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಪ್ರದೇಶ ಹಾಗೂ ಹಳೆ ಮೈಸೂರು ಭಾಗದಲ್ಲಿ ಈದ್ ಅಲ್-ಅಧಾವನ್ನು ಸಂಭ್ರಮದಿಂದ ಆಚರಿಸಲಾಯಿತು. ಉಡುಪಿ, ಮಂಗಳೂರು, ಕಾಸರಗೋಡಿನ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Eid al-Adha, Devashayani Ekadashi celebrations in Karnataka with gusto

ಕರ್ನಾಟಕ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ನಂತರ ಜನರಿಗೆ ಶುಭಾಶಯ ಕೋರಿದರು. ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಜನರು ಈದ್ ಅಲ್-ಅಧಾ (ಬಕ್ರೀದ್) ಅನ್ನು ಸಾಂಪ್ರದಾಯಿಕ ಉತ್ಸಾಹ, ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಿದರು.

ನಗರದ ಲೈಟ್ ಹೌಸ್ ಬೆಟ್ಟದ ಪ್ರಸಿದ್ಧ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಬಾವುಟ ಗುಡ್ಡದಲ್ಲಿರುವ ಈದ್ಗಾ ಮಸೀದಿ, ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ ಹಾಗೂ ದಕ್ಷಿಣ ಕನ್ನಡದ ವಿವಿಧ ಮಸೀದಿಗಳಲ್ಲಿ ಈದ್ ನಮಾಝ್ ಮತ್ತು ಖುತ್ಬಾ ನಡೆಯಿತು. ನಮಾಜ್ ಬಳಿಕ ಜನರು ಪರಸ್ಪರ ಆಲಂಗಿಸಿಕೊಂಡು ಹಸ್ತಲಾಘವ ಮಾಡುವ ಮೂಲಕ 'ಈದ್ ಮುಬಾರಕ್' ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ವಿವಿಧ ಮಸೀದಿಗಳಲ್ಲಿ ಧಾರ್ಮಿಕ ಮುಖಂಡರು ಭಕ್ತರಿಗೆ ಈದ್ ಸಂದೇಶ ನೀಡಿದರು. ಕಳೆದ ಕೆಲವು ದಿನಗಳಲ್ಲಿ ಮಳೆಯು ಬಕ್ರೀದ್‌ನ ಉತ್ಸಾಹವನ್ನು ಕುಗ್ಗಿಸಲಿಲ್ಲ, ಇದನ್ನು 'ತ್ಯಾಗದ ಹಬ್ಬ' ಎಂದೂ ಕರೆಯುತ್ತಾರೆ. ದೇವಶಯನಿ ಏಕಾದಶಿಯ ಶುಭ ಸಂದರ್ಭದಲ್ಲಿ ರಾಜ್ಯದ ವಿಷ್ಣು ದೇಗುಲಗಳು ಸಂಭ್ರಮದಿಂದ ಕಂಗೊಳಿಸಿದವು. ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ಇಸ್ಕಾನ್ ನ ಚೈತನ್ಯದಾಸ ಮಾತನಾಡಿ, ಕನಕಪುರ ರಸ್ತೆಯಲ್ಲಿರುವ ಇಸ್ಕಾನ್ ದೇವಸ್ಥಾನದಲ್ಲಿ ಜಪ, ಯಜ್ಞ ನಡೆಯಿತು ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+