ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಸ್‌-ಲಾರಿ ಡಿಕ್ಕಿ: 13 ಜನರ ದಾರುಣ ಸಾವು

|
Google Oneindia Kannada News

ಮುಳುಬಾಗಿಲು, ಸೆ. 8: ತಾಲೂಕಿನ ಕೊಪ್ಪಲಮಡಗು ಎಂಬಲ್ಲಿ ಮರಳು ಸಾಗಾಟದ ಲಾರಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಸೋಮವಾರ ಮಧ್ಯಾಹ್ನ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ 13 ಜನರು ದಾರುಣವಾಗಿ ಮೃತಪಟ್ಟಿದ್ದಾರೆ.

ಡಿಕ್ಕಿ ರಭಸಕ್ಕೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಎಂಟು ಜನರನ್ನು ಆಸ್ಪತ್ರಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.(ಕಂಬಾಲಪಲ್ಲಿ ಪ್ರಕರಣ: ಎಲ್ಲಾ 32 ಆರೋಪಿಗಳು ಖುಲಾಸೆ)

kolar

ಬೆಂಗಳೂರಿನಿಂದ ತಿರುಪತಿಗೆ ಸಂಚರಿಸುತ್ತಿದ್ದ ಬಸ್‌ಗೆ ಮುಳಬಾಗಿಲು ಬಳಿ ಮರಳು ಲಾರಿ ಡಿಕ್ಕಿಯಾಗಿದೆ. ಬಸ್‌ನಲ್ಲಿದ್ದ ಉಳಿದ ಪ್ರಯಾಣಿಕರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಮುಳಬಾಗಿಲು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳನ್ನು ಮುಳುಬಾಗಿಲು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕ ಮತ್ತು ನಿರ್ವಾಹಕರ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

English summary
While 8 persons were charred to death, some persons injured in a bus accident near Mulubagilu. Sand truck and ksrtc bus struck in the highway on Monday afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X