ಕಲಿ ಚಿತ್ರ ನಿರ್ಮಾಪಕ ಕಮ್ ಶಾಸಕ ಮನೋಹರ್ ಗೆ ಅನರ್ಹತೆ ಭೀತಿ!
ಶಿವರಾಜ್ ಕುಮಾರ್, ಸುದೀಪ್ ಅಭಿನಯದ ಪ್ರೇಮ್ ನಿರ್ದೇಶನದ ಕಲಿ ಚಿತ್ರದ ನಿರ್ಮಾಪಕ ಕಮ್ ಜೆಡಿಎಸ್ ಎಂಎಲ್ ಸಿ ಸಿ. ಆರ್ ಮನೋಹರ್ ಅನರ್ಹತೆ ಭೀತಿಯಲ್ಲಿದ್ದಾರೆ.
ಬೆಂಗಳೂರು, ಜೂನ್ 02: ನಟ ಶಿವರಾಜ್ ಕುಮಾರ್, ಸುದೀಪ್ ಅಭಿನಯದ ಪ್ರೇಮ್ ನಿರ್ದೇಶನದ ಕಲಿ ಚಿತ್ರದ ನಿರ್ಮಾಪಕ ಕಮ್ ಜೆಡಿಎಸ್ ಎಂಎಲ್ ಸಿ ಸಿ. ಆರ್ ಮನೋಹರ್ ಅನರ್ಹತೆ ಭೀತಿಯಲ್ಲಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಡಿ. ಎಚ್.ಶಂಕರಮೂರ್ತಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿರುವ ಬೆನ್ನಲ್ಲೆ ಕಾಂಗ್ರೆಸ್, ಜೆಡಿಎಸ್ ಎಂಎಲ್ಸಿಗಳ ವಿರುದ್ಧ ನೋಟಿಸ್ ಜಾರಿಗೊಳಿಸಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ನ 8 ಮಂದಿ ಸದಸ್ಯರು ತಮ್ಮ ಸದಸ್ಯತ್ವ ಕಳೆದುಕೊಂಡು ಅನರ್ಹರಾಗುವ ಭೀತಿಯಲ್ಲಿದ್ದಾರೆ.

ಕಾಂಗ್ರೆಸ್ಸಿನಿಂದ ಎಸ್. ರವಿ, ಎಂ.ಡಿ.ಲಕ್ಷ್ಮಿನಾರಾಯಣ, ಬೋಸ್ರಾಜ್, ಎಸ್.ರಘು ಆಚಾರ್, ಆರ್.ಬಿ ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ ಹಾಗೂ ಜೆಡಿಎಸ್ ಸದಸ್ಯರಾದ ಅಪ್ಪಾಜಿಗೌಡ, ಸಿ.ಆರ್.ಮನೋಹರ್ ವಿರುದ್ಧ ಪದ್ಮನಾಭ ರೆಡ್ಡಿ ಎಂಬುವರು ಸಲ್ಲಿಸಿದ್ದ ದೂರಿಗೆ ಈಗ ಬೆಲೆ ಬಂದಿದೆ.
8 ಮಂದಿ ಶಾಸಕರಿಗೆ ನೋಟಿಸ್ ಜಾರಿ ಮಾಡಿರುವ ಶಂಕರಮೂರ್ತಿ ಅವರು ಜೂ. 3 ರೊಳಗೆ ಉತ್ತರ ನೀಡಬೇಕು. ಇಲ್ಲದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ನಿಮ್ಮ ಸದಸ್ಯತ್ವವನ್ನು ಏಕೆ ಅನರ್ಹಗೊಳಿಸಬಾರದೆಂದು ಪ್ರಶ್ನಿಸಿದ್ದಾರೆ.
ಏನಿದು ಗೊಂದಲ: ಕಳೆದ ಬಿಬಿಎಂಪಿ ಮೇಯರ್, ಬಳ್ಳಾರಿ ಪಾಲಿಕೆ ಚುನಾವಣೆ ಈ 8 ಮಂದಿ ಸದಸ್ಯರು ಬೆಂಗಳೂರಿನ ನಿವಾಸಿಗಳೆಂದು ಹೇಳಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದರು. ಆ ಬಳಿಕ ತಮ್ಮ ತಮ್ಮ ಊರುಗಳಿಂದ ಓಡಾಡುತ್ತಿದ್ದೇವೆ ಎಂದು ಹೇಳಿ ಲಕ್ಷಾಂತರ ರೂ. ಪ್ರಯಾಣ ಭತ್ಯೆಯನ್ನು ಸರ್ಕಾರದಿಂದ ಪಡೆದಿದ್ದರು.
ಈ ರೀತಿ ಸುಳ್ಳು ಹೇಳಿಕೆ ನೀಡಿ ಪ್ರಯಾಣ ಭತ್ಯೆ ಪಡೆದರೆ ಅಂತಹ ಸದಸ್ಯರ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವ ಅವಕಾಶವಿದೆ. ಈ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ದೂರು ಸಲ್ಲಿಸಿದ್ದರು.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications