ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಮತ್ತೊಂದು ಚುನಾವಣೆ ಪ್ರಕಟ: ಡಿಸೆಂಬರ್ 12 ಕ್ಕೆ ಮತದಾನ

|
Google Oneindia Kannada News

ಬೆಂಗಳೂರು, ನವೆಂಬರ್ 25: ಬಿಜೆಪಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾದ ಉಪಚುನಾವಣೆ ರಂಗೇರಿರುವ ಹೊತ್ತಿನಲ್ಲಿಯೇ ಚುನಾವಣಾ ಆಯೋಗವು ಮತ್ತೊಂದು ಚುನಾವಣೆಗೆ ಅಧಿಸೂಚನೆ ಹೊರಡಿಸಿದೆ.

ರಾಜ್ಯಸಭಾ ಸದಸ್ಯರಾಗಿದ್ದ ರಾಮಮೂರ್ತಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಸ್ಥಾನಕ್ಕೆ ಕೇಂದ್ರ ಚುನಾವಣೆ ಆಯೋಗವು ಚುನಾವಣೆ ದಿನಾಂಕ ಘೋಷಿಸಿದ್ದು, ಕರ್ನಾಟಕ ವಿಧಾನಸಭೆಯು ಈ ಕುರಿತು ಇಂದು ಅಧಿಸೂಚನೆ ಹೊರಡಿಸಿದೆ.

ಉಪ ಚುನಾವಣೆ ದಿನ ಮರುನಿಗದಿ: ಡಿ. 5ಕ್ಕೆ ಚುನಾವಣೆಉಪ ಚುನಾವಣೆ ದಿನ ಮರುನಿಗದಿ: ಡಿ. 5ಕ್ಕೆ ಚುನಾವಣೆ

ಅಧಿಸೂಚನೆ ಹೊರಡಿಸಿರುವಂತೆ ಡಿಸೆಂಬರ್ 2 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 3 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುತ್ತದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕ ಡಿಸೆಂಬರ್ 5 ಆಗಿದೆ.

Election Announced For Rajya Sabha Seat

ಅವಶ್ಯಕತೆ ಇದ್ದಲ್ಲಿ ಡಿಸೆಂಬರ್ 12 ರಂದು ಮತದಾನ ನಡೆಯಲಿದೆ. ಬೆಳಿಗ್ಗೆ 9 ರಿಂದ ಸಂಜೆ 4 ವರೆಗೆ ಮತದಾನ ನಡೆಯಲಿದೆ. ಅದೇ ದಿನ ಮತಗಳ ಎಣಿಕೆಯೂ ನಡೆಯಲಿದೆ. ಚುನಾವಣಾ ಪ್ರಕ್ರಿಯೆಯು ಡಿಸೆಂಬರ್ 16 ರಕ್ಕೆ ಕೊನೆ ಆಗಲಿದೆ.

ನಿವೃತ್ತ ಪೊಲೀಸ್ ಅಧಿಕಾರಿ ರಾಮಮೂರ್ತಿ ಅವರು ಕಳೆದ ತಿಂಗಳಷ್ಟೆ ಕಾಂಗ್ರೆಸ್‌ ನಿಂದ ರಾಜ್ಯಸಭೆ ಗೆ ಆಯ್ಕೆ ಆಗಿದ್ದರು. ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಈ ಚುನಾವಣೆಗೆ ಅವರು ಬಿಜೆಪಿ ಯಿಂದ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ.

English summary
Election announced for one Rajya Sabha seat. December 2 will be last date for filing nomination. December 12th is the voting day. result will be announced that day only.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X