ಕುಮಾರಸ್ವಾಮಿ ಸಂಪುಟಕ್ಕೆ ಕಾಂಗ್ರೆಸ್ನ ಎಂಟು ಹೊಸ ಸಚಿವರು ಸೇರ್ಪಡೆ
ಬೆಂಗಳೂರು, ಡಿಸೆಂಬರ್ 22: ಎಂಟು ಜನ ಕಾಂಗ್ರೆಸ್ ಶಾಸಕರು ಇಂದು ಸಚಿವರಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಎಂಟೂ ಜನ ಹೊಸ ಸಚಿವರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಹೊಸ ಸಚಿವರ ಪದಗ್ರಹಣ ಸಮಾರಂಭದಲ್ಲಿ ಸಿಎಂ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಜರಿದ್ದು, ಎಲ್ಲ ಹೊಸ ಸಚಿವರಿಗೆ ಹೂಗುಚ್ಛ ನಿಡಿ ಶುಭಾಶಯ ಕೋರಿದರು.

ಕಾಂಗ್ರೆಸ್ನ ಹಿರಿಯ ನಾಯಕರುಗಳಾದ ಡಿ.ಕೆ.ಶಿವಕುಮಾರ್ ಸೇರಿ ಇನ್ನೂ ಹಲವು ಸಚಿವರು ಪದಗ್ರಹಣ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಈ.ತುಕಾರಾಂ, ಪರಮೇಶ್ವರ ನಾಯ್ಕ, ಸಿ.ಎಸ್.ಶಿವಳ್ಳಿ, ಎಂ.ಟಿ.ಬಿ.ನಾಗರಾಜು, ರಹೀಂಖಾನ್, ಆರ್.ಬಿ.ತಿಮ್ಮಾಪುರ ಅವರುಗಳು ಪ್ರಮಾಣ ವಚನ ಸ್ವೀಕರಿಸಿದರು.












Click it and Unblock the Notifications